NIMHANS Recruitment 2023: ಬೆಂಗಳೂರಿನಲ್ಲಿ ಸೆ.8ರಂದು ನೇರ ಸಂದರ್ಶನ
ಬೆಂಗಳೂರು, ಸೆಪ್ಟಂಬರ್ 07: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ (NIMHANS) ತನ್ನಲ್ಲಿ ಖಾಲಿ ಇರುವ ಕೆಲವು ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಅದಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿತ್ತು. ಅರ್ಜಿ ಹಾಕಿದವರಿಗೆ ನಾಳೆ ಸೆ.8ರಂದು ಬೆಂಗಳೂರಿನಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಅರ್ಹರು ಪಾಲ್ಗೊಳ್ಳಬೇಕೆಂದು ಸಂಸ್ಥೆ ತಿಳಿಸಿದೆ.
ನಿಮ್ಹಾನ್ಸ್ನಲ್ಲಿ ಒಟ್ಟು 4 ಫೀಲ್ಡ್ ಡೇಟಾ ಕಲೆಕ್ಟರ್ಸ್ ಹುದ್ದೆಗಳು ಖಾಲಿ ಇದ್ದು, ಅವುಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿತ್ತು. ನಾಳೆ ನಡೆಯಲಿರುವ ನೇರ ಸಂದರ್ಶನದಲ್ಲಿ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಿದೆ. ಸಂದರ್ಶನಕ್ಕೆ ತೆರಳುವಾಗ ಅಧಿಸೂಚನೆಯಲ್ಲಿ ತಿಳಿಸಲಾದ ಎಲ್ಲ ಅಗತ್ಯ ದಾಖಲೆಗಳನ್ನು ಒಯ್ಯುವಂತೆ ಸೂಚಿಸಲಾಗಿದೆ.

ನೇಮಕಾತಿ ಪೂರ್ಣ ವಿವರ
ಸಂಸ್ಥೆ- ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ, ಬೆಂಗಳೂರು
ಹುದ್ದೆ- ಫೀಲ್ಡ್ ಡೇಟಾ ಕಲೆಕ್ಟರ್ಸ್
ಖಾಲಿ ಹುದ್ದೆ ಎಷ್ಟು- 4
ಮಾಸಿಕ ವೇತನ - 30,000 ರೂಪಾಯಿ
ಪೊಸ್ಟಿಂಗ್ ಸ್ಥಳ- ಬೆಂಗಳೂರು
ವಿದ್ಯಾರ್ಹತೆ ಏನಿರಬೇಕು
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಇಲ್ಲವೇ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಅಷ್ಟೇ ಅಲ್ಲದೇ ಸಾರ್ವಜನಿಕ ಆರೋಗ್ಯ ಅಥವಾ ರಸ್ತೆ ಸುರಕ್ಷತೆ ಯೋಜನೆಗಳಲ್ಲಿ ಡೇಟಾ ಸಂಗ್ರಹಣೆ ಮಾಡಿದ ಅನುಭವ ಹೊಂದಿರುವುದು ಖಡ್ಡಾಯ ಎಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ತಿಳಿಸಿದೆ.

ವಯಸ್ಸಿನ ಮಿತಿ-ವೇತನ ವಿವರ
ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಇನ್ನೂ ಮಾಸಿಕ ವೇತನ 30,000 ನೀಡಲಾಗುವುದು ಎಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಹೇಳಿದೆ. ಅರ್ಜಿ ಸಲ್ಲಿಸಿದವರಿಗೆ ಈಗಾಗಲೇ ಲಿಖಿತ ಪರೀಕ್ಷೆ ನಡೆದಿದ್ದು, ಇದೀಗ ನೇರ ಸಂದರ್ಶನ ಆಯೋಜಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳದ ವಿವರ
ಅಭ್ಯರ್ಥಿಗಳು ಬೋರ್ಡ್ ರೂಮ್, 1 ನೇ ಮಹಡಿ, NBRC ಕಟ್ಟಡ, ಆಡಳಿತಾತ್ಮಕ ಬ್ಲಾಕ್, ನಿಮ್ಹಾನ್ಸ್, ಬೆಂಗಳೂರು - 560029 ಇಲ್ಲಿಗೆ ನಾಳೆ ಸೆಪ್ಟಂಬರ್ 10.30ಕ್ಕೆ ಹಾಜರಿರಬೇಕು ಎಂದು ಅಧಿಸೂಚನೆಯಲ್ಲಿ ಸಂಸ್ಥೆ ತಿಳಿಸಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications