Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ
Oracle: ದೇಶದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಯಾರು ಯಾವಾಗಬೇಕಾದರೂ ಉದ್ಯೋಗ ಕಳೆದುಕೊಳ್ಳಬಹುದು ಎನ್ನುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಅನಿಶ್ಚಿತತೆ ಹೆಚ್ಚಾಗುತ್ತಿರುವುದರಿಂದ ಹಾಗೂ ಎಐ ಪೈಪೋಟಿಯಿಂದಾಗಿ ಲಕ್ಷಾಂತರ ಜನ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಉದ್ಯೋಗಿಗಳ ವಜಾ ಪ್ರಕ್ರಿಯೆ ಆರಂಭವಾಗಿದೆ. ಒರಾಕ್ ಸಂಸ್ಥೆಯು ದೇಶದಾದ್ಯಂತ 12,000 ಜನರನ್ನು ಉದ್ಯೋಗದಿಂದ ತೆಗೆದಿದ್ದು, ಇದು ಜಾಗತಿಕವಾಗಿ ಬರೋಬ್ಬರಿ 30,000 ಜನರ ಮೇಲೆ ಪರಿಣಾಮ ಬೀರಿದೆ.
ಅಮೆರಿಕದ ಪ್ರಮುಖ ಸಾಫ್ಟ್ವೇರ್ ಕಂಪನಿಯಾದ ಒರಾಕಲ್ ಕಾರ್ಪೊರೇಷನ್ (Oracle Corporation), ತನ್ನ ವೆಚ್ಚ ಕಡಿತದ ಪ್ರಯತ್ನಗಳ ಭಾಗವಾಗಿ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗಿದೆ. ಮಂಗಳವಾರ ಮುಂಜಾನೆ ಹಲವು ಉದ್ಯೋಗಿಗಳಿಗೆ ವಜಾಗೊಳಿಸುವ ಕುರಿತು ಅಧಿಕೃತ ಅಧಿಸೂಚನೆಗಳು ಬಂದಿವೆ ಎಂದು Business Insider ವರದಿ ಮಾಡಿದೆ.

ಕಂಪನಿಯು ಕಳುಹಿಸಿರುವ ಅಧಿಸೂಚನೆಯಲ್ಲಿ, "ಪ್ರಸ್ತುತ ವ್ಯವಹಾರದ ಅಗತ್ಯಗಳನ್ನು ಸಮಗ್ರವಾಗಿ ಪರಿಶೀಲಿಸಿದ ನಂತರ, ಸಾಂಸ್ಥಿಕ ಬದಲಾವಣೆಯ ಭಾಗವಾಗಿ ನಿಮ್ಮ ಹುದ್ದೆಯನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ಆದ್ದರಿಂದ, ಇಂದೇ ನಿಮ್ಮ ಸೇವೆಯ ಕೊನೆಯ ದಿನ," ಎಂದು ತಿಳಿಸಲಾಗಿದೆ. ಈ ಕ್ರಮವು ವಿಶ್ವದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದ್ದು, ಒಟ್ಟು ಎಷ್ಟು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ ಎಂಬ ಬಗ್ಗೆ ಕಂಪನಿಯು ಇನ್ನು ಸ್ಪಷ್ಟ ಮಾಹಿತಿ ನೀಡಿಲ್ಲ. ಪ್ರಾಥಮಿಕ ವರದಿಯ ಪ್ರಕಾರ, 15,000 ಜನ ಉದ್ಯೋಗ ಕಳೆದುಕೊಂಡಿದ್ದಾರೆ.
Oracle Cuts Jobs ಎಷ್ಟು ಉದ್ಯೋಗಿಗಳ ಮೇಲೆ ಪರಿಣಾಮ ?
ವಜಾಗೊಂಡ ಉದ್ಯೋಗಿಗಳ ಸಂಖ್ಯೆ ಸಾವಿರಾರು ಇರಬಹುದು ಎಂದು CNBC ವರದಿ ಮಾಡಿದೆ. ವಿಷಯದ ಬಗ್ಗೆ ಮಾಹಿತಿ ಇರುವ ಆಪ್ತ ಮೂಲಗಳನ್ನು ಉಲ್ಲೇಖಿಸಿ ಈ ವರದಿ ನೀಡಲಾಗಿದೆ. ಕಂಪನಿಯ ಇತ್ತೀಚಿನ ದಾಖಲೆಗಳ ಪ್ರಕಾರ, ಮೇ 2025ರ ವೇಳೆಗೆ ಒರಾಕಲ್ನಲ್ಲಿ ಸುಮಾರು 1.62 ಲಕ್ಷ ಮಂದಿ ಉದ್ಯೋಗಿಗಳಿದ್ದರು.
Oracle Cuts Jobs ಪರಿಹಾರದ ವಿವರಗಳು
ಉದ್ಯೋಗ ಕಳೆದುಕೊಂಡ ಉದ್ಯೋಗಿಗಳಿಗೆ ಕಳುಹಿಸಿರುವ ಇಮೇಲ್ನಲ್ಲಿ, ಅಗತ್ಯ ದಾಖಲೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಕಂಪನಿಯ ನಿಯಮಾವಳಿಗಳಂತೆ ಪರಿಹಾರ ಪ್ಯಾಕೇಜ್ (Severance Package) ನೀಡಲಾಗುವುದು ಎಂದು ತಿಳಿಸಲಾಗಿದೆ. ವಜಾಗೊಳಿಸಿದ ದಿನಾಂಕ ಮತ್ತು ಇತರ ಪ್ರಮುಖ ವಿವರಗಳನ್ನು DocuSign ಮೂಲಕ ಉದ್ಯೋಗಿಗಳ ಅಧಿಕೃತ ಇಮೇಲ್ಗೆ ಕಳುಹಿಸಲಾಗುವುದು ಎಂದು ಕಂಪನಿ ಹೇಳಿದೆ.
ಇದಲ್ಲದೆ, ಕಂಪನಿಯ ವ್ಯವಸ್ಥೆಗಳ (Systems) ಪ್ರವೇಶವನ್ನು ಶೀಘ್ರದಲ್ಲೇ ರದ್ದುಪಡಿಸಲಾಗುವುದರಿಂದ, ಮುಂದಿನ ಸಂವಹನಕ್ಕಾಗಿ ತಮ್ಮ ವೈಯಕ್ತಿಕ ಇಮೇಲ್ ವಿಳಾಸವನ್ನು ನೀಡುವಂತೆ ಉದ್ಯೋಗಿಗಳಿಗೆ ಸೂಚಿಸಲಾಗಿದೆ.
-
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Viral Video: ಕಡಿಮೆ ಹಣದಲ್ಲಿ ಬದುಕೋದು ಹೇಗೆ ? ಬೆಂಗಳೂರು ಇಂಟರ್ನ್ ಹೇಳಿದ ಟ್ರಿಕ್ಗಳು -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್












Click it and Unblock the Notifications