Linkedin Layoff: ಮತ್ತೆ ಉದ್ಯೋಗಿಗಳಿಗೆ ಗೇಟ್ ಪಾಸ್ ನೀಡಲಿರುವ ಲಿಂಕ್ಡ್ಇನ್!
ದೆಹಲಿ ಅಕ್ಟೋಬರ್ 17: ದೇಶದಲ್ಲಿ ಹಲವೆಡೆ ಆರ್ಥಿಕ ನಷ್ಟದ ಕಾರಣ ಹೇಳಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಲಿಂಕ್ಡ್ಇನ್ ಕೂಡ ಸೇರಿದೆ. ಈ ವರ್ಷದಲ್ಲಿ ಲಿಂಕ್ಡ್ಇನ್ ಎರಡನೇ ಬಾರಿಗೆ ಅಧಿಕ ಸಂಖ್ಯೆಯಲ್ಲಿ ಉದ್ಯೋಗಿಗಳಿಗೆ ಗೇಟ್ ಪಾಸ್ ನೀಡಲು ಸಿದ್ಧವಾಗಿದೆ.
ಪ್ರತಿಷ್ಠಿತ ಲಿಂಕ್ಡ್ಇನ್ ಕಂಪನಿಯ ಒಟ್ಟು ಉದ್ಯೋಗಿಗಳ ಶೇಕಡಾ 3ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ಹೆಚ್ಚಿನ ಸಂಖ್ಯೆಯ ನೌಕರರು ಕೆಲಸ ಕಳೆದುಕೊಳ್ಳಲಿದ್ದಾರೆ. ಲಿಂಕ್ಡ್ಇನ್ ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವುದು ಇದೇ ಮೊದಲಲ್ಲ.

ಇದಕ್ಕೂ ಮೊದಲು ಇದೇ ವರ್ಷದಲ್ಲಿ ಹಲವು ಉದ್ಯೋಗಿಗಳನ್ನು ವಜಾಗೊಳಿಸಿತ್ತು. 2023ರ ಮೊದಲಾರ್ಧದಲ್ಲಿ ತಂತ್ರಜ್ಞಾನ ವಲಯ ಲಿಂಕ್ಡ್ಇನ್ 141,516 ಉದ್ಯೋಗಿಗಳನ್ನು ಶಾಶ್ವತವಾಗಿ ಮನೆಗೆ ಕಳುಹಿಸಿತ್ತು.
ಇದೇ ವರ್ಷದಲ್ಲಿ ಲಿಂಕ್ಡ್ಇನ್ ಮತ್ತೆ ತನ್ನ ಉದ್ಯೋಗಿಗಳಿಗೆ ಬಿಗ್ ಶಾಕ್ ಕೊಟ್ಟಿದೆ. ಎರಡನೇ ಸುತ್ತಿನ ಉದ್ಯೋಗ ಕಡಿತದಲ್ಲಿ ತನ್ನ ಎಂಜಿನಿಯರಿಂಗ್ ಮತ್ತು ಹಣಕಾಸು ತಂಡಗಳಾದ್ಯಂತ 668 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಮೈಕ್ರೋಸಾಫ್ಟ್ನ ಲಿಂಕ್ಡ್ಇನ್ ಹೇಳಿದೆ. ವೃತ್ತಿಪರರ ಸಾಮಾಜಿಕ ಮಾಧ್ಯಮ ನೆಟ್ವರ್ಕ್ ಲಿಂಕ್ಡ್ಇನ್ ಈ ವಜಾ ಪ್ರಕ್ರಿಯೆಗೆ ಸಿದ್ಧತೆ ನಡೆಸಿದೆ.
ಲಿಂಕ್ಡ್ಇನ್ನ ಈ ವಜಾ ಪ್ರಕ್ರಿಯೆಯು ಅದರ ಒಟ್ಟು 20,000 ಉದ್ಯೋಗಿಗಳಲ್ಲಿ 3% ಕ್ಕಿಂತ ಹೆಚ್ಚು ಪರಿಣಾಮ ಬೀರುತ್ತದೆ. ಕಂಪನಿಯ ಪ್ರಕಾರ ಈ ಉದ್ಯೋಗಿಗಳಲ್ಲಿ ಹೆಚ್ಚಿನವರು ಹಣಕಾಸು ಮತ್ತು ಎಂಜಿನಿಯರಿಂಗ್ ತಂಡಗಳಲ್ಲಿರುವವರಾಗಿರುತ್ತಾರೆ. ಕಂಪನಿಯ ಆರ್ಥಿಕ ಸಮಸ್ಯೆಗಳಿಂದಾಗಿ ಈ ವರ್ಷ ತಾಂತ್ರಿಕ ವಲಯದಲ್ಲಿ ಸಾವಿರಾರು ಮಂದಿ ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ.
ಉದ್ಯೋಗ ಸಂಸ್ಥೆ ಚಾಲೆಂಜರ್ ಗ್ರೇ & ಕ್ರಿಸ್ಮಸ್ ಪ್ರಕಾರ, ತಂತ್ರಜ್ಞಾನ ವಲಯ ಲಿಂಕ್ಡ್ಇನ್ 2023ರ ಮೊದಲಾರ್ಧದಲ್ಲಿ 141,516 ಉದ್ಯೋಗಿಗಳನ್ನು ವಜಾಗೊಳಿಸಿದೆ. ಒಂದು ವರ್ಷದ ಹಿಂದೆ 6,000 ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಗೇಟ್ ಪಾಸ್ ನೀಡಿತ್ತು. ಈ ವಲಯದಲ್ಲಿ ಇನ್ನೂ ಉದ್ಯೋಗಿಗಳನ್ನು ತೆಗೆದುಹಾಕುವ ಪ್ರಕ್ರಿಯೆ ಮುಂದುವರೆಯುತ್ತದೆ ಎಂದು ಹೇಳಲಾಗುತ್ತಿದೆ.
ಲಿಂಕ್ಡ್ಇನ್ ಜಾಹೀರಾತು ಮಾರಾಟದ ಮೂಲಕ ಮತ್ತು ಸದಸ್ಯತ್ವಕ್ಕಾಗಿ ವೃತ್ತಿಪರರಿಗೆ ಶುಲ್ಕ ವಿಧಿಸುವ ಮೂಲಕ ಹಣವನ್ನು ಗಳಿಸುತ್ತದೆ. ಲಿಂಕ್ಡ್ಇನ್ನ ಹೆಚ್ಚಿನ ಆದಾಯವು ಜಾಹೀರಾತುಗಳು ಮತ್ತು ಉದ್ಯೋಗಗಳನ್ನು ಹುಡುಕುವ ಅಭ್ಯರ್ಥಿಗಳಿಂದ ಬರುತ್ತದೆ. 2023 ರ ಆರ್ಥಿಕ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಲಿಂಕ್ಡ್ಇನ್ನ ಆದಾಯವು ವರ್ಷದಿಂದ ವರ್ಷಕ್ಕೆ 5% ರಷ್ಟು ಹೆಚ್ಚಾಗಿದೆ. ಆದರೆ ಕಳೆದ ತ್ರೈಮಾಸಿಕದಲ್ಲಿ ಈ ಬೆಳವಣಿಗೆಯು 10% ರಷ್ಟು ದಾಖಲಾಗಿದೆ.
ಹೀಗಾಗಿ ಉದ್ಯೋಗಿಗಳನ್ನು ವಜಾಗೊಳಿಸಲು ಕಂಪನಿ ನಿರ್ಧರಿಸಿದೆ. ತನ್ನ ಆರ್ಥಿಕ ಸಮಸ್ಯೆಗಳನ್ನು ಸರಿ ದೂಗಿಸುವ ನಿಟ್ಟಿನಲ್ಲಿ ಕಂಪನಿ ಈ ನಿರ್ಧಾರ ತೆಗೆದುಕೊಂಡಿದೆ.
-
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ












Click it and Unblock the Notifications