ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ಜೂನ್ 23ರೊಳಗೆ ಅರ್ಜಿ ಹಾಕಿ
ಕೊಪ್ಪಳ, ಜೂನ್ 17; ಕೊಪ್ಪಳ ಜಿಲ್ಲೆಯಲ್ಲಿ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಲು 7 ತಾಲೂಕಗಳ 122 ಗ್ರಾಮ ಪಂಚಾಯತಿಗಳಲ್ಲಿ 'ಗ್ರಾಮ ಕಾಯಕ ಮಿತ್ರ' ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 23ರ ಸಂಜೆ 4 ಗಂಟೆಯೊಳಗೆ ಆಯಾ ಗ್ರಾಮ ಪಂಚಾಯತಿಯಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 6 ಸಾವಿರ ರೂ. ಗಳನ್ನು ನಿಗದಿತ ಗೌರವ ಧನ ಹಾಗೂ ಕಾರ್ಯನಿರ್ವಹಣೆ ಆಧರಿಸಿ ರೂ. 5000 ಗಳನ್ನು ಪ್ರೋತ್ಸಾಹ ಧನವಾಗಿ ನೀಡಲಾಗುತ್ತದೆ.
ಕೊಪ್ಪಳದ ಹಿರೇಬಗನಾಳ, ಕೋಳೂರು, ಗೊಂಡಬಾಳ, ಬಿಸರಳ್ಳಿ, ಬಹದ್ದೂರ ಬಂಡಿ, ಗುಳದಳ್ಳಿ, ಬೆಟಗೇರಿ ಹಾಗೂ ಕಲಕೇರಿ. ಗಂಗಾವತಿ ತಾಲ್ಲೂಕಿನ ಆನೆಗುಂದಿ, ಮಲ್ಲಾಪುರ ಮತ್ತು ವೆಂಕಟಗಿರಿ. ಕನಕಗಿರಿ ತಾಲ್ಲೂಕಿನ ಹಿರೇಖೇಡಾ, ಗೌರಿಪುರ ಹಾಗೂ ನವಲಿ. ಕುಷ್ಟಗಿ ತಾಲ್ಲೂಕಿನ ತುಗ್ಗಲದೋಣಿ, ಹನುಮನಾಳ, ಕ್ಯಾದಿಗುಪ್ಪಾ. ಕುಕನೂರು ತಾಲ್ಲೂಕಿನ ಬೆಣಕಲ್, ಮಂಗಳೂರು, ಶಿರೂರು, ಬಳಗೇರಿ. ಯಲಬುರ್ಗಾ ತಾಲ್ಲೂಕಿನ ಚಿಕ್ಕಮ್ಯಾಗೇರಿ, ಗೆದಗೇರಿ, ಹಿರೇಅರಳಿಹಳ್ಳಿ, ಮಾಟಲದಿನ್ನಿ, ಮುರಡಿ, ತುಮ್ಮರಗುದ್ದಿ ಹಾಗೂ ವಣಗೇರಿ ಗ್ರಾಮ ಪಂಚಾಯತಿಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಯು 2021ರ ಜನವರಿ 1 ಕ್ಕೆ ಅನ್ವಯಿಸುವಂತೆ ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್ಕಾರ್ಡ್ ಹೊಂದಿರಬೇಕು.
ಕನಿಷ್ಟ 10ನೇ ತರಗತಿ ಉತ್ತಿರ್ಣರಾಗಿರುವ ಹಾಗೂ 2021 ರ ಜನವರಿ 1ಕ್ಕೆ ಅನ್ವಯಿಸುವಂತೆ 45 ವರ್ಷ ವಯೋಮಿತಿ ಮೀರಿರದ, ಕನ್ನಡ ಓದಲು ಮತ್ತು ಬರೆಯಲು ಬರುವ, ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ ಕನಿಷ್ಟ 2 ವರ್ಷ ಯೋಜನೆಯಡಿ ಅಕುಶಲ ಕಾರ್ಮಿಕರಾಗಿ ಕೆಲಸ ನಿರ್ವಹಿಸಿರಬೇಕು. ಪರಿಣಾಮಕಾರಿ ಸಂವಹನ ಕೌಶಲ್ಯ , ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣಲಕ್ಷಣ ಹೊಂದಿರಬೇಕು.
ಗ್ರಾಮ ರೋಜ್ಗಾರ್ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು, ಇದಕ್ಕೆ ಗ್ರಾಮ ರೋಜಗಾರ್ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ಕೊಪ್ಪಳ 9740584237, ಗಂಗಾವತಿ 9738834935, ಕನಕಗಿರಿ 8970118015, ಕುಷ್ಟಗಿ 8722424848, ಕುಕನೂರ 9743284330, ಯಲಬುರ್ಗಾ 8088169774 ಸಂಖ್ಯೆಗೆ ಕರೆ ಮಾಡಬಹುದು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications