ನವೋದಯದಲ್ಲಿ 5000 ಬೋಧಕ, ಬೋಧಕೇತರ ಹುದ್ದೆಗೆ ನೇಮಕಾತಿ
ಬೆಂಗಳೂರು, ನವೆಂಬರ್ 2: ನವೋದಯ ವಿದ್ಯಾಲಯ ಸಮಿತಿ (ಎನ್ವಿಎಸ್) 5000 ಬೋಧಕ ಮತ್ತು ಬೋಧಕೇತರ ಉದ್ಯೋಗಗಳಿಗೆ ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸುತ್ತಿದೆ.
ಎನ್ವಿಎಸ್ ನೇಮಕಾತಿ 2022 ನೋಂದಣಿ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಇದು ಫೆಬ್ರವರಿ 2023ರೊಳಗೆ ಪೂರ್ಣಗೊಳ್ಳುತ್ತದೆ. ಇಲ್ಲಿ ಕೆಲವು ಹುದ್ದೆಗಳನ್ನು ಕೊನೆಯ ಸುತ್ತಿನ ಬಡ್ತಿಗಳ ಮೂಲಕ ಭರ್ತಿ ಮಾಡಲಾಗುತ್ತದೆ. ಜುಲೈನಲ್ಲಿ ಶಿಕ್ಷಣ ಸಚಿವಾಲಯವು 2021 ರ ಹೊತ್ತಿಗೆ, ಕೇಂದ್ರ ಸರ್ಕಾರವು ನಿರ್ವಹಿಸುವ ನವೋದಯ ವಿದ್ಯಾಲಯಗಳಲ್ಲಿ ಬೋಧಕ ಹುದ್ದೆಗಳಲ್ಲಿ 3,156 ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿತ್ತು. ಈ ಪೈಕಿ ಜಾರ್ಖಂಡ್ನಲ್ಲಿ (230) ಅತಿ ಹೆಚ್ಚು ಹುದ್ದೆಗಳು ಖಾಲಿ ಇವೆ.
ಶಿಕ್ಷಣ ಸಚಿವಾಲಯದ ಸಂಯೋಜಿತ ನವೋದಯ ವಿದ್ಯಾಲಯ ಸಂಘಟನೆ ನಾಲ್ಕು ತಿಂಗಳಲ್ಲಿ ಸುಮಾರು ಐದು ಸಾವಿರ ಉದ್ಯೋಗಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದೆ. ಈ ಹುದ್ದೆಗಳು ಬೋಧಕ ಮತ್ತು ಬೋಧಕೇತರ ವಿಭಾಗಗಳಾಗಿರುತ್ತದೆ. ದೇಶಾದ್ಯಂತ ಸುಮಾರು 700 ವಸತಿ ನವೋದಯ ವಿದ್ಯಾಲಯಗಳಿವೆ ಎಂದು ಸಚಿವಾಲಯದ ಟ್ವೀಟ್ ಮಾಡಿದೆ.

ನೂತನ ಶಿಕ್ಷಣ ನೀತಿ (ಎನ್ಇಪಿ) 2020 ರ ಶಿಫಾರಸುಗಳನ್ನು ಜಾರಿಗೊಳಿಸುವ ಅಗತ್ಯವನ್ನು ಪರಿಗಣಿಸಿ ಎನ್ವಿಎಸ್ ನೇಮಕಾತಿ ಪ್ರಕ್ರಿಯೆ 2022 ಅನ್ನು ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ದೇಶದ ಪ್ರತಿ ಶಾಲೆಯಲ್ಲಿ 30:1 ರ ವಿದ್ಯಾರ್ಥಿ- ಶಿಕ್ಷಕರ ಅನುಪಾತವನ್ನು ಕಡ್ಡಾಯ ನಿರ್ವಹಿಸಬೇಕು ಎಂದು ನೀತಿ ನಿಯಮ ಹೇಳುತ್ತದೆ. ಹೆಚ್ಚಿನ ಸಂಖ್ಯೆಯ ಸಾಮಾಜಿಕ- ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಹೊಂದಿರುವ ಪ್ರದೇಶಗಳಲ್ಲಿ 25:1ಕ್ಕಿಂತ ಕಡಿಮೆ ವಿದ್ಯಾರ್ಥಿ- ಶಿಕ್ಷಕರ ಅನುಪಾತವನ್ನು ಗುರಿಯಾಗಿಟ್ಟುಕೊಳ್ಳಬೇಕು ಎಂದು ನೀತಿ ಹೇಳುತ್ತದೆ.
ನವೋದಯ ವಿದ್ಯಾಲಯಗಳು ಸಹ- ಶಿಕ್ಷಣ ವಸತಿ ಶಾಲೆಗಳಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಸ್ಥಾಪಿಸಲಾಗಿದೆ. ಎನ್ವಿಎಸ್ ಪ್ರಸ್ತುತ ದೇಶದಾದ್ಯಂತ ಹರಡಿರುವ ಸುಮಾರು 700 ವಸತಿ ಶಾಲೆಗಳನ್ನು ನಿರ್ವಹಿಸುತ್ತಿದೆ. ಈ ಶಾಲೆಗಳು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಸಿ) ನಿಗದಿಪಡಿಸಿದ ಪಠ್ಯಕ್ರಮವನ್ನು ಅನುಸರಿಸುತ್ತವೆ. ಇದು 6ರಿಂದ 12ನೇ ತರಗತಿವರೆಗಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ವಸತಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತವೆ.

ನೂತನ ಶಿಕ್ಷಣ ನೀತಿ 2020 ದೇಶದಾದ್ಯಂತ ಹೆಚ್ಚಿನ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಲು ಶಿಫಾರಸು ಮಾಡಿದೆ. ಸ್ಥಳೀಯವಾಗಿ ವಾಸಿಸುವ ಮಕ್ಕಳಿಗೆ ಉತ್ತಮ ಗುಣಮಟ್ಟದ ಶೈಕ್ಷಣಿಕ ಅವಕಾಶಗಳನ್ನು ಹೆಚ್ಚಿಸಲು ಮಹತ್ವಾಕಾಂಕ್ಷೆಯ ಜಿಲ್ಲೆಗಳು, ವಿಶೇಷ ಶಿಕ್ಷಣ ವಲಯಗಳು ಮತ್ತು ಇತರ ಅನನುಕೂಲಕರ ಪ್ರದೇಶಗಳಲ್ಲಿ ಈ ಶಾಲೆಗಳನ್ನು ಸ್ಥಾಪಿಸುವ ಅಗತ್ಯವನ್ನು ಒತ್ತಿಹೇಳಲಾಗಿದೆ.
-
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications