ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 152 ಹುದ್ದೆಗಳಿಗೆ ನೇರ ನೇಮಕಾತಿ
ಬೆಂಗಳೂರು, ಮಾರ್ಚ್ 14: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 152 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಾಲನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಶಕ್ತಿ ತುಂಬಲು ನಿರ್ಧರಿಸಲಾಗಿದ್ದು, ಮಂಡಳಿಗೆ ಮಂಜೂರಾಗಿರುವ 253 ಹುದ್ದೆಗಳ ಪೈಕಿ 152 ಹುದ್ದೆಗಳು ತಾಂತ್ರಿಕ, ಪ್ರಯೋಗಶಾಲೆ ಮತ್ತು ಆಡಳಿತ ವಿಭಾಗಗಳಲ್ಲಿ ಖಾಲಿ ಇದ್ದು, 152 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಮಂಡಳಿಯಲ್ಲಿ 153 ಖಾಲಿ ಹುದ್ದೆಗಳ ಭರ್ತಿಗೆ 2010ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಕಾರಣಾಂತರದಿಂದ ಹಲವು ಹುದ್ದೆಗಳು ಭರ್ತಿ ಆಗದೆ ಹಾಗೆ ಉಳಿದಿವೆ. ಈ ಹುದ್ದೆಗಳೂ ಸೇರಿದಂತೆ ಪ್ರಸ್ತುತ, ಮಂಡಳಿಯಲ್ಲಿ ರಾಜ್ಯ ವ್ಯಾಪಿ ಉಳಿಕೆ ವೃಂದ ಹಾಗೂ ರಾಜ್ಯ ವ್ಯಾಪಿ ಸ್ಥಳೀಯ ವೃಂದದಡಿಯಲ್ಲಿ ಖಾಲಿಯಿರುವ ಹುದ್ದೆಗಳ ಪೈಕಿ ಬಹುತೇಕ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯವ್ಯಾಪಿ ಉಳಿಕೆ ವೃಂದದ 146 ಮತ್ತು ರಾಜ್ಯ ವ್ಯಾಪಿ ಸ್ಥಳೀಯ ವೃಂದದ 6 ಸೇರಿ 152 ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇರ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲು ಸರ್ಕಾರ ಈಗಾಗಲೇ ಅನುಮತಿಸಿರುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹುದ್ದೆಗಳ ವಿವರ
ಪ್ರಸ್ತುತ, ಮಂಡಳಿಯಲ್ಲಿ ಒಟ್ಟಾರೆ ಖಾಲಿಯಿರುವ ಒಟ್ಟು 253 ಹುದ್ದೆಗಳ ಪೈಕಿ ಸರ್ಕಾರದಿಂದ ಅನುಮತಿಸಿರುವ ಒಟ್ಟು 152 ಹುದ್ದೆಗಳನ್ನು ಭರ್ತಿ ಮಾಡಿದ್ದಲ್ಲಿ, ಶೇಕಡಾ 6೦ ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿದಂತಾಗುತ್ತದೆ. ಇದರೊಂದಿಗೆ, ಉಳಿದ 23 ಹುದ್ದೆಗಳನ್ನು ಬ್ಯಾಕ್ ಲಾಗ್ ಎಂದು ಪರಿಗಣಿಸಿದ್ದಲ್ಲಿ, ಸದರಿ 152 ಹುದ್ದೆಗಳೊಂದಿಗೆ 23 ಹುದ್ದೆಗಳು ಸಹ ಸೇರಿಸಿ ಒಟ್ಟು 175 ಹುದ್ದೆಗಳನ್ನು ಭರ್ತಿ ಮಾಡಿದಾಗ, ಶೇಕಡ 69 ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿದಂತಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications