NIMHANS Jobs 2023: ಒಟ್ಟು 161 ಖಾಲಿ ಇವೆ, ಬೆಂಗಳೂರಿನಲ್ಲೇ ಉದ್ಯೋಗ, 34,800 ವೇತನ, ಅರ್ಜಿ ಹಾಕಿ
ಬೆಂಗಳೂರು, ಅಕ್ಟೊಬರ್ 20: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS) ಸಂಸ್ಥೆ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS) ಯಲ್ಲಿ ಒಟ್ಟು 161 ನರ್ಸಿಂಗ್ ಆಫೀಸರ್ ಹುದ್ದೆಗಳು ಖಾಲಿ ಇವೆ. ಸದರಿ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ನವೆಂಬರ್ 18ರೊಳಗೆ ಅರ್ಜಿ ಸಲ್ಲಿಸುವಂತೆ ನಿಮ್ಹಾನ್ಸ್ ತಿಳಿಸಿದೆ. ಅರ್ಜಿ ಸಲ್ಲಿಲಿಕೆಗೂ ಮೊದಲು ಇಲ್ಲಿರುವ ನೇಮಕಾತಿ ಪ್ರಕ್ರಿಯೆ ಪೂರ್ಣ ಮಾಹಿತಿ ತಿಳಿದುಕೊಳ್ಳಿ.

ನೇಮಕಾತಿ ಪ್ರಕ್ರಿಯೆ ಮಾಹಿತಿ
ಸಂಸ್ಥೆ ಹೆಸರ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (NIMHANS)
ಹುದ್ದೆಗಳ ಹೆಸರು: ನರ್ಸಿಂಗ್ ಆಫೀಸರ್
ಖಾಲಿ ಹುದ್ದೆ ಸಂಖ್ಯೆ: 161
ಮಾಸಿಕ ವೇತನ: 34,800 ರೂಪಾಯಿ
ಅರ್ಜಿ ಸಲ್ಲಿಕೆ ದಿನಾಂಕ: ನವೆಂಬರ್ 18.
ಶೈಕ್ಷಣಿಕ ವಿದ್ಯಾರ್ಹತೆ
ಈ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಬಿಎಸ್ಸಿ ಹಾನರ್ಸ್ ನರ್ಸಿಂಗ್ / ಬಿಎಸ್ಸಿ ನರ್ಸಿಂಗ್ ಅಥವಾ ಬಿಎಸ್ಸಿ/ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ಉತ್ತೀರ್ಣವಾಗಿರುವುದು ಕಡ್ಡಾಯವಾಗಿದೆ. ಇದರೊಂದಿಗೆ ರಾಜ್ಯ ಅಥವಾ ಕೇಂದ್ರ ಸರ್ಕಾರದ ನರ್ಸಿಂಗ್ ಕೌನ್ಸಿಲ್ ನಲ್ಲಿ ರಿಜಿಸ್ಟ್ರೇಷನ್ ಪಡೆದಿರಬೇಕು. ಜೊತೆಗೆ ಎರಡು ವರ್ಷದ ಅನುಭವ ಹೊಂದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಬಾರದು. ಸಾಮಾನ್ಯ ಅರ್ಹತೆ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 1180 ರೂಪಾಯಿ ಇದ್ದರೆ, ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ 885 ರೂಪಾಯಿ ಇದೆ. ಇತ್ತ PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದ್ದು, ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿದೆ. ಪರೀಕ್ಷೆಗಳಿಗೆ ದಿನಾಂಕ ಇನ್ನೂ ನಿಗದಿ ಆಗಿಲ್ಲ.
ಅರ್ಜಿ ಸಲ್ಲಕೆ ಹೇಗೆ?
ಮೊದಲು ಅಭ್ಯರ್ತಿಗಳು ಮೊದಲು ನಿಮ್ಹಾನ್ಸ್ ಅಧಿಕೃತ ವೆಬ್ಸೈಟ್ಗೆ https://nimhansonline.in/Nursing/index.jsp ಭೇಟಿ ನೀಡಬೇಕು. ನಂತರ ಅಲ್ಲಿ ಪ್ರೊಸೀಡ್ ಎಂಬ ಆಯ್ಕೆಯನ್ನು ಸೆಲೆಕ್ಟ್ ಮಾಡಬೇಕು. ನಂತರ ತೆರೆದುಕೊಳ್ಳುವ ಪರದೆ ಮೇಲೆ ಕೇಳಲಾಗುವ ಮಾಹಿತಿಗಳು ಅಂದರೆ, ವೈಯಕ್ತಿಕ ಮಾಹಿತಿಗಳು, ವಿದ್ಯಾರ್ಹತೆ ಮಾಹಿತಿಗಳನ್ನು ಹಾಕಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದೆ.
-
"ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು": ಸಿಎಸ್ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ? -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
Silk Board: ಹಳದಿ-ನೀಲಿ ಮೆಟ್ರೋ ಲೈನ್ ಪ್ರಯಾಣಿಕರಿಗಾಗಿ 'ಟ್ರಾವೆಲೇಟರ್-ಕನೆಕ್ಟಿಂಗ್ ವಾಕ್ವೇ ಸಂಪರ್ಕ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ












Click it and Unblock the Notifications