ಕೆಎಸ್ಟಿಡಿಸಿ ನೇಮಕಾತಿ; 35 ಹುದ್ದೆಗಳಿಗೆ ಅರ್ಜಿ ಹಾಕಿ
ಬೆಂಗಳೂರು, ಸೆಪ್ಟೆಂಬರ್ 04 : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ 35 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 15/9/2019 ಕೊನೆಯ ದಿನವಾಗಿದೆ.
ಕೆಎಸ್ಟಿಡಿಸಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ನಿಗಮವು ಯಾವುದೇ ಕಾರಣವನ್ನು ನೀಡದೆ ಅರ್ಜಿ ಸ್ವೀಕರಿಸಲು, ತಿರಸ್ಕರಿಸುವ ಸಂಪೂರ್ಣ ಅಧಿಕಾರವನ್ನು ಹೊಂದಿರುತ್ತದೆ.
ನಿಗಮ ನಿಗದಿಪಡಿಸಿದ ನಮೂನೆಯಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು.
ಯಾವ-ಯಾವ ಹುದ್ದೆಗಳು: ಪ್ರಧಾನ ವ್ಯವಸ್ಥಾಪಕರು (ಹೋಟೆಲ್) 1, ವ್ಯವಸ್ಥಾಪಕರು (ಹಣಕಾಸು) 1, ವ್ಯವಸ್ಥಾಪಕರು (ಹೋಟೆಲ್) 4, ವ್ಯವಸ್ಥಾಪಕರು (ಮಾರುಕಟ್ಟೆ& ಮಾರಾಟ) 1, ಸಾರ್ವಜನಿಕ ಸಂಪರ್ಕಾಧಿಕಾರಿ 1, ಸೌಸ್ ಶೇಫ್ 4 ಹುದ್ದೆಗಳಿವೆ.
Recommended Video

ಸಹಾಯಕ ವ್ಯವಸ್ಥಾಪಕರು (ಹಣಕಾಸು) 4, ಸಹಾಯಕ ವ್ಯವಸ್ಥಾಪಕರು (ಹೋಟೆಲ್) 4, ಸಹಾಯಕ ವ್ಯವಸ್ಥಾಪಕರು (ಏರ್ಪೋರ್ಟ್ ಟ್ಯಾಕ್ಸಿ) 1, ದ್ವಿತೀಯ ದರ್ಜೆ ಸಹಾಯಕರು 5, ಪ್ರವಾಸಿ ಮಾರ್ಗದರ್ಶಿ 5, ಡಾಟಾ ಎಂಟ್ರಿ ಆಪರೇಟರ್ 4 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಅಂಚೆ ಮೂಲಕ ಅರ್ಜಿ ಹಾಕಿ: ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ತಮ್ಮ ಸ್ವವಿವರವನ್ನು ಭರ್ತಿ ಮಾಡಿ, ವಿದ್ಯಾರ್ಹತೆ ಮತ್ತು ಸೇವಾ ಅನುಭವ ದಾಖಲೆಗಳು ಮತ್ತು ಇತ್ತೀಚಿನ ಭಾವಚಿತ್ರದೊಂದಿಗೆ 15/9/2019ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.
ಅಭ್ಯರ್ಥಿಗಳು ಮುಚ್ಚಿದ ಲಕೋಟೆಯಲ್ಲಿ ಸ್ಪೀಡ್ ಪೋಸ್ಟ್/ ರಿಜಿಸ್ಟರ್/ ಕೋರಿಯರ್/ನೇರವಾಗಿ ಬಂದು ಅರ್ಜಿ ಸಲ್ಲಿಸಬೇಕು. ಲಕೋಟೆ ಮೇಲೆ ಹುದ್ದೆಯ ಪದನಾಮ ನಮೂದಿಸಬೇಕು. ಇಲ್ಲವಾದಲ್ಲಿ ಅರ್ಜಿ ತಿರಸ್ಕಾರ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ವಿಳಾಸ: ವ್ಯವಸ್ಥಾಪಕರು (ಆಡಳಿತ), ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿ., ಕಾರ್ಯ ನಿರ್ವಾಹಕ ಕಚೇರಿ, ನೆಲ ಮಹಡಿ, ಯಶವಂತಪುರ ಟಿಟಿಎಂಸಿ, ಬಿಎಂಟಿಸಿ ಬಸ್ ನಿಲ್ದಾಣ, ಯಶವಂತಪುರ ವೃತ್ತ, ಬೆಂಗಳೂರು 560022.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications