ಡಿಸೆಂಬರ್ 29ರಂದು 384 ಕೆಎಎಸ್ ಹುದ್ದೆಗಳಿಗೆ ಪೂರ್ವಭಾವಿ ಮರುಪರೀಕ್ಷೆ: ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳು
KPSC Prelims Re-Exam: ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಾಗುವ ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಯು ನಾಳೆ (ಡಿಸೆಂಬರ್ 29) ನಡೆಯಲಿದೆ. ಈ ಪರೀಕ್ಷೆಗೆ ಬರುವ ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕಾದ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಅಭ್ಯರ್ಥಿಗಳು ತರಬೇಕಾದ ದಾಖಲೆಗಳು
* ಡೌನ್ಲೋಡ್ ಮಾಡಿಕೊಂಡ ಮರು ಪರೀಕ್ಷೆಯ ಪ್ರವೇಶ ಪತ್ರ
* ಭಾವಚಿತ್ರವಿರುವ ಮೂಲ ಗುರುತಿನ ಚೀಟಿ/ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪಾನ್ಕಾರ್ಡ್, ಪಾಸ್ಪೋರ್ಟ್, ಸರ್ಕಾರಿ ನೌಕರರ ಐಡಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಹಾಜರುಪಡಿಸಬೇಕು.

ಯಾವೆಲ್ಲಾ ನಿರ್ಬಂಧ?: ಅಭ್ಯರ್ಥಿಗಳು ಮೊಬೈಲ್, ಕ್ಯಾಲ್ಕುಕಲೇಟರ್, ಸ್ಮಾರ್ಟ್ವಾಚ್, ಬ್ಲೂಟೂತ್, ವೈಟ್ ಫ್ಲೂಯಿಡ್, ವೈರ್ ಲೆಸ್ ಸೆಟ್, ಪೇಪರ್, ಬುಕ್ಸ್ ಇತರೆ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳನ್ನು ತರುವಂತಿಲ್ಲ. ಅಲ್ಲದೆ, ಅಭ್ಯರ್ಥಿಗಳು ಶೂ, ಸಾಕ್ಸ್, ಸ್ವೆಟರ್ ಮತ್ತು ಜರ್ಕಿನ್, ತುಂಬು ತೋಳಿನ ಷರ್ಟ್ ಮತ್ತು ಫೇಸ್ ಮಾಸ್ಕ್ ಹಾಗೂ ಇತರೆ ವಸ್ತುಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಸಾಧಾರಣ ಚಪ್ಪಲಿಯನ್ನು ಮಾತ್ರ ಧರಿಸಿ ಪರೀಕ್ಷೆಗೆ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಜಾಮರ್ ಅಳವಡಿಕೆ: ಮೊಬೈಲ್ ಬ್ಲೂಟೂತ್ ಮತ್ತು ಇತರೆ ಆಧುನಿಕ ಸಂವಹನ ಉಪಕರಣಗಳನ್ನು ಬಳಸಿ ಪರೀಕ್ಷೆಯಲ್ಲಿ ಅಕ್ರಮಗಳನ್ನು ಎಸಗುವುದನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಕೆ ಮಾಡಲಾಗುವುದು. ಪ್ರತಿ ಕೊಠಡಿಯಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಜೊತೆಗೆ ಫೇಸ್ ರೆಕಗ್ನೈಸೇಷನ್ ಹಾಗೂ ಬಯೋಮೆಟ್ರಿಕ್ ಹಾಜರಾತಿಯನ್ನು ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕವಾದ ಸಿಬ್ಬಂದಿ ಕೈಗೊಳ್ಳುವರು.
ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಅಭ್ಯರ್ಥಿಗಳನ್ನು ಪೂರ್ಣ ಪ್ರಮಾಣದಲ್ಲಿ ತಪಾಸಣೆಗೆ ಒಳಪಡಿಸಬೇಕು. ಇದಕ್ಕಾಗಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಫ್ರಿಸ್ಕಿಂಗ್ ತಂಡಗಳನ್ನು ರಚಿಸುವಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
384 ಗೆಜೆಟೆಡ್ ಪೊಬೆಷನರ್ಸ್ ಹುದ್ದೆಗಳ ನೇಮಕಾತಿಗೆ ಕಳೆದ ಆಗಷ್ಟಸ್ 27ರಂದು ಪೂರ್ವಭಾವಿ ಪರೀಕ್ಷೆ ನಡೆಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಡಿಸೆಂಬರ್ 29ರಂದು ಮತ್ತೊಮ್ಮೆ ಮರು ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತಿದೆ. ಅಭ್ಯರ್ಥಿಗಳು ಕೆಪಿಎಸ್ಸಿ ವೆಬ್ ಸೈಟ್ ಮೂಲಕ ಹೊಸದಾಗಿ ಮರು ಪರೀಕ್ಷೆ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
ಹೊಸ ಪ್ರವೇಶ ಪತ್ರದಲ್ಲಿ ನಮೂದಿಸಲಾಗಿರುವ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಬೇಕು. ತಪ್ಪದೇ ಕೆಪಿಎಸ್ಸಿ ಸೂಚಿಸಿರುವ ಎಲ್ಲಾ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಭ್ಯರ್ಥಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ದೃಷ್ಠಿಯಿಂದ ಡಿಸೆಂಬರ್ 29ರಂದು ಪರೀಕ್ಷೆ ನಡೆಯುವ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ಸೆಕ್ಷನ್ 114 ವಿಧಿಸಿ ನಿಷೇಧಾಜ್ಞೆ ಜಾರಿ ಮಾಡಿ, ಆದೇಶ ಹೊರಡಿಸಲಾಗಿದೆ.
ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಜೆರಾಕ್ಸ್, ಕಂಪ್ಯೂಟರ್ ಹಾಗೂ ಇಂಟರ್ನೆಟ್ ಸೆಂಟರ್ಗಳನ್ನು ತೆರೆಯುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪಶ್ನೆ ಪತ್ರಿಕೆ ಹಾಗೂ ಒಎಂಆರ್ಗಳನ್ನು ಕೊಂಡೊಯ್ಯಲು ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯಿಂದ ಹೆಲ್ತ್ ಸ್ಕ್ರೀನಿಂಗ್ ಕೌಂಟರ್ ಸ್ಥಾಪಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸಭೆಯಲ್ಲಿ ಮಾಹಿತಿ ನೀಡಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications