Job in Bengaluru: ನಿಮ್ಹಾನ್ಸ್ನಲ್ಲಿ ನೇರ ಸಂದರ್ಶನ, ತಿಂಗಳಿಗೆ ₹1.50 ಲಕ್ಷ ವೇತನ
ಬೆಂಗಳೂರು, ನವೆಂಬರ್ 20: ಬೆಂಗಳೂರಲ್ಲಿನ ರಾಷ್ಟ್ರೀಯ ಮಾನಸಿಕ ಹಾಗೂ ನರ ವಿಜ್ಞಾನ ಸಂಸ್ಥೆ ( NIMHANS) ತನ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ನಿಮಿತ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಬೆಂಗಳೂರಿನಲ್ಲಿ ಕೆಲಸಕ್ಕಾಗಿ ಹುಡುಕಾಡುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ.
ಬೆಂಗಳೂರಲ್ಲಿನ ರಾಷ್ಟ್ರೀಯ ಮಾನಸಿಕ ಹಾಗೂ ನರ ವಿಜ್ಞಾನ ಸಂಸ್ಥೆ (NIMHANS) ನಲ್ಲಿ ಒಟ್ಟು ಒಂದು ಕ್ಲಿನಿಕಲ್ ಸೈಂಟಿಸ್ಟ್ (ಮೆಡಿಕಲ್) ಹುದ್ದೆ ಖಾಲಿ ಇದೆ. ಈ ಹುದ್ದೆಗೆ ಸೇರಬಯಸುವ ಆಸಕ್ತ ಅಭ್ಯರ್ಥಿಗಳಿಗೆ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿಯೇ ಬೆಳಗ್ಗೆ 10.30ಕ್ಕೆ ಸಂದರ್ಶನ ನಡೆಯಲಿದೆ ಎಂದು ನಿಮ್ಹಾನ್ಸ್ ಅಧಿಸೂಚನೆ ತಿಳಿಸಿದೆ.

ನೇಮಕಾತಿ ಪೂರ್ಣ ಮಾಹಿತಿ
ನೇಮಕಾತಿ ಸಂಸ್ಥೆ: NIMHANS ಬೆಂಗಳೂರು
ನೇಮಕಾತಿ ಹುದ್ದೆ: ಕ್ಲಿನಿಕಲ್ ಸೈಂಟಿಸ್ಟ್
ಒಟ್ಟು ಹುದ್ದೆ: ಒಂದು
ವಯೋಮಿತಿ: ಗರಿಷ್ಠ 40 ವರ್ಷ
ಮಾಸಿಕ ವೇತನ: 1,50,000 ರೂಪಾಯಿ
ಪೋಸ್ಟಿಂಗ್: ಬೆಂಗಳೂರು
ಸಂದರ್ಶನ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ ಏನಿರಬೇಕು?
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲಿವೇ ಶೈಕ್ಷಣಿಕ ಮಂಡಳಿಯಲ್ಲಿ ಸಾಯಿಯಾಟ್ರಿಯಲ್ಲಿ ಎಂ.ಡಿ ಪೂರ್ಣ ಮಾಡಿರಬೇಕು ಎಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಪ್ರಕಟಣೆ ತಿಳಿಸಿದೆ.
ವಯಸ್ಸಿನ ಮಿತಿ
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷ ಎಂದು ತಿಳಿಸಲಾಗಿದೆ. ಅಷ್ಟು ವಯೋಮಿತಿ ಒಳಗಿನವರು ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.
ಆಯ್ಕೆ ಪ್ರಕ್ರಿಯೆ ಹೇಗೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಲಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಲಿದೆ. ಬಳಿಕ ಅವರಿಗೆ ಸಂದರ್ಶನ ನಡೆಸಲಿದೆ. ಆಯ್ಕೆ ಆಗುವವರಿಗೆ ಮಾಸಿಕವಾಗಿ ಒಂದು 1,50,000 ರೂಪಾಯಿ ವೇತನ ಜೊತೆಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಿದೆ.
ಸಂದರ್ಶನ ದಿನ
ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನಾಳೆ ಗುರುವಾರ ನವೆಂಬರ್ 21ರಂದು ಕೊನೆಯ ದಿನವಾಗಿದೆ. ನಾಳೆಯೇ ಬೆಳಗ್ಗೆ 10.30ಕ್ಕೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದೆ.
ಈ ಸಂದರ್ಶನವು ಸಮಿತಿ ಕೊಠಡಿ, ಶೈಕ್ಷಣಿಕ ಮತ್ತು ಮೌಲ್ಯಮಾಪನ ವಿಭಾಗದ ಬಳಿ, IV ಮಹಡಿ, ನ್ಯೂರೋಬಯಾಲಜಿ ಸಂಶೋಧನಾ ಕೇಂದ್ರ, ಆಡಳಿತಾತ್ಮಕ ಬ್ಲಾಕ್, ನಿಮ್ಹಾನ್ಸ್, ಬೆಂಗಳೂರು ಇಲ್ಲಿ ನಡೆಯಲಿದೆ.
-
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ












Click it and Unblock the Notifications