KSRTC Recruitment: ಚಾಲಕ-ನಿರ್ವಾಹಕ ಹುದ್ದೆ ಅರ್ಜಿ ಸಲ್ಲಿಸಿದವರು ಗಮನಿಸಿ
ಬೆಂಗಳೂರು, ಜುಲೈ 08: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯು ವರ್ಷಗಳ ಹಿಂದೆ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿತ್ತು. ಅದರಂತೆ ಹಂತ ಹಂತವಾಗಿ ಅರ್ಹ ಅಭ್ಯರ್ಥಿಗಳ ದೇಹದಾರ್ಡ್ಯ ಮತ್ತು ದಾಖಲಾತಿ ಪರಿಶೀಲನೆ ಮಾಡುತ್ತಾ ಬಂದಿದೆ. ಇದೀಗ ಮತ್ತೆ ಇದೇ ಪರಿಶೀಲನೆಗೆ ದಿನಾಂಕ ನಿಗದಿ ಮಾಡುವ ಮೂಲಕ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ.
ಇಷ್ಟು ದಿನಗಳ ಕಾಲ ಅರ್ಜಿ ಸಲ್ಲಿಸಿ ಹುದ್ದೆ ನೇಮಕಾತಿ ಪ್ರಕ್ರಿಯೆ ಆರಂಭ, ಆಹ್ವಾನ ಕುರಿತು ತಲೆಕೆಡಿಸಿಕೊಂಡುದ್ದ ಅಭ್ಯರ್ಥಿಗಳು ಇದೇ ಜುಲೈ 13ರಂದು ಬೆಂಗಳೂರಿನ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕು.

ಇದುವರೆಗೂ ನಡೆದ ಕೆಲವು ದಾಖಲಾತಿ ಮತ್ತು ದೇಹದಾರ್ಡ್ಯತೆ ಪರಿಶೀಲನೆ ವೇಳೆ ಗೈರಾದವರಿಗೆ ಮತ್ತೊಂದು ಅವಕಾಶ ಸಿಕ್ಕದಂತಾಗಿದೆ. ಇಂತವರು ಕೂಡಲೇ ನಿಗಮದ ಅಧಿಕೃತ ವೆಬ್-ಸೈಟ್ (ksrtcjobs.karnataka.gov.in) ಗೆ ಭೇಟಿ ಕೊಟ್ಟು ಅಲ್ಲಿನ ಅಂತಿಮ ಕರೆಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ಅಗತ್ಯ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು.
ನಿಗದಿತ ದಿನಾಂಕ ಇಲ್ಲವೇ ನಿಗದಿತ ದಿನಾಂಕ ಇಲ್ಲವೇ 13-07-2024 ರೊಳಗಾಗಿ ತಪ್ಪದೇ ಹಾಜರಾಗಲು ಅಂತಿಮ ಅವಕಾಶ ನೀಡಲಾಗಿದೆ. ತದನಂತರ ಯಾವುದೇ ಪರಿಶೀಲನಾ ಕಾರ್ಯ ನಡೆಯುವುದಿಲ್ಲ ಹಾಗೂ ಪರಿಗಣಿಸಲು ಸಾಧ್ಯವಿಲ್ಲ ಎಂಬುದನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮತ್ತೊಮ್ಮೆ ಪ್ರಕಟಣೆಯಲ್ಲಿ ತಿಳಿಸಿದೆ.
KSRTC ನಿಗಮದಲ್ಲಿ ಜಾಹೀರಾತು ಸಂ.1/2020 ದಿನಾಂಕ 14-02-2020 ರಂದು ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿತ್ತು. ಇದರಲ್ಲಿ ಅರ್ಜಿ ಸಲ್ಲಿಸಿ ಶಾರ್ಟ್ ಲಿಸ್ಟ್ ಆದವರ ದೇಹದಾರ್ಡ್ಯ ಹಾಗೂ ದಾಖಲಾತಿ ಪರಿಶೀಲನೆಯನ್ನು ನಡೆಸುತ್ತಲೇ ಬಂದಿದೆ. ಇದೀಗ ಅಂತಿಮ ಸುತ್ತಿನ ಪರಿಶೀಲನೆ ಇದೇ ತಿಂಗಳು ಹಮ್ಮಿಕೊಂಡಿದೆ.

ಇನ್ನೂ ಅಧಿಸೂಚನೆ ಪಾರದರ್ಶಕವಾಗಿ ನಡೆಯಲಿದೆ. ಇದರಲ್ಲಿ ಯಾವುದೇ ವ್ಯಕ್ತಿಗಳ ಹಸ್ತಕ್ಷೇಪ ಇರುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಮಧ್ಯವರ್ತಿಗಳ ಮಾತು ನಂಬಿ ಆಮಿಷಕ್ಕೆ ಒಳಗಾಗಬಾರದು, ನೇರವಾಗಿ ದಾಖಲಾತಿ ಪರಿಶೀಲನೆಗೆ ಒಳಗಾಗಬೇಕು ಎಂದು ನಿಗಮ ತಿಳಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಈ ಹಿಂದೆಯು ಕೆಲವು ಭಾರಿ ಈ ದೈಹಿಕ ಪರೀಕ್ಷೆ ನಡೆಸಿದ್ದರು. ಆಗ ಒಂದಷ್ಟು ಮಂದಿ ಅಭ್ಯರ್ಥಿಗಳು ಗೈರಾಗಿದ್ದರು. ಇದೀಗ ಅವರೆಲ್ಲರಿಗೂ ಮತ್ತೊಮ್ಮೆ ಪರಿಶೀಲನೆಗೆ ಒಳಗಾಗುವ, ಉದ್ಯೋಗ ಪಡೆಯಲು ಅನುಕೂಲವಾಗುವಂತೆ ಅವಕಾಶ ಕಲ್ಪಿಸಲಾಗಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications