Paytm lay off: ಉದ್ಯೋಗಿಗಳನ್ನು ವಜಾ ಮಾಡಿ, ಬೇರೆಡೆ ಕೆಲಸ ಕೊಡಿಸುತ್ತಂತೆ ಪೇಟಿಎಂ!
ನವದೆಹಲಿ, ಜೂನ್. 11: ಪೇಟಿಎಂ ಬ್ರ್ಯಾಂಡ್ನ ಮಾಲೀಕ ಫಿನ್ಟೆಕ್ ಸಂಸ್ಥೆ One97 ಕಮ್ಯುನಿಕೇಷನ್ಸ್, ಹಲವು ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ. ವಜಾಗೊಳಿಸಿದ ಉದ್ಯೋಗಿಗಳಿಗೆ ಔಟ್ಪ್ಲೇಸ್ಮೆಂಟ್ ಬೆಂಬಲವನ್ನು ಒದಗಿಸುತ್ತಿದೆ ಎಂದು ಕಂಪನಿಯ ಹೇಳಿಕೆಯೊಂದು ತಿಳಿಸಿದೆ.
ಮಾರ್ಚ್ 2024 ತ್ರೈಮಾಸಿಕದಲ್ಲಿ ಪೇಟಿಎಂ ನ ಉದ್ಯೋಗಿಗಳ ಸಂಖ್ಯೆಯು ಸುಮಾರು 36,521 ಸಿಬ್ಬಂದಿಗೆ ತ್ರೈಮಾಸಿಕ ಆಧಾರದ ಮೇಲೆ ಕುಸಿದಿದೆ. ಅಂದರೆ ಬರೋಬ್ಬರಿ 3,500 ಉದ್ಯೋಗಿಗಳನ್ನು ವಜಾ ಮಾಡಿದೆ. ಮುಖ್ಯವಾಗಿ ಪೇಟಿಎಂ ಪಾವತಿಗಳ ಬ್ಯಾಂಕ್ ಸೇವೆಗಳ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ನಿಷೇಧದ ಪ್ರಭಾವದಿಂದಾಗಿ ಈ ಎಲ್ಲಾ ವಜಾಗಳು ನಡೆಯುತ್ತಿವೆ.

"One97 ಕಮ್ಯುನಿಕೇಷನ್ಸ್ ಲಿಮಿಟೆಡ್ (OCL) ಕಂಪನಿಯ ಪುನರ್ರಚನೆಯ ಪ್ರಯತ್ನಗಳ ಭಾಗವಾಗಿ ರಾಜೀನಾಮೆ ನೀಡಿದ ಉದ್ಯೋಗಿಗಳಿಗೆ ಔಟ್ಪ್ಲೇಸ್ಮೆಂಟ್ ಬೆಂಬಲವನ್ನು ಒದಗಿಸುತ್ತಿದೆ. ಕಂಪನಿಯ ಮಾನವ ಸಂಪನ್ಮೂಲ ತಂಡಗಳು ಪ್ರಸ್ತುತ ನೇಮಕ ಮಾಡಿಕೊಳ್ಳುತ್ತಿರುವ 30 ಕ್ಕೂ ಹೆಚ್ಚು ಕಂಪನಿಗಳೊಂದಿಗೆ ಸಕ್ರಿಯವಾಗಿ ಸಹಕರಿಸುತ್ತಿವೆ. ತಮ್ಮ ಮಾಹಿತಿಯನ್ನು ಹಂಚಿಕೊಳ್ಳಲು ಒಪ್ಪಿದ ಉದ್ಯೋಗಿಗಳಿಗೆ ಸಹಾಯವನ್ನು ಒದಗಿಸುತ್ತಿವೆ. ತಕ್ಷಣ ಅವರಿಗೆ ಕೆಲಸ ಕೊಡಿಸುತ್ತಿದೆ" ಎಂದು ಕಂಪನಿ ಸೋಮವಾರ ತಿಳಿಸಿದೆ.
ಆದರೂ, ವಜಾ ಮಾಡಿದ ಉದ್ಯೋಗಿಗಳ ಸಂಖ್ಯೆಯನ್ನು ಪೇಟಿಎಂ ಬಹಿರಂಗಪಡಿಸಿಲ್ಲ. "ಪೇಟಿಎಂ ಸಹ ಉದ್ಯೋಗಿಗಳಿಗೆ ನೀಡಬೇಕಾದ ಬೋನಸ್ಗಳನ್ನು ವಿತರಿಸುತ್ತಿದೆ, ಪ್ರಕ್ರಿಯೆಯಲ್ಲಿ ನ್ಯಾಯಸಮ್ಮತತೆ ಮತ್ತು ಪಾರದರ್ಶಕತೆಯನ್ನು ಖಾತ್ರಿಪಡಿಸುತ್ತದೆ" ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಾರ್ಚ್ 15 ರಿಂದ ಪೇಟಿಎಂ ನ ಸಹವರ್ತಿಯಾದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (PPBL), ಗ್ರಾಹಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಗ್ರಾಹಕ ಖಾತೆಗಳು, ವ್ಯಾಲೆಟ್ಗಳು ಮತ್ತು ಫಾಸ್ಟ್ಟ್ಯಾಗ್ಗಳಲ್ಲಿ ಠೇವಣಿ, ಕ್ರೆಡಿಟ್ ವಹಿವಾಟುಗಳು ಅಥವಾ ಟಾಪ್-ಅಪ್ಗಳನ್ನು ಸ್ವೀಕರಿಸದಂತೆ ನಿರ್ಬಂಧಿಸಿದೆ.
ಪೇಟಿಎಂ ತನ್ನ ಪಾವತಿಗಳ ಬ್ಯಾಂಕ್ಗೆ ಸಂಬಂಧಿಸಿದ ವಹಿವಾಟುಗಳ ಮೇಲೆ RBI ವಿಧಿಸಿದ ನಿಷೇಧದ ನಂತರ 2024 ರ ಜನವರಿ-ಮಾರ್ಚ್ನಲ್ಲಿ 550 ಕೋಟಿ ರೂಪಾಯಿಗಳನಷ್ಟವನ್ನು ವರದಿ ಮಾಡಿದೆ. ಒಂದು ವರ್ಷದ ಹಿಂದೆ ಇದೇ ಅವಧಿಯಲ್ಲಿ ಕಂಪನಿಯು 167.5 ಕೋಟಿ ರೂಪಾಯಿ ನಷ್ಟವನ್ನು ದಾಖಲಿಸಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications