ಕೆಎಸ್ಆರ್ಟಿಸಿ ಉದ್ಯೋಗ ಕೊಡಿಸುವುದಾಗಿ ಹೇಳಿ ವಂಚನೆ: ಸಾರ್ವಜನಿಕರಿಗೆ ನಿಗಮದ ಎಚ್ಚರಿಕೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಕೆಲವು ಮಂದಿ ಉದ್ಯೋಗಾಕಾಂಕ್ಷಿಗಳಿಗೆ ವಂಚನೆ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ನಿಗಮದಲ್ಲಿ ಉನ್ನತ ಹುದ್ದೆಯ ಅಧಿಕಾರಿಗಳೆಂದು ಸುಳ್ಳು ಹೇಳಿಕೊಂಡು ನಕಲಿ ಲೆಟರ್ ಹೆಡ್ಗಳನ್ನು ತೋರಿಸಿ ನಂಬಿಕೆ ಮೂಡಿಸಿ ಹಣ ಪಡೆದುಕೊಳ್ಳುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಕಟವಾಗಿರುವುದು ನಿಗಮದ ಗಮನಕ್ಕೆ ಬಂದಿದೆ.
ಈ ಸಂಬಂಧ ಕೆಸ್ಅರ್ಟಿಸಿ ಸ್ಪಷ್ಟನೆ ನೀಡಿದ್ದು ನೀಗಮದಲ್ಲಿ ನಡೆಯುವ ಎಲ್ಲಾ ನೇಮಕಾತಿ ಪ್ರಕ್ರಿಯಗಳು ಸಂರ್ಫೊರ್ಣವಾಗಿ ಪಾರದರ್ಶಕ ಹಾಗೂ ನಿಯಮಬದ್ಧವಾದ ರೀತಿಯಲ್ಲಿ ನಡೆಯುತ್ತಿವೆ ಎಂದು ತಿಳಿಸಿದೆ. ನಿಗಮದಲ್ಲಿ ಯವುದೇ ರೀತಿಯ ನೇರ ನೇಮಕಾತಿ ಅಥವಾ ಶಫಾರಸ್ಸಿನ ಆಧಾರದ ಮೇಲೆ ಉದ್ಯೋಗ ನೀಡುವ ವ್ಯವಸ್ಠೆ ಇರುವುದಿಲ್ಲಾ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಸ್ಅರ್ಟಿಸಿಯಲ್ಲಿ ನಡೆಯುವ ನೇಮಕಾತಿಗಳಿಗಾಗಿ ಅರ್ಹ ಅಭ್ಯರ್ಥಿಳಿಂದ ಕೇವಲ ಆನ್ಲೈನ್ ಮೊಲಕವೇ ಅರ್ಜಿಗಳನ್ನು ಸ್ವೀಕರಸಿಲಾಗುತ್ತದೆ. ನಂತರ ಅಭ್ಯರ್ಥಿಗಳ ಅರ್ಹತೆ, ಮೇರಿಟ್ ಮತ್ತು ಸರ್ಕಾರದ ಮೀಸಲಾತಿ ಆಧಾರದ ಮೇಲೆ ಗಣಕಿಕೃತ ವ್ಯವಸ್ಥೆಯ ಮೂಲಕ ಆಯ್ಕೆಯ ಪ್ರಕ್ರಿಯೆ ನಡೆಯುತ್ತದೆ. ಈ ಪ್ರಕಿಯೆಯಲ್ಲಿ ಮಾನವನ ಯವುದೇ ರೀತಿಯ ಹಸ್ತಕ್ಷೇಪ ಅವಕಾಶವಿಲ್ಲದಂತೆ ವ್ಯವಸ್ಥೆ ರೂಪಿಸಲಾಗಿದೆ. ಹೀಗಾಗಿ ಯಾರೂ ಮಧ್ಯವರ್ತಿಗಳ ಮೂಲಕ ಉದ್ಯೋಗ ಕಲ್ಪಿಸಲು ಸಾಧ್ಯವಿಲ್ಲ ಎಂದು ನಿಗಮ ತಿಳಿಸಿದೆ.
ಈ ಹಿನ್ನಲೆ ಯಲ್ಲಿ ಸಾರ್ವಜನಿಕರು ಮತ್ತು ಉದ್ಯೋಗಾಂಕ್ಷಿಗಳು ಜಾಗರೂಕತೆಯಿಂದ ಇರಬೇಕು ಎಂದು ಕೆಸ್ಅರ್ಟಿಸಿ ಮನವಿ ಮಾಡಿದೆ. ನಿಗಮದಲ್ಲಿ ಉದ್ಯೋಗ ಕೊಡಿಸುವಿದಾಗಿ ಹೇಳಿ ಹಣ ಕೇಳಿದರೆ ಕೊಡಬಾರದು ಮತ್ತು ಅಂತವರನ್ನು ನಂಬಬಾರದು. ಇಂತಹವರು ನಕಲಿ ದಾಖಲೆ ಅಥವಾ ನಕಲಿ ಲೆಟರ್ ಹೆಡ್ಗಳನ್ನು ತೋರಿಸಿ ವಂಚಿಸಲು ಪ್ರಯತ್ನಿಸುವ ಸಾಧ್ಯತೆ ಇರುತ್ತದೆ ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಸಲಾಗಿದೆ.
ಯಾರಾದರೂ ಕೆಎಸ್ಆರ್ಟಿಸಿ ಯಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಹಣ ಅಥವಾ ಬೇರೆ ಯಾವುದೇ ರೀತಿಯ ಆಮಿಷ ನೀಡಿದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಮುಂದೆ ಕೆಎಸ್ಆರ್ಟಿಸಿ ಯಲ್ಲಿನ ಯಾವುದೇ ನೇಮಕಾತಿ ಸಂಬಂಧಿತ ಮಾಹಿತಿ ಅಧಿಕೃತ ಪ್ರಕಟಣೆಗಳು ಹಾಗೂ ಜಾಹೀರಾತುಗಳನ್ನು ksrtcjobs.gov.in ಎಂಬ ಅಧಿಕೃತ ವೆಬ್ಸೈಟ್ನಲ್ಲಿ ಮಾತ್ರ ಪ್ರಕಟಿಸಲಾಗುತ್ತದೆ. ಆದ್ದರಿಂದ ಉದ್ಯೋಗಾಕಾಂಕ್ಷಿಗಳು ನಿಗಮದ ಅಧಿಕೃತ ವೆಬ್ಸೈಟ್ ಹಾಗೂ ಪ್ರಕಟಣೆಗಳನ್ನು ಮಾತ್ರ ಗಮನಿಸಿ ಅರ್ಜಿ ಸಲ್ಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications