KSET 2023: ಕೊನೆಗೂ ಈ ವರ್ಷದ ಕೆಸೆಟ್ ಪರೀಕ್ಷೆಗೆ ದಿನಾಂಕ ಫಿಕ್ಸ್: ದಿನಾಂಕ, ಅರ್ಜಿ ಸಲ್ಲಿಕೆ ವಿವರ ತಿಳಿಯಿರಿ
ಬೆಂಗಳೂರು, ಸೆಪ್ಟಂಬರ್ 11: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ 2023 (KSET-2023) ನಡೆಸುವ ಕುರಿತು ಮಹತ್ವ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಈವರೆಗೆ ಯಾವಾಗ ಕೆಸೆಟ್ ಪರೀಕ್ಷೆ ನಡೆಸಲಾಗುತ್ತದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿರಲಿಲ್ಲ. ಇದೀಗ ನೆವೆಂಬರ್ ತಿಂಗಳಲ್ಲಿ ಕೆಸೆಟ್ 2023 ಪರೀಕ್ಷೆ ನಡೆಸುವುದಾಗಿ ಪ್ರಾಧಿಕಾರ ಮಾಹಿತಿ ನೀಡಿದೆ.
KSET 2023 ಪರೀಕ್ಷೆಗಾಗಿ ಅಭ್ಯರ್ಥಿಗಳು ಕಾದು ಕುಳಿತಿದ್ದರು. ಆದರೆ ಪರೀಕ್ಷೆ ಬಗ್ಗೆ ನಿಖರ ಮಾಹಿತಿ ಇರಲಿಲ್ಲ. ಸದ್ಯದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ, ಪರೀಕ್ಷಾ ದಿನಾಂಕ ನಿಗದಿ ಮಾಡಿದೆ, ಮುಂದಿನ ನವೆಂಬರ್ 26 ರಂದು ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದೆ.

ನವೆಂಬರ್ 26ರಂದು ಕೆಸೆಟ್ ಪರೀಕ್ಷೆ ನಡೆಯಲಿದ್ದು, ಅರ್ಹರು ಆನ್ಲೈನ್ ಮೂಲಕ (https://kea.kar.nic.in) ಅರ್ಜಿ ಸಲ್ಲಿಸಬೇಕು ಎಂದು ಪರೀಕ್ಷಾ ಪ್ರಾಧಿಕಾರ ಅಧಿಸೂಚನೆಯಲ್ಲಿ ತಿಳಿಸಿದೆ.
ಅರ್ಜಿ ಸಲ್ಲಿಕೆ ಹೇಗೆ?
ಸ್ನಾತಕೋತ್ತರ ಮುಗಿಸಿರುವ ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ಜಾಲತಾಣ https://kea.kar.nic.in ಜಾಲತಾಣದ ಮೂಲಕ ಸೂಕ್ತ ದಾಖಲೆ ಸಹಿತ ಅರ್ಜಿ ಸಲ್ಲಿಸಬೇಕು. ಇನ್ನೂ ಅರ್ಜಿ ಶುಲ್ಕವನ್ನು ನಿಗದಿತ ಅಂಚೆ ಕಚೇರಿಯ ಶಾಖೆಗಳಲ್ಲಿ ಪಾವತಿಸಲು ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ ಆರಂಭ: ಸೆಪ್ಟಂಬರ್ 11ರಿಂದ ಆರಂಭ
ಅರ್ಜಿ ಸಲ್ಲಿಕೆ ಕೊನೆ ದಿನ: ಸೆಪ್ಟಂಬರ್ 30.
ಇ-ಪೋಸ್ಟ್ ಆಫೀಸ್ ನಲ್ಲಿ ಶುಲ್ಕ ಪಾವತಿಗೆ ಅಕ್ಟೋಬರ್ 03 ಕೊನೆ ದಿನ.
ಕೆಸೆಟ್ ಪರೀಕ್ಷೆ ಶುಲ್ಕದ ಮಾಹಿತಿ
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಬರೆಯಲು ಇಚ್ಚಿಸುವವರು ಅರ್ಜಿ ಸಲ್ಲಿಕೆ ಬಳಿಕ ರೂ.1,000 ಅನ್ನು ಸಾಮಾನ್ಯ ವರ್ಗ, ಪ್ರವರ್ಗ-2A, 2B, 3A, 3B ಅಭ್ಯರ್ಥಿಗಳು ಮತ್ತು ರೂ.700ಅನ್ನು ಪ್ರವರ್ಗ-1, SC, ST, PWD ಪಿಡಬ್ಲೂಡಿ, ಲಿಂಗತ್ವ ಅಲ್ಪಸಂಖ್ಯಾತರು ಪಾವತಿಸಬೇಕು. ಹೆಚ್ಚುವರಿ ಮಾಹಿತಿಗಾಗಿ ಆಸಕ್ತರು KEA ವೆಬ್ಸೈಟ್ಗೆ ಭೇಟಿ ನೀಡಲು ತಿಳಿಸಲಾಗಿದೆ.
-
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications