KPWD Recruitment: ಕರ್ನಾಟಕ ಲೋಕೋಪಯೋಗಿ ಇಲಾಖೆಯಿಂದ ಭರ್ಜರಿ ನೇಮಕಾತಿ
ಬೆಂಗಳೂರು, ಸೆಪ್ಟಂಬರ್ 25: ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆಯು (KPWD) ತನ್ನಲ್ಲಿ ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಸರ್ಕಾರಿ ಉದ್ಯೋಗ ಪಡೆಯಲು ಇಚ್ಛಿಸುವವರಿಗೆ ಸುವರ್ಣ ಅವಕಾಶ ಇದಾಗಿದೆ. ಅರ್ಹ ಅಭ್ಯರ್ಥಿಗಳು ನವೆಂಬರ್ 4ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ನೇಮಕಾತಿ ಅಧಿಸೂಚನೆ ಮಾಹಿತಿ ನೀಡಿದೆ.
ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆಯಲ್ಲಿ ಒಟ್ಟು 42 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಆಸಕ್ತರು ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಇದಕ್ಕು ಮೊದಲು ನೀವು ನೇಮಕಾತಿ ಹೇಗೆಲ್ಲ ನಡೆಯುತ್ತಿದೆ. ಮಾಸಿಕ ವೇತನ, ವಿದ್ಯಾರ್ಹತೆ ಸೇರಿದಂತೆ ನೇಮಕಾತಿ ಎಲ್ಲ ಮಾಹಿತಿ ಮುಂದೆ ತಿಳಿಯಿರಿ.

ನೇಮಕಾತಿ ಪೂರ್ಣ ಮಾಹಿತಿ
ನೇಮಕಾತಿ ಸಂಸ್ಥೆ ಹೆಸರು: ಕರ್ನಾಟಕ ಲೋಕೋಪಯೋಗಿ ಇಲಾಖೆ
ಹುದ್ದೆಗಳ ಹೆಸರು: ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್
ಒಟ್ಟು ಹುದ್ದೆಗಳು: 42
ವಯಸ್ಸಿನ ಮಿತಿ: ಗರಿಷ್ಠ 35 ವರ್ಷ
ಮಾಸಿಕ ವೇತನ: ನಿಯಮಾನುಸಾರ
ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್
ಪೋಸ್ಟಿಂಗ್: ಕರ್ನಾಟಕ
ಶೈಕ್ಷಣಿಕ ಅರ್ಹತೆ ವಿವರ
ಅರ್ಜಿ ಸಲ್ಲಿಸಲಿರುವ ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮತ್ತು ಮಂಡಳಿಯಿಂದ ಕಡ್ಡಾಯವಾಗಿ ಎಂಜಿನಿಯರಿಂಗ್, ಡಿಪ್ಲೊಮಾ ಕೋರ್ಸ್ನಲ್ಲಿ ಪದವಿ ಪಡೆದಿರಬೇಕು ಎಂದು ಕರ್ನಾಟಕ ಲೋಕೋಪಯೋಗಿ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ವಯಸ್ಸಿನ ಮಿತಿ ಎಷ್ಟಿರಬೇಕು?
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ನವೆಂಬರ್ 4ಕ್ಕೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು ಎಂದು ನಿಗದಿ ಮಾಡಲಾಗಿದೆ. ಜಾತಿ ಮೀಸಲಾತಿಗೆ ಅನುಗುಣವಾಗಿ ಎಸ್ಸಿ, ಎಸ್ಟಿ ಮತ್ತು ಪ್ರವರ್ಗ -1 ಅಭ್ಯರ್ಥಿಗಳಿಗೆ 05 ವರ್ಷ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಹಾಗೂ ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು ಮೂರು ವರ್ಷ ಸಡಿಲಿಕೆ ಸಿಗಲಿದೆ.
ಅರ್ಜಿ ಶುಲ್ಕದ ವಿವರ
ಅರ್ಜಿ ಸಲ್ಲಿಸಲಿರುವ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿ, ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 300 ರೂಪಾಯಿ, ಸಾಮಾನ್ಯ ಅಭ್ಯರ್ಥಿಗಳು 600 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಈ ಹಣವನ್ನು ಅಭ್ಯರ್ಥಿಗಳನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ಅಭ್ಯರ್ಥಿಗಳ ಆಯ್ಕೆ ಹೇಗೆ
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳಿಗೆ ಮೊದಲು ಇಲಾಖೆ ವತಿಯಿಂದ ಲಿಖಿತ ಪರೀಕ್ಷೆ ನಡೆಯಲಿದೆ. ನಂತರ ಪರ್ಸನಾಲಿಟಿ ಟೆಸ್ಟ್ ಕೈಗೊಂಡು ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆ ಆದವರಿಗೆ ನಿಯಮಾನುಸಾರ ಮಾಸಿಕ ವೇತನ ಸಹಿತ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಕೂಡಲೇ ಆನ್ಲೈನ್ ಮೂಲಕ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ https://kpsconline.karnataka.gov.in/HomePage/index.html ಸಲ್ಲಿಸಬೇಕು. ಈ ನೇಮಕಾತಿಗೆ ಸಂಬಂಧಿಸಿದಂತೆ ನಿಮಗೇನಾದರು ಗೊಂದರೆ ಇದ್ದರೆ, ಹೆಚ್ಚಿನ ಸಹಾಯಕ್ಕೆ ಸಹಾಯವಾಣಿ ಸಂಖ್ಯೆ 080-30574957/30574901 ಕರೆ ಮಾಡಬಹುದು ಎಂದು ನೇಮಕಾತಿ ಅಧಿಸೂಚನೆ ಮಾಹಿತಿ ನೀಡಿದೆ.
-
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications