ಎನ್ಡಿಆರ್ಎಫ್ ನೇಮಕಾತಿ; 1978 ಹುದ್ದೆಗಳಿಗೆ ಅರ್ಜಿ ಹಾಕಿ
ಬೆಂಗಳೂರು, ಆಗಸ್ಟ್ 31; ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) 1978 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಅಕ್ಟೋಬರ್ 18, 2021 ಕೊನೆಯ ದಿನವಾಗಿದೆ.
ಅಸಿಸ್ಟೆಂಟ್ ಕಮಾಂಡೆಂಟ್ 35, ಇನ್ಸ್ಪೆಕ್ಟರ್ 30, ಸಬ್ ಇನ್ಸ್ಪೆಕ್ಟರ್ 656, ಹೆಡ್ ಕಾನ್ಸ್ಟೇಬಲ್ 1181 ಮತ್ತು ಕಾನ್ಸ್ಟೇಬಲ್ 76 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗೆ 56100-177500 ರೂ., ಇನ್ಸ್ಪೆಕ್ಟರ್ ಹುದ್ದೆಗೆ 44900-142400, ಸಬ್ ಇನ್ಸ್ಪೆಕ್ಟರ್ ಹುದ್ದೆಗೆ 35400-112400, ಹೆಡ್ ಕಾನ್ಸ್ಟೇಬಲ್ ಹುದ್ದೆಗೆ 25500-81100 ಮತ್ತು ಕಾನ್ಸ್ಟೇಬಲ್ ಹುದ್ದೆಗೆ 21700-69100 ರೂ. ವೇತನವನ್ನು ನಿಗದಿ ಮಾಡಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನೇಮಕಾತಿ ನಿಯಮಗಳ ಅನ್ವಯ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 45 ವರ್ಷಗಳು. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ. ndrf.gov.in
ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಭ್ಯರ್ಥಿಗಳು 18 ಅಕ್ಟೋಬರ್ 2021ರೊಳಗೆ ಸಲ್ಲಿಕೆ ಮಾಡಬಹುದು. ಅರ್ಜಿ ಡೌನ್ಲೋಡ್ ಮಾಡುವಾಗ ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ನೀಡಬೇಕು ಎಂದು ಸೂಚಿಸಲಾಗಿದೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಕೆ ಮಾಡಲು ವಿಳಾಸ; DIG (Estt), HQ NDRF, 6th Floor, NDCC-II Building, Jai Singh Road, New Delhi - 110001.
ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಮೂಲಕ ಅಭ್ಯರ್ಥಿಗಳು ಅರ್ಜಿಗಳು ಅಕ್ಟೋಬರ್ 18ರೊಳಗೆ ತಲುಪುವಂತೆ ಸಲ್ಲಿಕೆ ಮಾಡಬೇಕು.
-
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್











Click it and Unblock the Notifications