KSRTC Recruitment: ಚಾಲಕ-ನಿರ್ವಾಹಕ ಹುದ್ದೆ ಅರ್ಜಿ ಸಲ್ಲಿಸಿದವರು ಗಮನಿಸಿ
ಬೆಂಗಳೂರು, ಜುಲೈ 08: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯು ವರ್ಷಗಳ ಹಿಂದೆ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿತ್ತು. ಅದರಂತೆ ಹಂತ ಹಂತವಾಗಿ ಅರ್ಹ ಅಭ್ಯರ್ಥಿಗಳ ದೇಹದಾರ್ಡ್ಯ ಮತ್ತು ದಾಖಲಾತಿ ಪರಿಶೀಲನೆ ಮಾಡುತ್ತಾ ಬಂದಿದೆ. ಇದೀಗ ಮತ್ತೆ ಇದೇ ಪರಿಶೀಲನೆಗೆ ದಿನಾಂಕ ನಿಗದಿ ಮಾಡುವ ಮೂಲಕ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ.
ಇಷ್ಟು ದಿನಗಳ ಕಾಲ ಅರ್ಜಿ ಸಲ್ಲಿಸಿ ಹುದ್ದೆ ನೇಮಕಾತಿ ಪ್ರಕ್ರಿಯೆ ಆರಂಭ, ಆಹ್ವಾನ ಕುರಿತು ತಲೆಕೆಡಿಸಿಕೊಂಡುದ್ದ ಅಭ್ಯರ್ಥಿಗಳು ಇದೇ ಜುಲೈ 13ರಂದು ಬೆಂಗಳೂರಿನ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕು.

ಇದುವರೆಗೂ ನಡೆದ ಕೆಲವು ದಾಖಲಾತಿ ಮತ್ತು ದೇಹದಾರ್ಡ್ಯತೆ ಪರಿಶೀಲನೆ ವೇಳೆ ಗೈರಾದವರಿಗೆ ಮತ್ತೊಂದು ಅವಕಾಶ ಸಿಕ್ಕದಂತಾಗಿದೆ. ಇಂತವರು ಕೂಡಲೇ ನಿಗಮದ ಅಧಿಕೃತ ವೆಬ್-ಸೈಟ್ (ksrtcjobs.karnataka.gov.in) ಗೆ ಭೇಟಿ ಕೊಟ್ಟು ಅಲ್ಲಿನ ಅಂತಿಮ ಕರೆಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ಅಗತ್ಯ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು.
ನಿಗದಿತ ದಿನಾಂಕ ಇಲ್ಲವೇ ನಿಗದಿತ ದಿನಾಂಕ ಇಲ್ಲವೇ 13-07-2024 ರೊಳಗಾಗಿ ತಪ್ಪದೇ ಹಾಜರಾಗಲು ಅಂತಿಮ ಅವಕಾಶ ನೀಡಲಾಗಿದೆ. ತದನಂತರ ಯಾವುದೇ ಪರಿಶೀಲನಾ ಕಾರ್ಯ ನಡೆಯುವುದಿಲ್ಲ ಹಾಗೂ ಪರಿಗಣಿಸಲು ಸಾಧ್ಯವಿಲ್ಲ ಎಂಬುದನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮತ್ತೊಮ್ಮೆ ಪ್ರಕಟಣೆಯಲ್ಲಿ ತಿಳಿಸಿದೆ.
KSRTC ನಿಗಮದಲ್ಲಿ ಜಾಹೀರಾತು ಸಂ.1/2020 ದಿನಾಂಕ 14-02-2020 ರಂದು ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿತ್ತು. ಇದರಲ್ಲಿ ಅರ್ಜಿ ಸಲ್ಲಿಸಿ ಶಾರ್ಟ್ ಲಿಸ್ಟ್ ಆದವರ ದೇಹದಾರ್ಡ್ಯ ಹಾಗೂ ದಾಖಲಾತಿ ಪರಿಶೀಲನೆಯನ್ನು ನಡೆಸುತ್ತಲೇ ಬಂದಿದೆ. ಇದೀಗ ಅಂತಿಮ ಸುತ್ತಿನ ಪರಿಶೀಲನೆ ಇದೇ ತಿಂಗಳು ಹಮ್ಮಿಕೊಂಡಿದೆ.

ಇನ್ನೂ ಅಧಿಸೂಚನೆ ಪಾರದರ್ಶಕವಾಗಿ ನಡೆಯಲಿದೆ. ಇದರಲ್ಲಿ ಯಾವುದೇ ವ್ಯಕ್ತಿಗಳ ಹಸ್ತಕ್ಷೇಪ ಇರುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಮಧ್ಯವರ್ತಿಗಳ ಮಾತು ನಂಬಿ ಆಮಿಷಕ್ಕೆ ಒಳಗಾಗಬಾರದು, ನೇರವಾಗಿ ದಾಖಲಾತಿ ಪರಿಶೀಲನೆಗೆ ಒಳಗಾಗಬೇಕು ಎಂದು ನಿಗಮ ತಿಳಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಈ ಹಿಂದೆಯು ಕೆಲವು ಭಾರಿ ಈ ದೈಹಿಕ ಪರೀಕ್ಷೆ ನಡೆಸಿದ್ದರು. ಆಗ ಒಂದಷ್ಟು ಮಂದಿ ಅಭ್ಯರ್ಥಿಗಳು ಗೈರಾಗಿದ್ದರು. ಇದೀಗ ಅವರೆಲ್ಲರಿಗೂ ಮತ್ತೊಮ್ಮೆ ಪರಿಶೀಲನೆಗೆ ಒಳಗಾಗುವ, ಉದ್ಯೋಗ ಪಡೆಯಲು ಅನುಕೂಲವಾಗುವಂತೆ ಅವಕಾಶ ಕಲ್ಪಿಸಲಾಗಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications