Get Updates
Get notified of breaking news, exclusive insights, and must-see stories!

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 18 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ

ಬೆಂಗಳೂರು ಮಾರ್ಚ್ 12: ಹಂಪಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕೆಟ್ಟದಾಗಿ ಬೆಳಕಿಗೆ ತಂದಿರುವ ಸಮಯದಲ್ಲಿ ಪೊಲೀಸ್ ಇಲಾಖೆಯಲ್ಲಿ 18,581 ಹುದ್ದೆಗಳು ಖಾಲಿ ಇವೆ ಎಂದು ಅಂಕಿಅಂಶಗಳು ಬಹಿರಂಗಪಡಿಸಿವೆ. 1,11,330 ರ ಅನುಮೋದಿತ ಬಲಕ್ಕೆ ಹೋಲಿಸಿದರೆ, ಪೊಲೀಸ್ ಪಡೆಯಲ್ಲಿ 16.69% ಸಿಬ್ಬಂದಿ ಕೊರತೆ ಇದೆ.

ಇದಲ್ಲದೆ ಕರ್ನಾಟಕದಲ್ಲಿ ಪೊಲೀಸ್-ಸಾರ್ವಜನಿಕ ಅನುಪಾತವು 1 ಲಕ್ಷ ಜನಸಂಖ್ಯೆಗೆ 165.04 ರಷ್ಟಿದೆ. ಇದು ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ (ಬಿಪಿಆರ್ ಮತ್ತು ಡಿ) ಪ್ರಕಾರ ರಾಷ್ಟ್ರೀಯ ಸರಾಸರಿ 196.88 ಕ್ಕೆ ಹೋಲಿಸಿದರೆ ತುಂಬಾ ಕಡಿಮೆಯಾಗಿದೆ.

More than 18 thousand posts are vacant in Karnataka Police Department

ಪ್ರಸ್ತುತ ಪೊಲೀಸ್ ಪಡೆಯಲ್ಲಿ ಅನುಮೋದಿತ ಬಲ 1,11,330 ರಷ್ಟಿದ್ದು, ನಿಜವಾದ ಬಲ 92,749 ರಷ್ಟಿದೆ. ಅಧಿಕೃತ ಮಾಹಿತಿಯ ಪ್ರಕಾರ 6,591 ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳು ಮತ್ತು 819 ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳು ಖಾಲಿ ಉಳಿದಿವೆ. ಹೆಚ್ಚುವರಿಯಾಗಿ 2,107 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ನಗರ ಸಶಸ್ತ್ರ ಮೀಸಲು/ಜಿಲ್ಲಾ ಸಶಸ್ತ್ರ ಮೀಸಲು) ಮತ್ತು 3,830 ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಕರ್ನಾಟಕ ರಾಜ್ಯ ಮೀಸಲು ಪೊಲೀಸ್) ಹುದ್ದೆಗಳು ಭರ್ತಿಯಾಗಿಲ್ಲ.

ಮಂಗಳವಾರ ನಡೆದ ವಿಧಾನಸಭಾ ಅಧಿವೇಶನದಲ್ಲಿ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಸಿಎನ್ ಕೇಳಿದ ಪ್ರಶ್ನೆಗೆ ಕರ್ನಾಟಕ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈ ವಿವರಗಳನ್ನು ನೀಡಿದರು. ಈ ಖಾಲಿ ಹುದ್ದೆಗಳ ಭರ್ತಿ ಕುರಿತು ಮಾತನಾಡಿದ ಡಾ. ಪರಮೇಶ್ವರ್, 600 ಸಬ್-ಇನ್ಸ್‌ಪೆಕ್ಟರ್‌ಗಳು ಸೇರಿದಂತೆ 4,115 ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ ಮತ್ತು ಅದಕ್ಕೆ ನೇಮಕಾತಿ ಅಧಿಸೂಚನೆಯನ್ನು ಇನ್ನೂ ಹೊರಡಿಸಲಾಗಿಲ್ಲ ಎಂದು ಹೇಳಿದರು.

ಸಿಬ್ಬಂದಿ ಕೊರತೆಯು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ, ಸಾರ್ವಜನಿಕ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ವಿವಿಧ ಸವಾಲುಗಳಿಗೆ ಕಾರಣವಾಗುತ್ತದೆ. ಇದು ಅಸ್ತಿತ್ವದಲ್ಲಿರುವ ಸಿಬ್ಬಂದಿಯ ಮೇಲೆ ಹೆಚ್ಚಿನ ಕೆಲಸದ ಒತ್ತಡವನ್ನುಂಟು ಮಾಡುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

More than 18 thousand posts are vacant in Karnataka Police Department

ಹಂಪಿಯಲ್ಲಿ ವಿದೇಶ ಮಹಿಳೆ ಮೇಲೆ ಅತ್ಯಾಚಾರ ಕೇಸ್

ಐತಿಹಾಸಿಕ ಪ್ರಸಿದ್ದ ಪ್ರವಾಸಿ ತಾಣವಾದ ಹಂಪಿ ವೀಕ್ಷಣೆಗೆ ಬಂದಿದ್ದ 27 ವರ್ಷದ ಇಸ್ರೇಲಿ ಪ್ರವಾಸಿ ಮತ್ತು 29 ವರ್ಷದ ಹೋಂ ಸ್ಟೇ ಒಡತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಹಂಪಿಯಲ್ಲಿ ಮಾರ್ಚ್ 6 ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಅಲ್ಲದೆ ಮೂವರು ಪ್ರವಾಸಿಗರ ಮೇಲೆ ದಾಳಿ ಮಾಡಿದ ಮೂವರು ದುಷ್ಕರ್ಮಿಗಳು ಪಕ್ಕದಲ್ಲಿದ್ದ ಹಂಪಿ ಬಳಿ ಇದ್ದ ಸಾಣಾಪುರ ಕಾಲುವೆ ತಳ್ಳಿ ಹೋಗಿದ್ದರು. ಕಾಲುವೆಗೆ ತಳ್ಳಲ್ಲಪಟ್ಟ ಮೂವರು ಪ್ರವಾಸಿಗರಲ್ಲಿ ಒಡಿಶಾದ 29 ವರ್ಷದ ಬಿಭಾಸ್ ನಾಯಕ್ ಸಾವನ್ನಪ್ಪಿದ್ದರು.

ಕರ್ನಾಟಕ ಮಾತ್ರವಲ್ಲದೆ ದೇಶವೇ ತಲೆತಗ್ಗಿಸುವಂತೆ ಮಾಡಿದ ಐತಿಹಾಸಿಕ ಹಂಪಿ ಬಳಿಯ ಅತ್ಯಾಚಾರ ಪ್ರಕರಣದಲ್ಲಿ ಮೂರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದ ಇಬ್ಬರು ಆರೋಪಿಗಳನ್ನು ಅತ್ಯಾಚಾರ ಪ್ರಕರಣ ನಡೆದು ಒಂದು ದಿನದಲ್ಲಿ ಬಂಧಿಸಲಾಯಿತು. ಮೂರನೇ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಮೂವರು ಆರೋಪಿಗಳಲ್ಲಿ ಇಬ್ಬರನ್ನು ಪೊಲೀಸರು ಶನಿವಾರ ಬಂಧಿಸಿದ್ದರು. ಮಲ್ಲೇಶ್ ಮತ್ತು ಚೇತನ್ ಸಾಯಿ ಮೂಲಕ ಪೊಲೀಸರು ಬಸವ ಇದ್ದ ಸ್ಥಳವನ್ನು ಪತ್ತೆಹಚ್ಚಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+