ಹಾವೇರಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ: 62 ಅಪ್ರೆಂಟಿಸ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಹಾವೇರಿ, ಅಕ್ಟೋಬರ್ 05: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾವೇರಿಯು ಪ್ರಸಕ್ತ ಸಾಲಿನಲ್ಲಿ ಖಾಲಿ ಇರುವ 60ಕ್ಕೂ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಈ ಸಂಬಂಧ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಹಾವೇರಿ ವ್ಯಾಪ್ತಿಯಲ್ಲಿ ರಾಜ್ಯದ ಸರ್ಕಾರದ ವೃತ್ತಿ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಇದೇ ತಿಂಗಳ ಅಕ್ಟೋಬರ್ 17ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆಯು ನೇರವಾಗಿ ನಡೆಯಲಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಒಟ್ಟು 62 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇವೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.7,708 ರಿಂದ 8,093 ವೇತನ ನೀಡಲಾಗುವುದು. ಹಾವೇರಿ ವಿಭಾಗದಲ್ಲಿ ಕಾರ್ಯ ನಿರ್ವಹಿಸಲು ಇದೊಂದು ಸುವರ್ಣ ಅವಕಾಶವಾಗಿದೆ.
ನಿಗದಮದಲ್ಲಿ ಅಪ್ರೆಂಟಿಸ್ ಎಲೆಕ್ಟ್ರಿಷಿಯನ್ 15 ಖಾಲಿ ಹುದ್ದೆಗಳಿವೆ, ಅದೇ ರೀತಿ ಎಂವಿಬಿಬಿ 6, ಫಿಟ್ಟರ್ 10, ವೆಲ್ಡರ್ 2,
ಮೆಕ್ಯಾನಿಕ್ ಡೀಸೆಲ್ 10, ಪೇಂಟರ್ 4, ಎಲೆಕ್ಟ್ರಿಕ್ ಮೆಕ್ಯಾನಿಕ್ 10, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ 5 ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಭರ್ತಿ ಮಾಡಿಕೊಳ್ಳಲು ನಿಗಮ ಅಧಿಸೂಚನೆ ಹೊರಡಿಸಿದೆ.
ಶೈಕ್ಷನಿಕ ಅರ್ಹತೆ ಏನು?
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಐಟಿಐ ಪೂರ್ಣಗೊಳಿಸಿರಬೇಕು. ಆಯಾ ಹುದ್ದೆಗಳಿಗೆ ತಕ್ಕಂತೆ ಪ್ರತ್ಯೇಕ ಮಾನದಂಡಗಳು, ಅರ್ಹತೆಗಳನ್ನು ಅರ್ಜಿ ಸಲ್ಲಿಸುವವರು ಹೊಂದಿರಬೇಕಿದೆ. ನೇರ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಹೇಗೆ ಅರ್ಜಿ ಸಲ್ಲಿಸಬೇಕು?
NWKRTC ಅಪ್ರೆಂಟಿಸ್ ಉದ್ಯೋಗ ಆಕಾಂಕ್ಷಿಗಳು ಮೊದಲು ಮೊದಲು ನಿಗಮದ ಅಧಿಕೃತ ವೆಬ್ಸೈಟ್ @nwkrtc.karnataka.gov.in ಗೆ ಭೇಟಿ ನೀಡಿ. ನೀವು ಅರ್ಜಿ ಸಲ್ಲಿಸಲಿರುವ NWKRTC ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ. ಅಪ್ರೆಂಟಿಸ್ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ.
ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ. ಅಧಿಸೂಚನೆಯ ಪ್ರಕಾರ ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ. ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ) ಮತ್ತು ಅಕ್ಟೋಬರ್ 17ರೊಳಗೆ ಸೂಕ್ತ ದಾಖಲಾತಿಗಳ ಜೊತೆಗೆ ಅರ್ಜಿಯನ್ನು ಸಲ್ಲಿಸಿ. ಹೆಚ್ಚಿನ ಮಾಹಿತಿಗೆ ವೆಬ್ಸೈಟ್ಗೆ ಭೇಟಿ ಕೊಡಿ ಎಂದು ಪ್ರಕಟಣೆ ತಿಳಿಸಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications