Post Office Recruitment 2023: ಲಿಖಿತ ಪರೀಕ್ಷೆ ಇಲ್ಲ, ನೇರ ಸಂದರ್ಶನದಡಿ ಸರ್ಕಾರಿ ಉದ್ಯೋಗ ಭರ್ತಿ
ಬೆಂಗಳೂರು, ಆಗಸ್ಟ್ 03: ಭಾರತೀಯ ಅಂಚೆ ಇಲಾಖೆಯು ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದ್ದು, ಈ ಸಂಬಂಧ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗ ಬಯಸುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತರಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಆಗಸ್ಟ್ 23ರವರೆಗೆ ಅವಕಾಶ ಇರಲಿದೆ.
ಭಾರತೀಯ ಅಂಚೆ ಇಲಾಖೆಯಲ್ಲಿ ಬ್ರಾಂಚ್ ಪೋಸ್ಟ್ಮಾಸ್ಟರ್ (BPM), ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ಮಾಸ್ಟರ್ (ABPM), ಡಾಕ್ ಸೇವಕ್ ಹುದ್ದೆಗಳಿಗೆ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ನೇಮಕಾತಿಗಾಗಿ ಇಲಾಖೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮುನ್ನ ಹುದ್ದೆಯ ಸಂಪೂರ್ಣ ಮಾಹಿತಿ, ನೇಮಕಾತಿ ಹೇಗೆ? ಶೈಕ್ಷಣಿಕ ಅರ್ಹತೆ ಬಗ್ಗೆ ತಿಳಿಯಿರಿ.

ವಿಶೇಷವೆಂದರೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ದೆ. ಈ ನೇಮಕಾತಿಗಾಗಿ ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ. ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಇದ್ದು, ಗರಿಷ್ಠ 40 ವರ್ಷ ಮೀರಿಬಾರದು.
ವೇತನ ವಿವರ
ಇಲಾಖೆಯು ಅಭ್ಯರ್ಥಿಗಳ 10ನೇ ತರಗತಿ ಅಂಕದ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಆಗುವವರಿಗೆ ಮಾಸಿಕವಾಗಿ 12,000 ರೂಪಾಯಿಯಿಂದ 24,470 ರೂಪಾಯಿವರೆಗೆ ಇರಲಿದೆ.

ಅರ್ಜಿ ಶುಲ್ಕ ಎಷ್ಟು?
ಅಂಚೆ ಇಲಾಖೆಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದವರು 100 ರೂಪಾಯಿ ಪಾವತಿಸಬೇಕಿದೆ. ಎಸ್ಸಿ, ಎಸ್ಟಿ/PWD ವರ್ಗದ ಅಭ್ಯರ್ಥಿಗಳಿಗೆ ಯಾವ ಶುಲ್ಕ ಇರುವುದಿಲ್ಲ.
ದಾಖಲೆ ಪರಿಶೀಲನೆ
ಅಭ್ಯರ್ಥಿಗಳ ಮೆರಿಟ್ ಪಟ್ಟಿಯಿಂದ ಶಾರ್ಟ್ಲಿಸ್ಟ್ ಮಾಡಿದ ಬಳಿಕ ಅವರು ದಾಖಲೆಗಳನ್ನು ಪರಿಶೀಲನೆ ಇರಲಿದೆ. ಅಂದು ಅಭ್ಯರ್ಥಿಗಳು ಹಾಜರಾಗಬೇಕಿರುತ್ತದೆ. ಅವರ ಅರ್ಹತೆಯನ್ನು ಪರಿಶೀಲನೆಗಾಗಿ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಒದಗಿಬೇಕಿರುತ್ತದೆ.
ಈ ಎಲ್ಲ ಪ್ರಕ್ರಿಯೆ ಮುಗಿದು ಆಯ್ಕೆಯಾದ ಅಭ್ಯರ್ಥಿಗಳನ್ನು ಆಯಾ ಅಂಚೆ ವಲಯದಲ್ಲಿ GDS ಆಗಿ ನೇಮಕ ಮಾಡಲಾಗುವುದು ಎಂದು ಅಧಿಸೂಚನೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ https://indiapostgdsonline.gov.in/ ಗೆ ಭೇಟಿ ನೀಡುವಂತೆ ತಿಳಿಸಲಾಗಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications