ಎಂಎನ್ಸಿ ಕಂಪನಿಗಳಿಂದ 2,00,000ಕ್ಕೂ ಹೆಚ್ಚು ಉದ್ಯೋಗ ಸೃಷ್ಠಿ
ನವದೆಹಲಿ, ಮೇ 21: ದೇಶಾದ್ಯಂತ ಕೋವಿಡ್ -19 ಪ್ರಕರಣಗಳಲ್ಲಿ ಇಳಿಕೆಯೊಂದಿಗೆ, ಹೆಚ್ಚಿನ ಕಂಪನಿಗಳು ಈಗ ತಮ್ಮ ಉದ್ಯೋಗಿಗಳನ್ನು ಕಚೇರಿಯಿಂದಲೇ ಕೆಲಸ ಮಾಡುವುದಕ್ಕೆ ಬಯಸುತ್ತಿವೆ. ಜೊತೆಗೆ ಹಲವು ಕಂಪನಿಗಳು ತಮ್ಮ ಉದ್ಯೋಗಿಗಳನ್ನು ಮತ್ತೆ ಕಚೇರಿಗಳಿಗೆ ಕರೆತರಲು ತೀವ್ರ ಆಸಕ್ತಿಯನ್ನು ತೋರಿಸುತ್ತಿವೆ. ಈಗಾಗಲೇ ಕೋವಿಡ್ ಸಾಂಕ್ರಾಮಿಕ ನಂತರದ ಅವಧಿಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಗತಿಯಲ್ಲಿ ಏರಿಕೆ ಕಂಡಿವೆ ವರದಿಯಿಂದ ತಿಳಿದುಬಂದಿದೆ.
ಕೈಗಾರಿಕೆಗಳ ಪುನರಾರಂಭದ ಮಧ್ಯೆ, ಭಾರತೀಯ ಮೂಲದ ಬಹುರಾಷ್ಟ್ರೀಯ ಸಂಸ್ಥೆಗಳು ತಮ್ಮ ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸಲು ಸಿದ್ಧವಾಗಿವೆ. ಎಕಾನಾಮಿಕ್ಸ್ ಟೈಮ್ಸ್ ವರದಿಯ ಪ್ರಕಾರ ಭಾರತದಲ್ಲಿ ಅಸ್ತಿತ್ವದಲ್ಲಿರುವ ಮತ್ತು ಮುಂಬರುವ ಜಾಗತಿಕ ಸಾಮರ್ಥ್ಯ ಕೇಂದ್ರಗಳು(ಜೆಸಿಸಿ) ಈ ವರ್ಷಾಂತ್ಯದ ವೇಳೆಗೆ ಸುಮಾರು 1,80, 000 ದಿಂದ 2,00,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಯೋಜಿಸುತ್ತಿವೆ ಎಂದು ತಿಳಿದುಬಂದಿದೆ.
ಎಲ್ಲಿಲ್ಲಿ ಉದ್ಯೋಗವಕಾಶ
ವಿಶೇಷ ಸಿಬ್ಬಂದಿ ಸಂಸ್ಥೆ Xpheno ಪ್ರಕಾರ, ಅಮೆಕ್ಸ್, ಬ್ಯಾಂಕ್ ಆಫ್ ಅಮೇರಿಕಾ, ವೆಲ್ಸ್ ಫಾರ್ಗೋ, ಸಿಟಿ, ಬಾರ್ಕ್ಲೇಸ್, ಮಾರ್ಗಾನ್ ಸ್ಟಾನ್ಲಿ, ಎಚ್ಎಸ್ಬಿಸಿ, ಸ್ಟ್ಯಾಂಡರ್ಡ್ ಚಾರ್ಟರ್ಡ್, ಗೋಲ್ಡ್ಮನ್ ಸ್ಯಾಚ್ಸ್, ಅಮೆಜಾನ್, ಟಾರ್ಗೆಟ್, ವಾಲ್ಮಾರ್ಟ್, ಶೆಲ್, ಜಿಎಸ್ಕೆ, ಅಬಾಟ್, ಫಿಜರ್, ಜೆ&ಜೆ, ನೊವಾರ್ಟಿಸ್ ಮತ್ತು ಅಸ್ಟ್ರಾಜೆನೆಕಾ ಸೇರಿದಂತೆ ಹಲವಾರು ಸಂಸ್ಥೆಗಳು ನೇಮಕಾತಿ ಆರಂಭಿಸಿವೆ. ಸಾಂಕ್ರಾಮಿಕ ನಂತರದ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾದ ನಂತರ ತ್ವರಿತಗತಿಯ ನೇಮಕಾತಿಗೆ ಹಲವು ಕಂಪನಿಗಳು ಮುಂದಾಗಿವೆ ಎಂದು Xpheno ಸಹಸಂಸ್ಥಾಪಕ ಅನಿಲ್ ಎಥನೂರ್ ತಿಳಿಸಿದ್ದಾರೆ.

ಯಾರಿಗೆ ಬೇಡಿಕೆ ಹೆಚ್ಚು
ಸಾಂಕ್ರಮಿಕದ ನಂತರ ಪ್ರಪಂಚ ಹೆಚ್ಚು ಡಿಜಿಟಲ್ಗೆ ಮಾರುಹೋಗಿದೆ. ಟೆಕ್ ಮತ್ತು ಡಿಜಿಟಿಲ್ ತಾಣಗಳಲ್ಲಿ ಬೇಡಿಕೆ ಹೆಚ್ಚಾಗಿದೆ. ಕೋರ್ ಡೆವೆಲ್ಪ್ಮೆಂಟ್, ಡೆವೋಪ್ಸ್, ಕ್ಲೌಡ್ ಮತ್ತು ಸೈಬರ್ ಸೆಕ್ಯುರಿಟಿ, ವರ್ಚುವಲೈಸೇಶನ್, ಡೇಟಾ ಅನಾಲಿಟಿಕ್ಸ್ ಮತ್ತು ಎಂಟರ್ಪ್ರೈಸ್ ಮೊಬಿಲಿಟಿಯಲ್ಲಿ ಹೆಚ್ಚು ಬೇಡಿಕೆ ಉಂಟಾಗಿದೆ. ಅದರ ಹೊರತಾಗಿ, ಆರ್ಟಿಫಿಸಿಯಲ್ ಇಂಟಲಿಜೆನ್ಸ್, ಮಷಿನ್ ಲರ್ನಿಂಗ್, ಇಂಟರ್ನೆಟ್ ಆಫ್ ತಿಂಗ್ಸ್(IoT), ರೊಬೊಟಿಕ್ ಪ್ರೋಸಸ್ ಆಟೊಮೇಷನ್ (RPA) ಮತ್ತು ಬ್ಲಾಕ್ಚೈನ್ನಲ್ಲಿನ ಕಾರ್ಯನಿರ್ವಹಿಸುವವರಿಗೆ ಬೇಡಿಕೆಯಿದೆ.

Xpheno ಒದಗಿಸಿದ ಮಾಹಿತಿಯ ಪ್ರಕಾರ, ಪ್ರಸ್ತುತ ದೇಶಾದ್ಯಂತ ಬ್ಯಾಂಕಿಂಗ್, ಹಣಕಾಸು ಸೇವೆಗಳು ಮತ್ತು ವಿಮೆ (BFSI), ಐಟಿ ಸಾಫ್ಟ್ವೇರ್, ಆಟೋಮೋಟಿವ್, ಫಾರ್ಮಾಸ್ಯುಟಿಕಲ್ಸ್, ಚಿಲ್ಲರೆ , ತೈಲ ಮತ್ತು ಅನಿಲ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಒಟ್ಟಾಗಿ 2021-22ರಲ್ಲಿ ಭಾರತದಲ್ಲಿ ಸುಮಾರು 1,70,000 ಉದ್ಯೋಗಗಳನ್ನು ತೆರೆದಿದ್ದವು, ಆದರೆ ಒಟ್ಟು 3,50,000 ನೇಮಕಾತಿಯಾಗಿತ್ತು. ಈ ವರ್ಷದಲ್ಲಿ 2 ಲಕ್ಷದಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications