Ministery of Textiles Recruitment 2023: 06 ಖಾಲಿ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ
ನವದೆಹಲಿ, ಜನವರಿ 13: ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಆಸಕ್ತರಿಗೆ ಇಲ್ಲೊಂದು ಸುವರ್ಣ ಅವಕಾಶ ಇದೆ. ಕೇಂದ್ರ ಜವಳಿ ಸಚಿವಾಲಯವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಇದಕ್ಕೆ 10ನೇ ತರಗತಿ ಪಾಸಾದವರು ಸಹ ಅರ್ಜಿ ಸಲ್ಲಿಬಹುದು.
ಜವಳಿ ಸಚಿವಾಲಯದಲ್ಲಿ ಸೀನಿಯರ್ ಪ್ರಿಂಟರ್, ಜೂನಿಯರ್ ವೀವರ್ ಸೇರಿ ಒಟ್ಟು 6 ಹುದ್ದೆಗಳು ಖಾಲಿ ಇವೆ. ಆಸಕ್ತರು ಜನವರಿ 31 ರೊಳಗೆ ಆಪ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ನೀಡಿರುವ ಈ ಅವಕಾಶ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಲಾಗಿದೆ.
ಕೇಂದ್ರ ಜವಳಿ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹರೆ, ವಿಧಾನ, ವಯೋಮಿತಿ, ವೇತನ ಮುಂತಾದ ಅಂಶಗಳ ಬಗ್ಗೆ ತಿಳಿಯಿರಿ.

ಖಾಲಿ ಹುದ್ದೆಗಳ ವಿವರ
ಹಿರಿಯ ಪ್ರಿಂಟರ್-1
ಕಿರಿಯ ವೀವರ್-1
ಕಿರಿಯ ಪ್ರಿಂಟರ್-1
ಕಿರಿಯ ಸಹಾಯಕ (ವೀವಿಂಗ್)-2
ಅಟೆಂಡೆಂಟ್ (ವೀವಿಂಗ್)-1
ವಯೋಮಿತಿ- ಅರ್ಹತೆ ಏನು?
ಜವಳಿ ಸಚಿವಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು 2022ರ ಡಿಸೆಂಬರ್ 31 ಗರಿಷ್ಠ 30 ವರ್ಷ ಮೀರಿರಬಾರದು. ಅದೇ ರೀತಿ ಅಭ್ಯರ್ಥಿಗಳು ಅರ್ಹತೆ ನೋಡುವುದಾದರೆ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥಾವ ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಡಿಪ್ಲೋಮಾ ಪಾಸಾಗಿರಬೇಕು.
ವಯಸ್ಸಿನ ಸಡಿಲಿಕೆ ಮಾಹಿತಿ
ಪರಿಶಿಷ್ಟ ಜಾತಿ ಅಭ್ಯರ್ಥಿಗಳು- 5 ವರ್ಷ
ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳು- 3 ವರ್ಷ
ಸರ್ಕಾರಿ ನೌಕರರು- 10 ವರ್ಷ

ವೇತನ -ಉದ್ಯೋಗದ ಸ್ಥಳ
ಜವಳಿ ಸಚಿವಾಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಆರುಗಳಿಗೆ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 5,200-20,200 ರೂಪಾಯಿವರೆಗೆ ದೊರೆಯಲಿದೆ. ಆಯ್ಕೆಯಾಗಲಿರುವ ಅಭ್ಯರ್ಥಿಗಳು ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳದಲ್ಲಿ ಕೆಲಸಕ್ಕೆ ನಿಯೋಜಿಸಲಾಗುವುದು. ಲಿಖಿತ ಹಾಗೂ ಪ್ರಾಯೋಗಿಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆ ತಿಳಿಸುವುದು.
ಅರ್ಜಿ ಸಲ್ಲಿಕೆ ವಿಧಾನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ನಿರ್ದೇಶಕರು (ದಕ್ಷಿಣ ವಲಯ), ನೇಕಾರರ ಸೇವಾ ಕೇಂದ್ರ, ಸಿ.1.ಬಿ, ರಾಜಾಜಿ ಭವನ, ಬೆಸೆಂಟ್ ನಗರ, ಚೆನ್ನೈ-600090 ಈ ವಿಳಾಸಕ್ಕೆ ಕಳುಹಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ handlooms.nic.in ಗೆ ಭೇಟಿ ನೀಡಬಹುದು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications