NCBS Recruitment: ಬೆಂಗಳೂರಿನಲ್ಲಿ ಮಾಸಿಕ ₹1,00,000 ವೇತನದ ಉದ್ಯೋಗ ಖಾಲಿ ಇದೆ
ಬೆಂಗಳೂರು, ಸೆಪ್ಟಂಬರ್ 15: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ (NCBS) ತನ್ನಲ್ಲಿರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಇದಕ್ಕೆ ಸಂಬಂಧಿದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಕಸ್ತರು ಸೆಪ್ಟೆಂಬರ್ 20ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಬೆಂಗಳೂರಿನಲ್ಲಿ ಉದ್ಯೋಗ ಪಡೆಯುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ.
ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ (NCBS) ಒಂದು ಪ್ರೋಗ್ರಾಂ ಮ್ಯಾನೇಜರ್ ಹುದ್ದೆ ಖಾಲಿ ಇದೆ. ಕೂಡಲೇ ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಕೈತುಂಬ ವೇತನದ ಕೆಲಸ ಸಿಗಲಿದೆ. ಈ ಕುರಿತು ಹೆಚ್ಚಿನ ಮಾಹಿತಿ, ವಿದ್ಯಾರ್ಹತೆ, ವಯೋಮಿತಿ ಸಡಿಲಿಕೆ ಬಗ್ಗೆ ಇಲ್ಲಿ ಮುಂದೆ ಓದಿ.

ನೇಮಕಾತಿ ಪೂರ್ಣ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ (NCBS)
ಹುದ್ದೆ ಹೆಸರು: ಪ್ರೋಗ್ರಾಂ ಮ್ಯಾನೇಜರ್
ಖಾಲಿ ಹುದ್ದೆಗಳು: ಒಂದು
ಮಾಸಿಕ ವೇತನ: 1,00,000 ರೂಪಾಯಿ
ಅರ್ಜಿ ಸಲ್ಲಿಕೆ ಕೊನೆ ದಿನ: ಸೆಪ್ಟಂಬರ್ 20
ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್
ವಿದ್ಯಾರ್ಹತೆ ಮಾಹಿತಿ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಲ್ಲಿ ಕಡ್ಡಾಯವಾಗಿ ನ್ಯಾಚುರಲ್ ಸೈನ್ಸಸ್/ ಎಂಜಿನಿಯರಿಂಗ್/ಟೆಕ್ನಾಲಜಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಅಲ್ಲದೇ ಸೈನ್ಸ್/ಎಂಜಿನಿಯರಿಂಗ್/ಟೆಕ್ನಾಲಜಿ/ಫಾರ್ಮಾದಲ್ಲಿ ಡಾಕ್ಟರಲ್ ಪದವಿ, ಎಂ.ಡಿ, ಎಂ.ಎಸ್ ಆಗಿರಬೇಕು ಎಂದು ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಮಾಹಿತಿ ನೀಡಿದೆ.
ವಯಸ್ಸಿನ ಮಿತಿ ಎಷ್ಟಿರಬೇಕು
ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ತಿಳಿಸಿರುವ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಇದೇ ವರ್ಷ 2024 ಜುಲೈ 1ಕ್ಕೆ ಗರಿಷ್ಠ 45 ವರ್ಷ ದಾಟಿರಬಾರದು. ಇನ್ನೂ ಜಾತಿ ಮೀಸಲಾತಿಗೆ ಅನುಗುಣವಾಗಿ ನಿಮಗೆ ವಯಸ್ಸಿನಲ್ಲಿ ಸಡಿಲಿಕೆ ಸಿಗುತ್ತದೆ.

ಮಾಸಿಕ ವೇತನ
ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಪ್ರಕಟಣೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 1,00,600 ರೂ. ವೇತನ ಸಿಗಲಿದೆ. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬೇಕು. ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಎಂದು ಸಂಸ್ಥೆ ತಿಳಿಸಿದೆ.
ಆಯ್ಕೆ ಪ್ರಕ್ರಿಯೆ ಮಾಹಿತಿ
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೊದಲು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ನಂತರ ಅವರಿಗೆ ಲಿಖಿತ ಪರೀಕ್ಷೆ ನೀಡಿ, ಅಲ್ಲಿ ಉತ್ತಮ ಅಂಗ ಗಳಿಸುವವರನ್ನು ಸಂದರ್ಶನಕ್ಕೆ ಆಯ್ಕೆ ಮಾಡಲಾಗುತ್ತದೆ. ಅಲ್ಲಿ ಉತ್ತೀರ್ಣ ಆಗುವವರಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆ ವಿವರ
ಆಸಕ್ತ ಅಭ್ಯರ್ಥಿಗಳು ಸೂಕ್ತ ದಾಖಲೆಗಳ ಸಹಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅದಕ್ಕಾಗಿ ನೀವು ಇಲ್ಲಿ ನೀಡಲಾಗಿರುವ https://www.ncbs.res.in/jobportal/node/add/application/105177 ಮೇಲೆ ಕ್ಲಿಕ್ ಮಾಡಬೇಕು.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್












Click it and Unblock the Notifications