ಹಲವು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಸಿಎಲ್
ಬೆಂಗಳೂರು, ಆಗಸ್ಟ್ 29 : ಕರ್ನಾಟಕ ವಿದ್ಯುತ್ ನಿಗಮ ನಿಯಮಿತವು (ಕೆಪಿಸಿಎಲ್) ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29/9/2016.
ಸಹಾಯಕ (ಆಡಳಿತ) 44 ಹುದ್ದೆ, ಸಹಾಯಕ (ಲೆಕ್ಕ) 41 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗಮದ ವೆಬ್ಸೈಟ್ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯಲ್ಲಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.[KPSC ನೇಮಕಾತಿ ವಿವರಗಳು]

ವಿದ್ಯಾರ್ಹತೆ : ಸಹಾಯಕ (ಆಡಳಿತ) ಯುಜಿಸಿಯಿಂದ ಅನುಮೋದಿಸಲ್ಪಟ್ಟ ಕರ್ನಾಟಕದಲ್ಲಿನ ಅಂಗೀಕೃತ ವಿಶ್ವವಿದ್ಯಾಲಯದ 3 ವರ್ಷಗಳ ನಿಯತ ಬಿಎ/ಬಿಕಾಂ/ಬಿಎಸ್ಸಿ ಪದವಿ ಪಡೆದಿರಬೇಕು.[ವೆಬ್ ಸೈಟ್ ವಿಳಾಸ]
ಸಹಾಯಕ (ಲೆಕ್ಕ) ಯುಜಿಸಿಯಿಂದ ಅನುಮೋದಿಸಲ್ಪಟ್ಟ ಕರ್ನಾಟಕದಲ್ಲಿನ ಅಂಗೀಕೃತ ವಿಶ್ವವಿದ್ಯಾಲಯದ 3 ವರ್ಷಗಳ ನಿಯತ ಬಿಕಾಂ ಪದವಿ ಪಡೆದಿರಬೇಕು.

ಮರುಪಾವತಿಸದ ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕ ಪಾವತಿ ಮಾಡಬೇಕು. ಎಸ್ಸಿ/ಎಸ್ಟಿ/ಪ್ರವರ್ಗ -1 ಅಭ್ಯರ್ಥಿಗಳಿಗೆ 100 ರೂ.. ಅಂಚೆ ಸೇವಾ ಶುಲ್ಕ 15 ರೂ. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]
ಮಾಜಿ ಸೈನಿಕರು, ಯುದ್ಧದಲ್ಲಿ ಮಡಿದ ಅಥವ ವಿಕಲಚೇತನರಾದ ಯೋಧರ ಮಕ್ಕಳು, ವಿಕಲಚೇತನರು 50 ರೂ. (35 ರೂ. ಪ್ರಕ್ರಿಯೆ ಶುಲ್ಕ, ರೂ.15 ಅಂಚೆ ಸೇವಾ ಶುಲ್ಕ). ಅರ್ಜಿ ಶುಲ್ಕವನ್ನು ಕರ್ನಾಟಕದ ಯಾವುದೇ ಗಣಕೀಕೃತ ಅಂಚೆ ಕಚೇರಿಯ ಮೂಲಕ ಪಾವತಿ ಮಾಡಬಹುದು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications