Post Office Jobs: SSLC ಪಾಸಾದವರಿಗೆ ಕೇಂದ್ರ ಸರ್ಕಾರಿ ಉದ್ಯೋಗ: ಕೂಡಲೇ ಅರ್ಜಿ ಹಾಕಿ
ಬೆಂಗಳೂರು, ಮೇ 30: ಭಾರತೀಯ ಅಂಚೆ ಇಲಾಖೆ (Post Office Jobs) ತನ್ನಲ್ಲಿ ಖಾಲಿರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿ ಈಗಾಗಲೇ ಕೆಲವು ದಿನಗಳು ಕಳೆದಿವೆ. ಆಸಕ್ತ ಅಭ್ಯರ್ಥಿಗಳು ತಡಮಾಡದೇ ಕೂಡಲೇ ಅರ್ಜಿ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರ ಉದ್ಯೋಗ ಪಡೆಯಬಹುದು.
ದೇಶದ ಅಂಚೆ ಕಚೇರಿಯಲ್ಲಿ ಒಟ್ಟು 19 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇವೆ. ಆಸಕ್ತರು ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅಂದರೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ನಾಳೆ ಮೇ 31ರಂದು ಕೊನೆ ದಿನವಾಗಿದೆ. ಈ ಅವಕಾಶ ಸದುಪಯೋಗ ಮಾಡಿಕೊಳ್ಳುವಂತೆ ಅಂಚೆ ಇಲಾಖೆ ತಿಳಿಸಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಅಗತ್ಯ ಮಾಹಿತಿಯನ್ನು ಇಲ್ಲಿ ತಿಳಿಯಬಹುದು. ಅನುಭವ, ವಿದ್ಯಾರ್ಹತೆ, ವೇತನ, ಆಯ್ಕೆ ವಿಧಾನದ ಸಂಪೂರ್ಣ ಮಾಹಿತಿ ಇಲ್ಲಿದೆ.
ನೇಮಕಾತಿ ಪೂರ್ಣ ವಿವರ
ಸಂಸ್ಥೆ ಹೆಸರು: ಭಾರತೀಯ ಅಂಚೆ ಇಲಾಖೆ
ಹುದ್ದೆ ಹೆಸರು: ಸ್ಟಾಫ್ ಕಾರ್ ಡ್ರೈವರ್
ಒಟ್ಟು ಹುದ್ದೆ: 19
ವೇತನ: ನಿಯಮಾನುಸಾರ
ವಿದ್ಯಾರ್ಹತೆ: ಹತ್ತನೇ ತರಗತಿ
ಅರ್ಜಿ ಸಲ್ಲಿಕೆ: ಆಫ್ಲೈನ್
ಅರ್ಜಿ ಸಲ್ಲಿಕೆ ಕೊನೆ ದಿನ: ಮೇ 31 ನಾಳೆ.
ವಿದ್ಯಾರ್ಹತೆ ಏನಿರಬೇಕು?
ಡ್ರೈವಿಂಗ್ನಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಯಾವುದೇ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು ಎಂದು ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ತಿಳಿಸಿದೆ.

ವಯೋಮಿತಿ ವಿವರ
ಆಸಕ್ತ ಅಭ್ಯರ್ಥಿಗಳ ವಯಸ್ಸು ನಾಳೆ 2024ರ ಮೇ 31ಕ್ಕೆ ಗರಿಷ್ಠ 56 ವರ್ಷ ದಾಟಿರಬಾರದು. ಜಾತಿ ಮೀಸಲಾತಿ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯಸ್ಸಿನ ಮೀತಿಯಲ್ಲಿ ಸಡಿಲಿಕೆ ಸಿಗಲಿದೆ ಎಂದು ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಡ್ರೈವಿಂಗ್ ಲೈಸೆನ್ಸ್ ಹಾಗೂ ಸ್ಕಿಲ್ ಟೆಸ್ಟ್ ಪರಿಶೀಲಿಸಲಾಗುತ್ತದೆ. ನಂತರ ಒಂದು ಸುತ್ತಿನ ಸಂದರ್ಶನ ನಡೆಸಲಾಗುವುದು. ನಂತರ ಅವರನ್ನು ಬಿಹಾರದ ಪಾಟ್ನಾದಲ್ಲಿ ನಿಯಮಾನುಸಾರ ಮಾಸಿಕ ವೇತನದ ಆಧಾರದಲ್ಲಿ ನಿಯೋಜನೆ ಮಾಡಲಾಗುವುದು ಎಂದು ಇಲಾಖೆ ಮಾಹಿತಿ ನೀಡಿದೆ.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಅರ್ಹ ಅಭ್ಯರ್ಥಿಗಳು ಕೂಡಲೇ ಅಗತ್ಯ ದಾಖಲೆ ಸಮೇತ ಭರ್ತಿ ಮಾಡಿದ ಅರ್ಜಿಯನ್ನು ಇಲ್ಲಿನ ವಿಳಾಸ, ''ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ, ಬಿಹಾರ ಸರ್ಕಲ್, ಪಾಟ್ನಾ-800001' ಇಲ್ಲಿಗೆ ಕಳುಹಿಸುವಂತೆ ಮನವಿ ಮಾಡಲಾಗಿದೆ.
ನೆನಪಿಡಬೇಕಾದ ದಿನಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 2024 ಏಪ್ರಿಲ್ 16
ಅರ್ಜಿ ಸಲ್ಲಿಕೆ ಕೊನೆ ದಿನ: ನಾಳೆ 2024 ಮೇ 31.
ಆಸಕ್ತ ಅಭ್ಯರ್ಥಿಗಳು ಇಂದು ಸಂಜೆವರೆಗೂ ಕಾಯದೇ ಈ ಕೂಡಲೇ ಅರ್ಜಿಗಳನ್ನು ಸಲ್ಲಿಸಬೇಕು. ಚಾಲನೆ ವೃತ್ತಿಯಲ್ಲಿರುವವರಿಗೆ, ಅದರಲ್ಲೂ ಹತ್ತನೆ ತರಗತಿ ಪೂರ್ಣಗೊಳಿಸಿದವರಿಗೆ ಕೇಂದ್ರ ಸರ್ಕಾರ ಹುದ್ದೆ ಸಿಗುವ ಅವಕಾಶ ಇದಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications