ಕೆಎಸ್ಟಿಡಿಸಿ ನೇಮಕಾತಿ; 35 ಹುದ್ದೆಗಳಿಗೆ ಅರ್ಜಿ ಹಾಕಿ
ಬೆಂಗಳೂರು, ಸೆಪ್ಟೆಂಬರ್ 04 : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ 35 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 15/9/2019 ಕೊನೆಯ ದಿನವಾಗಿದೆ.
ಕೆಎಸ್ಟಿಡಿಸಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ನಿಗಮವು ಯಾವುದೇ ಕಾರಣವನ್ನು ನೀಡದೆ ಅರ್ಜಿ ಸ್ವೀಕರಿಸಲು, ತಿರಸ್ಕರಿಸುವ ಸಂಪೂರ್ಣ ಅಧಿಕಾರವನ್ನು ಹೊಂದಿರುತ್ತದೆ.
ನಿಗಮ ನಿಗದಿಪಡಿಸಿದ ನಮೂನೆಯಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು.
ಯಾವ-ಯಾವ ಹುದ್ದೆಗಳು: ಪ್ರಧಾನ ವ್ಯವಸ್ಥಾಪಕರು (ಹೋಟೆಲ್) 1, ವ್ಯವಸ್ಥಾಪಕರು (ಹಣಕಾಸು) 1, ವ್ಯವಸ್ಥಾಪಕರು (ಹೋಟೆಲ್) 4, ವ್ಯವಸ್ಥಾಪಕರು (ಮಾರುಕಟ್ಟೆ& ಮಾರಾಟ) 1, ಸಾರ್ವಜನಿಕ ಸಂಪರ್ಕಾಧಿಕಾರಿ 1, ಸೌಸ್ ಶೇಫ್ 4 ಹುದ್ದೆಗಳಿವೆ.
Recommended Video

ಸಹಾಯಕ ವ್ಯವಸ್ಥಾಪಕರು (ಹಣಕಾಸು) 4, ಸಹಾಯಕ ವ್ಯವಸ್ಥಾಪಕರು (ಹೋಟೆಲ್) 4, ಸಹಾಯಕ ವ್ಯವಸ್ಥಾಪಕರು (ಏರ್ಪೋರ್ಟ್ ಟ್ಯಾಕ್ಸಿ) 1, ದ್ವಿತೀಯ ದರ್ಜೆ ಸಹಾಯಕರು 5, ಪ್ರವಾಸಿ ಮಾರ್ಗದರ್ಶಿ 5, ಡಾಟಾ ಎಂಟ್ರಿ ಆಪರೇಟರ್ 4 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಅಂಚೆ ಮೂಲಕ ಅರ್ಜಿ ಹಾಕಿ: ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ತಮ್ಮ ಸ್ವವಿವರವನ್ನು ಭರ್ತಿ ಮಾಡಿ, ವಿದ್ಯಾರ್ಹತೆ ಮತ್ತು ಸೇವಾ ಅನುಭವ ದಾಖಲೆಗಳು ಮತ್ತು ಇತ್ತೀಚಿನ ಭಾವಚಿತ್ರದೊಂದಿಗೆ 15/9/2019ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.
ಅಭ್ಯರ್ಥಿಗಳು ಮುಚ್ಚಿದ ಲಕೋಟೆಯಲ್ಲಿ ಸ್ಪೀಡ್ ಪೋಸ್ಟ್/ ರಿಜಿಸ್ಟರ್/ ಕೋರಿಯರ್/ನೇರವಾಗಿ ಬಂದು ಅರ್ಜಿ ಸಲ್ಲಿಸಬೇಕು. ಲಕೋಟೆ ಮೇಲೆ ಹುದ್ದೆಯ ಪದನಾಮ ನಮೂದಿಸಬೇಕು. ಇಲ್ಲವಾದಲ್ಲಿ ಅರ್ಜಿ ತಿರಸ್ಕಾರ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ವಿಳಾಸ: ವ್ಯವಸ್ಥಾಪಕರು (ಆಡಳಿತ), ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿ., ಕಾರ್ಯ ನಿರ್ವಾಹಕ ಕಚೇರಿ, ನೆಲ ಮಹಡಿ, ಯಶವಂತಪುರ ಟಿಟಿಎಂಸಿ, ಬಿಎಂಟಿಸಿ ಬಸ್ ನಿಲ್ದಾಣ, ಯಶವಂತಪುರ ವೃತ್ತ, ಬೆಂಗಳೂರು 560022.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications