ಖಾದಿ ಮತ್ತು ಗ್ರಾಮೋದ್ಯೋಗದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜುಲೈ 14: ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ(KVIC)ಯಲ್ಲಿ 2022ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ, ಆಸಕ್ತರು ವೃತ್ತಿಪರ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಜುಲೈ 30, 2022.
ಸಂಸ್ಥೆ ಹೆಸರು:
ಹುದ್ದೆ ಸಂಖ್ಯೆ: 10
ಹುದ್ದೆ ಸ್ಥಳ: ಕೇರಳ, ಕರ್ನಾಟಕ ಹಾಗೂ ತೆಲಂಗಾಣ
ಹುದ್ದೆ ಹೆಸರು: ಯುವ ವೃತ್ತಿಪರರು
ಸಂಬಳ ನಿರೀಕ್ಷೆ: 25000-30000 ರು ಪ್ರತಿ ತಿಂಗಳು
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ: ಗರಿಷ್ಠ 27 ವರ್ಷ. ನಿಯಮಕ್ಕನುಸಾರವಾಗಿ ವಯೋಮಿತಿಯಲ್ಲಿ ವಿನಾಯತಿ ಸಿಗಲಿದೆ. ವಯೋಮಿತಿ ವಿವರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಈ ಕೆಳಕಂಡ ವಯೋಮತಿ ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35, ಪ್ರವರ್ಗ 2(ಎ), 2(ಬಿ), 3(ಎ), 3 (ಬಿ) ಅಭ್ಯರ್ಥಿಗಳಿಗೆ 38 ವರ್ಷ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿಗಳನ್ನು ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಕೆ ಮಾಡಲು ಅವಕಾಶವಿಲ್ಲ. ದಾಖಲೆ ಒದಗಿಸದ, ಪರಿಪೂರ್ಣ ಮಾಹಿತಿ ಇರದ ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ.
ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೊದಲು ಕಡ್ಡಾಯವಾಗಿ ಸೂಚನೆಗಳನ್ನು ಓದಿಕೊಳ್ಳಬೇಕು. ಅರ್ಜಿ ಸಲ್ಲಿಸಿದ ಬಳಿಕ ಒಂದು ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಭದ್ರವಾಗಿ ಇಟ್ಟುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 080-22266852. ಇ-ಮೇಲ್ [email protected].
ಅಭ್ಯರ್ಥಿಗಳಿಗೆ ಸೂಚನೆಗಳು ಅರ್ಜಿ ಹಾಕುವ ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಇ-ಮೇಲ್ ಐಡಿ, ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ನೇಮಕಾತಿ ಪ್ರಕ್ರಿಯೆ ಮುಗಿಯುವ ತನಕ ಇದೇ ಮೊಬೈಲ್ ನಂಬರ್, ಇ-ಮೇಲ್ ಐಡಿಯನ್ನು ವ್ಯವಹಾರಗಳಿಗೆ ಬಳಕೆ ಮಾಡಲಾಗುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಪ್ರವೇಶ ಪತ್ರಗಳನ್ನು ಕಳಿಸುವುದಿಲ್ಲ. ಖಾದಿ ಮಂಡಳಿ ಜಾಲತಾಣವನ್ನು ಆಗಾಗ ಪರಿಶೀಲಿಸಬೇಕು. ಪ್ರವೇಶ ಪತ್ರ ಪ್ರಕಟವಾದ ಬಳಿಕ ಡೌನ್ ಲೋಡ್ ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಭದ್ರವಾಗಿ ಇಟ್ಟುಕೊಳ್ಳಬೇಕು.

ಅಭ್ಯರ್ಥಿಗಳಿಗೆ ಷರತ್ತುಗಳು ಅರ್ಜಿ ಸಲ್ಲಿಸುವವರು ಭಾರತೀಯ ನಾಗರೀಕನಾಗಿರಬೇಕು. ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಪತ್ನಿಯರನ್ನು ಹೊಂದಿರುವ ಪುರುಷ, ಈಗಾಗಲೇ ಹೆಂಡತಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಗಳು ನೇಮಕಾತಿಗೆ ಅರ್ಹರಲ್ಲ. ಅಭ್ಯರ್ಥಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು.
ನೇಮಕಾತಿಯು ಕರ್ತವ್ಯಗಳ ದಕ್ಷತೆ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನ್ಯೂನ್ಯತೆಯಿಂದ ಮುಕ್ತನಾಗಿರಬೇಕು. ಕೇಂದ್ರ ಅಥವ ಕರ್ನಾಟಕ ಅಥವ ಇತರೆ ಯಾವುದೇ ರಾಜ್ಯ ಸರ್ಕಾರದ ಯಾವುದೇ ಸಂಸ್ಥೆ/ ನಿಗಮ/ ಮಂಡಳಿಗಳಿಂದ ನಡೆಸಲಾಗುವ ಪರೀಕ್ಷೆಗಳಿಂದ ಅಥವ ನೇಮಕಾತಿಗಳಿಂದ ಖಾಯಂ ಆಗಿ ಡಿಬಾರ್ ಆದ ವ್ಯಕ್ತಿಗಳು ನೇಮಕಾತಿಗೆ ಅರ್ಹರಲ್ಲ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 13-07-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30-07-2022.
Recommended Video
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ವೆಬ್ ಸೈಟ್ ಮೂಲಕ 3 ಹಂತದಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕು. ಮೊದಲ ಹಂತದಲ್ಲಿ ಫ್ರೋಫೈಲ್ ಕ್ರಿಯೇಷನ್/ ಅಪ್ಡೇಷನ್, ಎರಡನೇ ಹಂತದಲ್ಲಿ ಅಪ್ಲಿಕೇಶನ್ ಸಬ್ಮಿಷನ್, ಮೂರನೇ ಹಂತದಲ್ಲಿ ಪೇಮೆಂಟ್. ಹೆಚ್ಚಿನ ಮಾಹಿತಿಗಾಗಿ ವೆಬ್ ತಾಣಕ್ಕೆ ಭೇಟಿ ನೀಡಿ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications