NHAI Recruitment 2025: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಿಂದ 84 ಹುದ್ದೆಗಳಿಗೆ ಅರ್ಜಿ ಆಹ್ವಾನ
NHAI Recruitment 2025: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಖಾಲಿ ಇರುವ 84 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದ್ರೆ ಯಾರೆಲ್ಲಾ ಅರ್ಜಿ ಸಲ್ಲಿಕೆ ಮಾಡಬಹುದು? ಕೊನೆಯ ದಿನಾಂಕ ಯಾವಾಗ? ಆಯ್ಕೆ ಪ್ರಕ್ರಿಯೆ ಹೇಗಿರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಎನ್ಎಚ್ಎಐ ಉಪ ವ್ಯವಸ್ಥಾಪಕ, ಜೂನಿಯರ್ ಅನುವಾದ ಅಧಿಕಾರಿ ಸೇರಿದಂತೆ 84 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಎಂಂಬಿಎ ಮತ್ತು ಸಿಎಂ ಪದವೀಧರರು ಈ ಹುದ್ದೆಗಳುಗೆ ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಡಿಸೆಂಬರ್ 15 ಕೊನೇ ದಿನಾಂಕ ಆಗಿದೆ. ಆಸಕ್ತರು nhai.gov.in ಮೂಲಕ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ ವಿವರ: ಈ ಹುದ್ದೆಗಳಲ್ಲಿ ಉಪ ವ್ಯವಸ್ಥಾಪಕ , ಜೂನಿಯರ್ ಅನುವಾದ ಅಧಿಕಾರಿ, ಗ್ರಂಥಾಲಯ ಮತ್ತು ಮಾಹಿತಿ ಸಹಾಯಕ, ಲೆಕ್ಕಪತ್ರಗಾರ ಮತ್ತು ಸ್ಟೆನೋಗ್ರಾಫರ್ ಗ್ರೇಡ್-II ಸೇರಿವೆ. ಆಯಾ ಹುದ್ದೆಗೆ ತಕ್ಕಂತೆ ಅರ್ಹತೆಗಳ ಆಧಾರದ ಮೇಲೆ ಪ್ರಕ್ರಿಯೆ ನಡೆಯಲಿದೆ. ಈ ವಿವಿಧ ಹುದ್ದೆಗಳಿಗೆ ಅರ್ಜಿದಾರರನ್ನು ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪರೀಕ್ಷೆಯನ್ನು CBT ಮೋಡ್ನಲ್ಲಿ ನಡೆಸಲಾಗುತ್ತದೆ. ಬಳಿಕ ಅದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಪರೀಕ್ಷೆಯು ಒಟ್ಟು 120 ಅಂಕಗಳನ್ನು ಹೊಂದಿದ್ದು, 120 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆ ಎರಡು ಗಂಟೆ ಆಗಿರುತ್ತದೆ.
ವಿದ್ಯಾರ್ಹತೆ ವಿವರ: ಉಪ ವ್ಯವಸ್ಥಾಪಕ ಹುದ್ದೆಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ ಪಡೆದಿರಬೇಕು. ಗ್ರಂಥಾಲಯ ಮತ್ತು ಮಾಹಿತಿ ಸಹಾಯಕ ಹುದ್ದೆಗೆ ಗ್ರಂಥಾಲಯ ವಿಜ್ಞಾನದಲ್ಲಿ ಪದವಿ ಪಡೆದಿರಬೇಕು. ಲೆಕ್ಕಪತ್ರ ನಿರ್ವಹಣೆ ಹುದ್ದೆಗಳಿಗೆ ಅಭ್ಯರ್ಥಿಗಳು ಚಾರ್ಟರ್ಡ್ ಅಕೌಂಟೆನ್ಸಿಯಲ್ಲಿ ಇಂಟರ್ಮೀಡಿಯೇಟ್ ಅಥವಾ ವೆಚ್ಚ ಮತ್ತು ನಿರ್ವಹಣಾ ಲೆಕ್ಕಪತ್ರ ನಿರ್ವಹಣೆಯಲ್ಲಿ ಇಂಟರ್ಮೀಡಿಯೇಟ್ ಜೊತೆಗೆ ಪದವಿ ಪಡೆದಿರಬೇಕು.
ವಯೋಮಿತಿ: ಉಪ ವ್ಯವಸ್ಥಾಪಕರು, ಗ್ರಂಥಾಲಯ ಮತ್ತು ಮಾಹಿತಿ ಸಹಾಯಕರು ಮತ್ತು ಲೆಕ್ಕಪತ್ರಗಾರರ ಹುದ್ದೆಗಳಿಗೆ ಅರ್ಜಿದಾರರು 30 ವರ್ಷಗಳನ್ನು ಮೀರಿರಬಾರದು. ಸ್ಟೆನೋಗ್ರಾಫರ್ ಹುದ್ದೆಗೆ ಕನಿಷ್ಠ ವಯೋಮಿತಿ 28 ವರ್ಷಗಳಾಗಿದ್ದು, ಈ ಬಗ್ಗೆ ಪ್ರಾಧಿಕಾರ ಹೊರಡಿಸಿದ ಅಧಿಕೃತ ಹುದ್ದೆಯ ಅಧಿಸೂಚನೆಯನ್ನ ಪರಿಶೀಲನೆ ಮಾಡಬಹುದಾಗಿದೆ.
ಅರ್ಜಿ ಸಲ್ಲಿಕೆ ವಿಧಾನಗಳು
* NHAIನ ಅಧಿಕೃತ ವೆಬ್ಸೈಟ್ nhai.gov.inಗೆ ಭೇಟಿ ನೀಡಿ
* ಮುಖಪುಟದಲ್ಲಿ ನೀಡಿರುವ NHAI ಬಗ್ಗೆ ಟ್ಯಾಬ್ಗೆ ಹೋಗಿ
* ಬಳಿಕ ಖಾಲಿ ಹುದ್ದೆ ವಿಭಾಗದ ಮೇಲೆ ಕ್ಲಿಕ್ ಮಾಡಿ
* ಕ್ರಮ ಸಂಖ್ಯೆ:1, 30-10-2025 ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ
* ಅರ್ಜಿ ನಮೂನೆಯನ್ನು ನೋಂದಾಯಿಸಿ ಮತ್ತು ಭರ್ತಿ ಮಾಡಿ
* ಅಲ್ಲಿ ಕೇಳಲಾದ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
* ಫಾರ್ಮ್ ಅನ್ನು ಪರಿಶೀಲನೆ ಮಾಡು ಅರ್ಜಿ ಸಲ್ಲಿಕೆ ಮಾಡಿ
-
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications