ಕೆಪಿಎಸ್ಸಿಯಲ್ಲಿ 1543 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು, ನವೆಂಬರ್ 27: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಗ್ರೂಪ್ ಸಿ ವೃಂದದ ತಾಂತ್ರಿಕ/ ತಾಂತ್ರಿಕೇತರ ಹುದ್ದೆಗಳ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳು ಸೇರಿ ಒಟ್ಟು 1543 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 28-12-2017 ರಾತ್ರಿ 11.45ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ಆಯಾ ಹುದ್ದೆಗಳ ಮುಂದೆ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಹೊಂದಿರಲೇಬೇಕು.
ಪದವಿ ಪೂರ್ವ ವಿದ್ಯಾರ್ಹತೆಯುಳ್ಳ ಹುದ್ದೆಗಳು: ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಆರ್ಟ್ ಅಂಡ್ ಕ್ರಾಫ್ಟ್ ಶಿಕ್ಷಕರು, ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮಾದರಿ ವಸತಿ ಶಾಲೆ (ನವೋದಯ), ಗಳಲ್ಲಿನ ಕಲಾ ಶಿಕ್ಷಕರು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಆಶ್ರಮ ಶಾಲಾ ಶಿಕ್ಷಕರು.
ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯುಳ್ಳ ಹುದ್ದೆಗಳು: ಮೇಲಿನ ಹುದ್ದೆಗಳನ್ನು ಹೊರೆತುಪಡಿಸಿ ಇನ್ನುಳಿದ ಆಯಾ ಹುದ್ದೆಗಳಿಗೆ ಅಭ್ಯರ್ಥಿಗಳು ಸಂಬಂಧಿಸಿದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸರಬೇಕು.
ಆಯ್ಕೆ ವಿಧಾನ : ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ತಾಂತ್ರಿಕ ಹುದ್ದೆಯ ಪರೀಕ್ಷಾ ವಿಧಾನ
ತಾಂತ್ರಿಕ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯು ವಸ್ತು ನಿಷ್ಠ ಬಹು ಆಯ್ಕೆ ಮಾದರಿಯಲ್ಲಿದ್ದು, ಋಣಾತ್ಮಕ ಮೌಲ್ಯಮಾಪನವಿರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಳೆಯಲಾಗುವುದು.

ತಾಂತ್ರಿಕೇತರ ಹುದ್ದೆಯ ಪರೀಕ್ಷಾ ವಿಧಾನ
ತಾಂತ್ರಿಕೇತರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯು ವಸ್ತು ನಿಷ್ಠ ಬಹು ಆಯ್ಕೆ ಮಾದರಿಯಲ್ಲಿದ್ದು, ಋಣಾತ್ಮಕ ಮೌಲ್ಯಮಾಪನವಿರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ
0.25 ಅಂಕಗಳನ್ನು ಕಳೆಯಲಾಗುವುದು.

ವಯೋಮಿತಿ
ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷಗಳು ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಅರ್ಜಿ ಶುಲ್ಕ
ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 600 ರು. ಪ್ರವರ್ಗ 2(ಎ), 2(ಬಿ), 3(ಎ) ಮತ್ತು 3(ಬಿ) ಅಭ್ಯರ್ಥಿಗಳಿಗೆ 300 ರು. ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50ರು. ನಿಗದಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ












Click it and Unblock the Notifications