NVS Recruitment: ನವೋದಯ ವಿದ್ಯಾಲಯ ಸಮಿತಿಯಿಂದ ಬರೋಬ್ಬರಿ 5700 ಹುದ್ದೆಗಳ ನೇಮಕಾತಿ
NVS Recruitment 2025: ನವೋದಯ ವಿದ್ಯಾಲಯ ಸಮಿತಿ (NVS) ತನ್ನಲ್ಲಿ ಖಾಲಿ ಇರುವ 5700 ಕ್ಕೂ ಹೆಚ್ಚು ಬೋಧಕ / ಬೋಧಕೇತರ ಹುದ್ದೆಗಳಿಗೆ ನೇಮಕಾತಿ ಆರಂಭಿಸಿದೆ. ಆಕಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬೇಕು. ವಿವಿಧ ಭಾಷೆಗಳಲ್ಲಿ ಅನೇಕ ಖಾಲಿ ಹುದ್ದೆಗಳು ಲಭ್ಯ ಇವೆ. ಅಧಿಸೂಚನೆ ನೋಡಿಕೊಂಡು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು ಎಂದು ತಿಳಿಸಲಾಗಿದೆ.
ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ನವೋದಯ ವಿದ್ಯಾಲಯ ಸಮಿತಿ (NVS) ಯಲ್ಲಿ 5,700 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ನೇಮಕಾತಿಗಾಗಿ ಅರ್ಜಿ ಸ್ವೀಕಾರ ಆರಂಭವಾಗಿದ್ದು, ನೀವುಗಳು ಡಿಸೆಂಬರ್ 4ರ ಒಳಗೆ ಸೂಕ್ತ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಬೇಕು.

1513 ಪಿಜಿಟಿ (PGT) ಹುದ್ದೆಗಳ ನೇಮಕಾತಿ
ನವೋದಯ ವಿದ್ಯಾಲಯಗಳು 1513 PGT (ಸ್ನಾತಕೋತ್ತರ ಶಿಕ್ಷಕರ) ನೇಮಕಾತಿ ನಡೆಸುತ್ತಿದೆ. ಪ್ರತಿಯೊಂದು ವಿಷಯಕ್ಕೂ ನೇಮಕಾತಿ ಮಾಡಿಕೊಳ್ಳುತ್ತಿದೆ. ಭಾಷಾವಾರು ನೇಮಕಾತಿ ವಿವರ ಮುಂದಿದೆ.
* ಹಿಂದಿ - 127
* ಇಂಗ್ಲಿಷ್ - 146
* ಭೌತಶಾಸ್ತ್ರ - 186
* ರಸಾಯನಶಾಸ್ತ್ರ - 121
* ಗಣಿತ - 167
* ಜೀವಶಾಸ್ತ್ರ - 161
* ಇತಿಹಾಸ - 110
* ಭೂಗೋಳ - 106
* ಅರ್ಥಶಾಸ್ತ್ರ - 148
* ವಾಣಿಜ್ಯ - 43
* ಕಂಪ್ಯೂಟರ್ ವಿಜ್ಞಾನ - 135
* ದೈಹಿಕ ಶಿಕ್ಷಣ - 63
2978 ಟಿಜಿಟಿ (TGT) ಹುದ್ದೆಗಳ ನೇಮಕಾತಿ
ನವೋದರ ವಿದ್ಯಾಲಯಗಳು ಒಟ್ಟು ತರಬೇತಿ ಪಡೆದ ಶಿಕ್ಷಕರ (TGT) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಸಂಬಂಧ ವಿಷಯವಾರು ಹಾಗೂ ಮೀಸಲಾತಿ ಪ್ರಕಾರ ಸೀಟುಗಳನ್ನು ಹಂಚಿಕೆ ಮಾಡಲಾಗಿದೆ. ತರಬೇತಿ ಪಡೆದ ಪದವೀಧರ ಶಿಕ್ಷಕರ ನೇಮಕಾತಿಗೆ ಬೇಕಾದ ಅರ್ಹತೆ, ಇತರ ಮಾಹಿತಿ ತಿಳಿದು ಅರ್ಜಿ ಸಲ್ಲಿಸಬೇಕಿದೆ.
ಪ್ರಾಂಶುಪಾಲರು ಹಾಗೂ ಬೋಧಕೇತರ ಹುದ್ದೆಗಳು 880
ನವೋದರ ವಿದ್ಯಾಲಯ ಸಮಿತಿ ಒಳಗೆ 93 ಪ್ರಾಂಶುಪಾಲರು ಮತ್ತು 787 ಬೋಧಕೇತರ ಹುದ್ದೆಗಳಿಗೆ ಸಿಬಿಎಸ್ಇ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ (HQ/RO) 46, ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ (JNV) 552, ಲ್ಯಾಬ್ ಅಟೆಂಡೆಂಟ್ 165, ಮಲ್ಟಿ-ಟಾಸ್ಕಿಂಗ್ ಸ್ಟಾಫ್ 24 ಮತ್ತು ಸಹಾಯಕ ಆಯುಕ್ತ (ಅಕಾಡೆಮಿಕ್) - 9 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
ಭಾರತದ ಸನಿಹವೇ ಮುಳುಗಿತು ಇರಾನ್ ಯುದ್ಧನೌಕೆ: ವಿಶಾಖಪಟ್ಟಣದಿಂದ ಹಿಂದಿರುಗುತ್ತಿದ್ದ ಹಡಗಿಗೆ ಅಮೆರಿಕ ಬಾಂಬ್ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ












Click it and Unblock the Notifications