Post Office Recruitment 2023: ಲಿಖಿತ ಪರೀಕ್ಷೆ ಇಲ್ಲ, ನೇರ ಸಂದರ್ಶನದಡಿ ಸರ್ಕಾರಿ ಉದ್ಯೋಗ ಭರ್ತಿ
ಬೆಂಗಳೂರು, ಆಗಸ್ಟ್ 03: ಭಾರತೀಯ ಅಂಚೆ ಇಲಾಖೆಯು ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದ್ದು, ಈ ಸಂಬಂಧ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗ ಬಯಸುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತರಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಆಗಸ್ಟ್ 23ರವರೆಗೆ ಅವಕಾಶ ಇರಲಿದೆ.
ಭಾರತೀಯ ಅಂಚೆ ಇಲಾಖೆಯಲ್ಲಿ ಬ್ರಾಂಚ್ ಪೋಸ್ಟ್ಮಾಸ್ಟರ್ (BPM), ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ಮಾಸ್ಟರ್ (ABPM), ಡಾಕ್ ಸೇವಕ್ ಹುದ್ದೆಗಳಿಗೆ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ನೇಮಕಾತಿಗಾಗಿ ಇಲಾಖೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮುನ್ನ ಹುದ್ದೆಯ ಸಂಪೂರ್ಣ ಮಾಹಿತಿ, ನೇಮಕಾತಿ ಹೇಗೆ? ಶೈಕ್ಷಣಿಕ ಅರ್ಹತೆ ಬಗ್ಗೆ ತಿಳಿಯಿರಿ.

ವಿಶೇಷವೆಂದರೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ದೆ. ಈ ನೇಮಕಾತಿಗಾಗಿ ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ. ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಇದ್ದು, ಗರಿಷ್ಠ 40 ವರ್ಷ ಮೀರಿಬಾರದು.
ವೇತನ ವಿವರ
ಇಲಾಖೆಯು ಅಭ್ಯರ್ಥಿಗಳ 10ನೇ ತರಗತಿ ಅಂಕದ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಆಗುವವರಿಗೆ ಮಾಸಿಕವಾಗಿ 12,000 ರೂಪಾಯಿಯಿಂದ 24,470 ರೂಪಾಯಿವರೆಗೆ ಇರಲಿದೆ.

ಅರ್ಜಿ ಶುಲ್ಕ ಎಷ್ಟು?
ಅಂಚೆ ಇಲಾಖೆಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದವರು 100 ರೂಪಾಯಿ ಪಾವತಿಸಬೇಕಿದೆ. ಎಸ್ಸಿ, ಎಸ್ಟಿ/PWD ವರ್ಗದ ಅಭ್ಯರ್ಥಿಗಳಿಗೆ ಯಾವ ಶುಲ್ಕ ಇರುವುದಿಲ್ಲ.
ದಾಖಲೆ ಪರಿಶೀಲನೆ
ಅಭ್ಯರ್ಥಿಗಳ ಮೆರಿಟ್ ಪಟ್ಟಿಯಿಂದ ಶಾರ್ಟ್ಲಿಸ್ಟ್ ಮಾಡಿದ ಬಳಿಕ ಅವರು ದಾಖಲೆಗಳನ್ನು ಪರಿಶೀಲನೆ ಇರಲಿದೆ. ಅಂದು ಅಭ್ಯರ್ಥಿಗಳು ಹಾಜರಾಗಬೇಕಿರುತ್ತದೆ. ಅವರ ಅರ್ಹತೆಯನ್ನು ಪರಿಶೀಲನೆಗಾಗಿ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಒದಗಿಬೇಕಿರುತ್ತದೆ.
ಈ ಎಲ್ಲ ಪ್ರಕ್ರಿಯೆ ಮುಗಿದು ಆಯ್ಕೆಯಾದ ಅಭ್ಯರ್ಥಿಗಳನ್ನು ಆಯಾ ಅಂಚೆ ವಲಯದಲ್ಲಿ GDS ಆಗಿ ನೇಮಕ ಮಾಡಲಾಗುವುದು ಎಂದು ಅಧಿಸೂಚನೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ https://indiapostgdsonline.gov.in/ ಗೆ ಭೇಟಿ ನೀಡುವಂತೆ ತಿಳಿಸಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications