Government Jobs: ಪಿಡಿಓ ಹುದ್ದೆ ನೇಮಕಾತಿ; ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾಹಿತಿ
ಬಹುದಿನಗಳ ಬೇಡಿಕೆಯಂತೆ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ (PDO) ಹುದ್ದೆ ತುಂಬಲು ಸರ್ಕಾರ ಮುಂದಾಗಿದ್ದು ಅರ್ಹ ಅಭ್ಯರ್ಥಿಗಳ ನೇಮಕಾತಿ ಮಾಡಲು ಕೆಪಿಎಸ್ಸಿ ಯಿಂದ ಅಧಿಸೂಚನೆ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮುಂದಿನ ದಿನಗಳಲ್ಲಿ ಮತ್ತಷ್ಟು ಸರ್ಕಾರಿ ಹುದ್ದೆಗಳಿಗೆ ನೇಮಕಾತಿಗೆ ಕ್ರಮ ವಹಿಸುವ ಭರವಸೆ ನೀಡಿದ್ದಾರೆ.

ಟ್ವೀಟ್ಮಾಡಿರುವ ಅವರು, "ನಾವು ಅಧಿಕಾರ ವಹಿಸಿಕೊಂಡಾಗ ನೂತನ ನೇಮಕಾತಿಗಳಿಗಾಗಿ ನಮ್ಮ ಇಲಾಖೆಯಲ್ಲಿದ್ದ ಹಲವಾರು ನಿರ್ಬಂಧನೆ ಹಾಗೂ ಅಡೆತಡೆಗಳನ್ನು ಈಗ ಸಂಪೂರ್ಣವಾಗಿ ನಿವಾರಿಸಿ ಎಲ್ಲಾ ನೂತನ ನೇಮಕಾತಿಗಳಿಗೆ ದಾರಿ ಮಾಡಿಕೊಡಲಾಗಿದೆ. ಅಗತ್ಯವಿದ್ದ ಸಿಬ್ಬಂದಿ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿ ಕ್ಯಾಬಿನೆಟ್ ಅನುಮೋದನೆ ಪಡೆದು, ನೂತನ ನೇಮಕಾತಿಗಳನ್ನು ಶೀಘ್ರವಾಗಿ ನಡೆಸುವಂತೆ ಕೆಪಿಎಸ್ಸಿಗೆ ಸೂಚನೆ ನೀಡಲಾಗಿತ್ತು. ಅದರಂತೆ ಅಧಿಸೂಚನೆ ಹೊರಡಿಸಲಾಗಿದೆ." ಎಂದಿದ್ದಾರೆ.
ನಾವು ಅಧಿಕಾರ ವಹಿಸಿಕೊಂಡಾಗ ನೂತನ ನೇಮಕಾತಿಗಳಿಗಾಗಿ ನಮ್ಮ ಇಲಾಖೆಯಲ್ಲಿದ್ದ ಹಲವಾರು ನಿರ್ಬಂಧಗಳು ಹಾಗೂ ಅಡೆತಡೆಗಳನ್ನು ಈಗ ಸಂಪೂರ್ಣವಾಗಿ ನಿವಾರಿಸಿ ಎಲ್ಲಾ ನೂತನ ನೇಮಕಾತಿಗಳಿಗೆ ದಾರಿ ಮಾಡಿಕೊಡಲಾಗಿದೆ. ಅಗತ್ಯವಿದ್ದ ಸಿಬ್ಬಂದಿ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿ ಕ್ಯಾಬಿನೆಟ್ ಅನುಮೋದನೆ ಪಡೆದು, ನೂತನ ನೇಮಕಾತಿಗಳನ್ನು…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) March 16, 2024
ಇದೀಗ ರಾಜ್ಯಾದ್ಯಂತ 247 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (PDO) ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಕರೆ ನೀಡಿದ್ದು ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಶುಭ ಕೋರುತ್ತೇನೆ. ಈ 247 ಹುದ್ದೆಗಳ ಪೈಕಿ 97 ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗಕ್ಕೆ ಸೇರಿವೆ.
ಇದು ಕೇವಲ ಪ್ರಾರಂಭವಾಗಿದ್ದು ಮುಂದಿನ ದಿನಗಳಲ್ಲಿ ಇಲಾಖೆಯಲ್ಲಿರುವ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ. ರಾಜ್ಯದ ಯುವಜನತೆಯ ಸ್ವಾವಲಂಬನೆಯ ಹಕ್ಕಿಗಾಗಿ ಹಾಗೂ ಅವರನ್ನು ಉದ್ಯಮಶೀಲರನ್ನಾಗಿಸಲು ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆ ಯಾವಾಗ?
ಏಪ್ರಿಲ್ 15ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೇ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕಗಳನ್ನು ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ. ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications