ಹುಣಸೂರು ಜಿಟಿಟಿಸಿ ಕೇಂದ್ರಕ್ಕೆ ಚಾಲನೆ, ವರ್ಷಕ್ಕೆ 500 ಯುವಜನರಿಗೆ ತರಬೇತಿ
ಮೈಸೂರು, ಸೆ.29: ಹುಣಸೂರಿನ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯನ್ನು (ಜಿಟಿಟಿಸಿ) ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಗುರುವಾರ ಉದ್ಘಾಟಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಜಿಟಿಟಿಸಿ ಕೇಂದ್ರದಲ್ಲಿ ಪ್ರತಿ ವರ್ಷವೂ ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಆಧುನಿಕ ಕೌಶಲ್ಯಗಳಿರುವ ತರಬೇತಿ ನೀಡಿ, ಅವರನ್ನು ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಲಾಗುವುದು. ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಲಿತವರು ಕೂಡ ತರಬೇತಿ ಪಡೆದುಕೊಳ್ಳಬಹುದು. ಇದ್ಯಾವುದಕ್ಕೂ ವಿದ್ಯಾರ್ಥಿಗಳ ಬಳಿ ಸರ್ಕಾರವು ನಯಾಪೈಸೆ ಶುಲ್ಕವನ್ನೂ ತೆಗೆದುಕೊಳ್ಳದೆ, ಸಂಪೂರ್ಣ ಉಚಿತವಾಗಿ ತರಬೇತಿ ನೀಡಲಿದೆ ಎಂದು ತಿಳಿಸಿದ್ದಾರೆ.
ಈ ಕೇಂದ್ರದಲ್ಲಿ ಡೈಯಿಂಗ್, ಫಿಟ್ಟರ್, ಮೆಟಲರ್ಜಿ ಸೇರಿದಂತೆ 10 ಕ್ಕೂ ಹೆಚ್ಚು ಆಧುನಿಕ ಕೋರ್ಸುಗಳಿವೆ. ಇವುಗಳಲ್ಲಿ ಅಲ್ಪಾವಧಿ ಮತ್ತು ದೀರ್ಘಾವಧಿ ತರಬೇತಿಗಳೆರಡೂ ಇವೆ. ಮುಂಬರುವ ದಿನಗಳಲ್ಲಿ ಈ ಜಿಟಿಟಿಸಿಯಲ್ಲಿ ಮತ್ತಷ್ಟು ಕೋರ್ಸುಗಳನ್ನು ಆರಂಭಿಸಲಾಗುವುದು. ಕರ್ನಾಟಕದ ಈ ಮಾದರಿಯನ್ನು ತಮಿಳುನಾಡು, ಅಸ್ಸಾಂ ಮುಂತಾದ ರಾಜ್ಯಗಳೂ ಅನುಕರಿಸುತ್ತಿವೆ ಎಂದು ಅವರು ವಿವರಿಸಿದ್ದಾರೆ.

ರಾಜ್ಯ ಸರಕಾರವು ಯುವಜನರಲ್ಲಿ ಕೌಶಲ್ಯ ತರಬೇತಿಗೆ ಆದ್ಯತೆ ಕೊಟ್ಟಿದೆ. ಹಿಂದೆಲ್ಲ ವರ್ಷಕ್ಕೆ ಕೇವಲ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಮಾತ್ರ ಕೌಶಲ್ಯ ತರಬೇತಿ ಕೊಡಲಾಗುತ್ತಿತ್ತು. ಈಗ ಈ ಸಂಖ್ಯೆ ಹಲವು ಲಕ್ಷಗಳಿಗೆ ಏರಿದೆ. ಇದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಿದ್ದು, ಯುವಜನರಲ್ಲಿರುವ ಕೊರತೆಗಳನ್ನು ಗಮನಿಸಿ, ಅದಕ್ಕೆ ತಕ್ಕಂತೆ ಸರಕಾರವೇ ಉಚಿತ ತರಬೇತಿಗೆ ವ್ಯವಸ್ಥೆ ಮಾಡುತ್ತಿದೆ ಎಂದು ಹೇಳಿದ್ದಾರೆ.
4,500 ಕೋಟಿ ರೂ. ವೆಚ್ಚದಲ್ಲಿ ಈಗಾಗಲೇ 150 ಐಟಿಐಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಉಳಿದಿರುವ 30 ಐಟಿಐಗಳನ್ನು ಈ ವರ್ಷ ಉನ್ನತೀಕರಿಸಲಾಗುವುದು. ಇದಕ್ಕಾಗಿ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ. ಹಾಗೆಯೇ ಪಾಲಿಟೆಕ್ನಿಕ್ಗಳಲ್ಲಿ ಶೇಕಡಾ 100 ರಷ್ಟು ದಾಖಲಾತಿ ಆಗುವಂತೆ ವಿದ್ಯಾರ್ಥಿಗಳನ್ನು ಆಕರ್ಷಿಸಲಾಗುತ್ತಿದೆ. ಜಿಟಿಟಿಸಿಗಳಿಗಂತೂ ಈಚಿನ ವರ್ಷಗಳಲ್ಲಿ ಭಾರೀ ಬೇಡಿಕೆ ಸೃಷ್ಟಿಯಾಗುತ್ತಿದೆ ಎಂದು ಅಶ್ವತ್ಥನಾರಾಯಣ ಸಂತಸ ವ್ಯಕ್ತಪಡಿಸಿದ್ದಾರೆ.

ಇಡೀ ದೇಶದಲ್ಲೇ ಅತ್ಯಂತ ಕಡಿಮೆ ಪ್ರಮಾಣದ ನಿರುದ್ಯೋಗ ಹೊಂದಿರುವ ರಾಜ್ಯವೆಂದರೆ ಕರ್ನಾಟಕ ಮಾತ್ರ. ಆಯಾ ಕಾಲಕ್ಕೆ ತಕ್ಕ ನೀತಿಗಳನ್ನು ರೂಪಿಸಿಕೊಂಡು, ಹೊಸತನಕ್ಕೆ ತೆರೆದುಕೊಳ್ಳುತ್ತಿರುವುದರಿಂದ ಇದು ಸಾಧ್ಯವಾಗಿದೆ. ಇದರ ಜತೆಗೆ ತಂತ್ರಜ್ಞಾನದ ಅನ್ವಯಿಕತೆಯು ರಾಜ್ಯದ ಶಕ್ತಿಯಾಗಿದೆ. ಹೀಗಾಗಿ ಇಡೀ ದೇಶದ ಎಲ್ಲಾ ಭಾಗಗಳಿಂದಲೂ ನಮ್ಮಲ್ಲಿಗೆ ಉದ್ಯೋಗ ಅರಸಿಕೊಂಡು ಬರುವವರ ಸಂಖ್ಯೆ ಜಾಸ್ತಿ ಇದೆ ಎಂದು ಸಚಿವರು ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications