SSC Recruitment; ಕನ್ನಡದಲ್ಲೇ ಪರೀಕ್ಷೆ ಬರೆಯಲು ಅವಕಾಶ
ಬೆಂಗಳೂರು, ಜನವರಿ 20; ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಕನ್ನಡದಲ್ಲಿಯೂ ಅವಕಾಶ ನೀಡಬೇಕು ಎಂಬ ಕನ್ನಡಿಗರ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ.
ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್ಸಿ) 2023ರ ಏಪ್ರಿಲ್ನಲ್ಲಿ ನಡೆಸುವ 11,400 ಹುದ್ದೆಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಕನ್ನಡ ಸೇರಿದಂತೆ ಒಟ್ಟು 13 ಪ್ರಾದೇಶಿಕ ಭಾಷೆಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆಗಳನ್ನು ಬರೆಯಬಹುದು.
ಎಸ್ಎಸ್ಸಿ ನಡೆಸುವ ಪರೀಕ್ಷೆಗಳು ಕನ್ನಡ ಸೇರಿದಂತೆ ಆಯಾ ಪ್ರಾದೇಶಿಕ ಭಾಷೆಗಳಲ್ಲಿಯೇ ಇರಬೇಕು ಎಂಬುದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿತ್ತು. ಈಗ ಕೇಂದ್ರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಬೇರೆ-ಬೇರೆ ರಾಜ್ಯಗಳಲ್ಲಿಯೂ ಸಹ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಒತ್ತಾಯಿಸಲಾಗುತ್ತಿತ್ತು.

ಇದೇ ಮೊದಲ ಬಾರಿಗೆ ಇಂಗ್ಲಿಶ್, ಹಿಂದಿ, ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಸ್ಎಸ್ಸಿ ಮುಂದಾಗಿದೆ. ಇಷ್ಟು ದಿನ ಇಂಗ್ಲಿಶ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶವಿತ್ತು. ಇದರಿಂದಾಗಿ ನೂರಾರು ಅಭ್ಯರ್ಥಿಗಳಿಗೆ ಹಿನ್ನಡೆ ಉಂಟಾಗಿತ್ತು.
ಈಗ ಹೊರಡಿಸಿರುವ ಆದೇಶದಿಂದ ಏಪ್ರಿಲ್ನಲ್ಲಿ ಎಸ್ಎಸ್ಸಿ ನಡೆಸುವ 10,880 ಎಟಿಎಸ್ ಹುದ್ದೆ, 529 ಸಿಬಿಐಸಿ-ಸಿಬಿಎನ್ ಹವಾಲ್ದಾರ್ ಪರೀಕ್ಷೆಗಳನ್ನು ಅಭ್ಯರ್ಥಿಗಳು ಕನ್ನಡದಲ್ಲಿ ಬರೆಯಬಹುದಾಗಿದೆ.
ಕರ್ನಾಟಕದಲ್ಲಿ ದೊಡ್ಡ ಹೋರಾಟ; ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಯನ್ನು ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್ಸಿ) ನಡೆಸುತ್ತದೆ. ಇಷ್ಟು ದಿನ ಇಂಗ್ಲಿಶ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶವಿತ್ತು. ಇದರಿಂದಾಗಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಬೃಹತ್ ಹೋರಾಟ ನಡೆದಿತ್ತು.
ಕನ್ನಡ ಪರ ಹೋರಾಟಗಾರರು, ಲೇಖಕರು, ಸಾಹಿತಿಗಳು ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ವಿವಿಧ ಸಂಸದರು, ಕೇಂದ್ರ ಸಚಿವರನ್ನು ಭೇಟಿ ಮಾಡಿ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದರು.
ಕನ್ನಡ ಸಾಹಿತ್ಯ ಪರಿಷತ್ ಕೆಲವು ದಿನಗಳ ಹಿಂದೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಕಾನೂನು ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿತ್ತು. ಈಗ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿರುವುದರಿಂದ ಕನ್ನಡಿಗರ ಹೋರಾಟಕ್ಕೆ ಜಯಸಿಕ್ಕಿದೆ.

ಏಪ್ರಿಲ್ನಲ್ಲಿ ಪರೀಕ್ಷೆಗಳು; ಪ್ರಸ್ತುತ ಎಸ್ಎಸ್ಇ ಎಂಟಿಎಸ್ ಮತ್ತು ಹವಾಲ್ದಾರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 11,409 ಹುದ್ದೆಗಳಿದ್ದು, ಆಸಕ್ತರು ಫೆಬ್ರವರಿ 17ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿ ಶುಲ್ಕ ಪಾವತಿಗೆ ಫೆಬ್ರವರಿ 19 ಕೊನೆಯ ದಿನ. ಅರ್ಜಿ ತಿದ್ದುಪಡಿಗೆ ಫೆಬ್ರವರಿ 23 ಮತ್ತು 24ರಂದು ಅವವಾಶವಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು ಏಪ್ರಿಲ್ನಲ್ಲಿ ನಡೆಯಲಿದೆ.
ಕರ್ನಾಟಕದಲ್ಲಿ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಪರೀಕ್ಷೆಗಳು ನಡೆಯಲಿದೆ. ಈ ಹುದ್ದೆಗಳಿಗೆ 5,200 ರಿಂದ 20,200ರ ತನಕ ವೇತನ ಶ್ರೇಣಿ ನಿಗದಿ ಮಾಡಲಾಗಿದೆ.
ಈ ಪರೀಕ್ಷೆಗಳಲ್ಲಿ ಎರಡು ಮಾದರಿಯ ಪ್ರಶ್ನೆ ಪತ್ರಿಕೆ ಇರುತ್ತದೆ. ಟಯರ್ - 1 ಕಂಪ್ಯೂಟರ್ ಆಧಾರಿತ ಪರೀಕ್ಷೆ ವಸ್ತುನಿಷ್ಠ ಬಹುಮಾದರಿ ಪ್ರಶ್ನೆಗಳನ್ನು ಹೊಂದಿರುತ್ತದೆ. ಈ ಪತ್ರಿಕೆ ಹಿಂದಿ, ಇಂಗ್ಲಿಶ್ನಲ್ಲಿ ಇರುತ್ತದೆ. ತಲಾ 25 ಅಂಕಗಳಿಗೆ ಉತ್ತರಿಸಲು ಒಂದೂವರೆ ಗಂಟೆ ಸಮಯವಿದೆ.
ಟಯರ್-2 ಪರೀಕ್ಷೆಗೆ ವಿವರಣಾತ್ಮಕ ಅಥವ ಪ್ರಬಂಧ ಮಾದರಿಯಲ್ಲಿ ಉತ್ತರ ನೀಡಬೇಕು. 50 ಅಂಕಗಳ ಪ್ರಶ್ನೆಗಳಿಗೆ ಉತ್ತರಿಸಲು 45 ನಿಮಿಷದ ಅವಕಾಶವಿದೆ. ಈ ಪತ್ರಿಕೆಗೆ ಹಿಂದಿ, ಇಂಗ್ಲಿಶ್, ಕೊಂಕಣಿ, ಕನ್ನಡ ಸೇರಿದಂತೆ 15 ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಬಹುದಾಗಿದೆ.
-
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ನಿಮ್ಮ ಮನೆಯ ಸೀಲಿಂಗ್ ಫ್ಯಾನ್ನಲ್ಲಿ ಧೂಳು ತುಂಬಿದೆಯೇ? ನಿಮಿಷಗಳಲ್ಲಿ ಸ್ವಚ್ಛಗೊಳಿಸಲು ಇಲ್ಲಿವೆ 'ಸೀಕ್ರೆಟ್' ಟಿಪ್ಸ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ












Click it and Unblock the Notifications