ನವೋದಯದಲ್ಲಿ 5000 ಬೋಧಕ, ಬೋಧಕೇತರ ಹುದ್ದೆಗೆ ನೇಮಕಾತಿ
ಬೆಂಗಳೂರು, ನವೆಂಬರ್ 2: ನವೋದಯ ವಿದ್ಯಾಲಯ ಸಮಿತಿ (ಎನ್ವಿಎಸ್) 5000 ಬೋಧಕ ಮತ್ತು ಬೋಧಕೇತರ ಉದ್ಯೋಗಗಳಿಗೆ ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸುತ್ತಿದೆ.
ಎನ್ವಿಎಸ್ ನೇಮಕಾತಿ 2022 ನೋಂದಣಿ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಇದು ಫೆಬ್ರವರಿ 2023ರೊಳಗೆ ಪೂರ್ಣಗೊಳ್ಳುತ್ತದೆ. ಇಲ್ಲಿ ಕೆಲವು ಹುದ್ದೆಗಳನ್ನು ಕೊನೆಯ ಸುತ್ತಿನ ಬಡ್ತಿಗಳ ಮೂಲಕ ಭರ್ತಿ ಮಾಡಲಾಗುತ್ತದೆ. ಜುಲೈನಲ್ಲಿ ಶಿಕ್ಷಣ ಸಚಿವಾಲಯವು 2021 ರ ಹೊತ್ತಿಗೆ, ಕೇಂದ್ರ ಸರ್ಕಾರವು ನಿರ್ವಹಿಸುವ ನವೋದಯ ವಿದ್ಯಾಲಯಗಳಲ್ಲಿ ಬೋಧಕ ಹುದ್ದೆಗಳಲ್ಲಿ 3,156 ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿತ್ತು. ಈ ಪೈಕಿ ಜಾರ್ಖಂಡ್ನಲ್ಲಿ (230) ಅತಿ ಹೆಚ್ಚು ಹುದ್ದೆಗಳು ಖಾಲಿ ಇವೆ.
ಶಿಕ್ಷಣ ಸಚಿವಾಲಯದ ಸಂಯೋಜಿತ ನವೋದಯ ವಿದ್ಯಾಲಯ ಸಂಘಟನೆ ನಾಲ್ಕು ತಿಂಗಳಲ್ಲಿ ಸುಮಾರು ಐದು ಸಾವಿರ ಉದ್ಯೋಗಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದೆ. ಈ ಹುದ್ದೆಗಳು ಬೋಧಕ ಮತ್ತು ಬೋಧಕೇತರ ವಿಭಾಗಗಳಾಗಿರುತ್ತದೆ. ದೇಶಾದ್ಯಂತ ಸುಮಾರು 700 ವಸತಿ ನವೋದಯ ವಿದ್ಯಾಲಯಗಳಿವೆ ಎಂದು ಸಚಿವಾಲಯದ ಟ್ವೀಟ್ ಮಾಡಿದೆ.

ನೂತನ ಶಿಕ್ಷಣ ನೀತಿ (ಎನ್ಇಪಿ) 2020 ರ ಶಿಫಾರಸುಗಳನ್ನು ಜಾರಿಗೊಳಿಸುವ ಅಗತ್ಯವನ್ನು ಪರಿಗಣಿಸಿ ಎನ್ವಿಎಸ್ ನೇಮಕಾತಿ ಪ್ರಕ್ರಿಯೆ 2022 ಅನ್ನು ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ದೇಶದ ಪ್ರತಿ ಶಾಲೆಯಲ್ಲಿ 30:1 ರ ವಿದ್ಯಾರ್ಥಿ- ಶಿಕ್ಷಕರ ಅನುಪಾತವನ್ನು ಕಡ್ಡಾಯ ನಿರ್ವಹಿಸಬೇಕು ಎಂದು ನೀತಿ ನಿಯಮ ಹೇಳುತ್ತದೆ. ಹೆಚ್ಚಿನ ಸಂಖ್ಯೆಯ ಸಾಮಾಜಿಕ- ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಹೊಂದಿರುವ ಪ್ರದೇಶಗಳಲ್ಲಿ 25:1ಕ್ಕಿಂತ ಕಡಿಮೆ ವಿದ್ಯಾರ್ಥಿ- ಶಿಕ್ಷಕರ ಅನುಪಾತವನ್ನು ಗುರಿಯಾಗಿಟ್ಟುಕೊಳ್ಳಬೇಕು ಎಂದು ನೀತಿ ಹೇಳುತ್ತದೆ.
ನವೋದಯ ವಿದ್ಯಾಲಯಗಳು ಸಹ- ಶಿಕ್ಷಣ ವಸತಿ ಶಾಲೆಗಳಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಸ್ಥಾಪಿಸಲಾಗಿದೆ. ಎನ್ವಿಎಸ್ ಪ್ರಸ್ತುತ ದೇಶದಾದ್ಯಂತ ಹರಡಿರುವ ಸುಮಾರು 700 ವಸತಿ ಶಾಲೆಗಳನ್ನು ನಿರ್ವಹಿಸುತ್ತಿದೆ. ಈ ಶಾಲೆಗಳು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಸಿ) ನಿಗದಿಪಡಿಸಿದ ಪಠ್ಯಕ್ರಮವನ್ನು ಅನುಸರಿಸುತ್ತವೆ. ಇದು 6ರಿಂದ 12ನೇ ತರಗತಿವರೆಗಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ವಸತಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತವೆ.

ನೂತನ ಶಿಕ್ಷಣ ನೀತಿ 2020 ದೇಶದಾದ್ಯಂತ ಹೆಚ್ಚಿನ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಲು ಶಿಫಾರಸು ಮಾಡಿದೆ. ಸ್ಥಳೀಯವಾಗಿ ವಾಸಿಸುವ ಮಕ್ಕಳಿಗೆ ಉತ್ತಮ ಗುಣಮಟ್ಟದ ಶೈಕ್ಷಣಿಕ ಅವಕಾಶಗಳನ್ನು ಹೆಚ್ಚಿಸಲು ಮಹತ್ವಾಕಾಂಕ್ಷೆಯ ಜಿಲ್ಲೆಗಳು, ವಿಶೇಷ ಶಿಕ್ಷಣ ವಲಯಗಳು ಮತ್ತು ಇತರ ಅನನುಕೂಲಕರ ಪ್ರದೇಶಗಳಲ್ಲಿ ಈ ಶಾಲೆಗಳನ್ನು ಸ್ಥಾಪಿಸುವ ಅಗತ್ಯವನ್ನು ಒತ್ತಿಹೇಳಲಾಗಿದೆ.
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications