90 ಗಂಟೆ ಎಸ್.ಎನ್.ಸುಬ್ರಹ್ಮಣ್ಯನ್ & 70 ಗಂಟೆ ನಾರಾಯಣ ಮೂರ್ತಿಗೆ ಭಾರತ್ ಪೇ ಕಂಪನಿ ಸಿಇಒ ಕ್ಲಾಸ್
ಬೆಂಗಳೂರು, ಜನವರಿ, 22: ಈಗಾಗಲೇ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎನ್ನುವ ಹೇಳಿಕೆ ನೀಡಿ ಇನ್ಫೋಸಿಸ್ ನಾರಾಯಣಮೂರ್ತಿ ಅವರು ಉದ್ಯೋಗಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಇತ್ತೀಚೆಗಷ್ಟೇ ಎಲ್ & ಟಿ ಕಂಪನಿ ಅಧ್ಯಕ್ಷ ಎಸ್.ಎನ್.ಸುಬ್ರಹ್ಮಣ್ಯನ್ ಅವರು ಕೆಲಸದ ಅವಧಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ಭಾರತ್ ಪೇ ಕಂಪನಿ ಸಿಇಒ ನಳಿನ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮನೆಯಲ್ಲಿ ಕುಳಿತು ಎಷ್ಟು ಹೆಂಡತಿಯ ಮುಖ ನೋಡುಕೊಂಡು ಇರುತ್ತೀರಿ. ವಾರದಲ್ಲಿ 90 ಗಂಟೆ ಕೆಲಸ ಮಾಡಿ, ಶ್ರಮವಹಿಸಿ, ದುಡಿಯಲು ಭಾನುವಾರದ ರಜೆಯನ್ನು ಕೂಡ ತ್ಯಜಿಸಿ ಎಂದು ಸುಬ್ರಹ್ಮಣ್ಯನ್ ಹೇಳಿದ್ದರು. ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ನಳಿನ್ ಯೋಗಿ ಅವರು, ಎಷ್ಟು ಅವಧಿಯ ಕೆಲಸ ಮಾಡಿದ್ದೇವೆ ಎನ್ನುವುದಕ್ಕಿಂತ ಎಷ್ಟು ಗುಣಮಟ್ಟದ ಕೆಲಸ ಮಾಡಿದ್ದೇವೆ ಎನ್ನೋದೇ ಮುಖ್ಯ ಎಂದು ಹೇಳಿ ಗಮನ ಸೆಳೆದಿದ್ದಾರೆ.

ಅಲ್ಲದೆ, ನಮ್ಮ ಕಂಪನಿ ನಮ್ಮ ಉದ್ಯೋಗಿಗಳಿಗೆ ಸುಬ್ರಹ್ಮಣ್ಯನ್ ಅಂತಹವರ ಹೇಳಿಕೆಯನ್ನು ಸಮರ್ಥಿಸಿ ಕೆಲಸ ಮಾಡಲು ಹೇಳುವುದಿಲ್ಲ ಎಂದು ಹೇಳಿದ್ದಾರೆ. ಇನ್ನು ವಾರದಲ್ಲಿ 90 ಗಂಟೆ ಕೆಲಸ ಮಾಡುವುದಂತೂ ಸಾಧ್ಯವಿಲ್ಲ. ದೇಶದ ಕಾರ್ಪೋರೇಟ್ ವಲಯ ನಿರೀಕ್ಷೆಗೂ ಮೀರಿ ಬೆಳೆಯುತ್ತಿದ್ದು, ಯುವಕ & ಯುವತಿಯರಿಗೆ ತುಂಬಾ ಉದ್ಯೋಗವಕಾಶಗಳು ಸಿಗುತ್ತಲಿವೆ. ಅವರಿಗೆ ಉದ್ಯೋಗವೊಂದೇ ಎಲ್ಲವೂ ಅಲ್ಲ. ಅವರ ಅಭಿರುಚಿಗಳು ಹೆಚ್ಚಾಗಿವೆ. ಅವುಗಳನ್ನು ಗೌರವಿಸಿ ಅವರಿಂದ ಕ್ವಾಲಿಟಿ ಕೆಲಸ ಪಡೆಯಬೇಕಿದೆ ಎಂದು ಹೇಳಿದರು.
ಮಾನಸಿಕವಾಗಿ, ದೈಹಿಕವಾಗಿ ಆರೋಗ್ಯವಾಗಿ ಇರುವವರಿಂದ ಕೆಲಸದ ಕ್ವಾಲಿಟಿ ಹೆಚ್ಚಿರುತ್ತದೆ. ಅವರು ಸಂತೋಷದಿಂದಲೇ ಇಷ್ಟಪಟ್ಟು ಕೆಲಸ ಮಾಡುತ್ತಾರೆ. ಇದರಿಂದ ಅವರಿಗೂ ಲಾಭ, ಕಂಪನಿಗೂ ಲಾಭ. ಒತ್ತಾಯ ಪೂರ್ವಕವಾಗಿ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿದರೆ ಏನು ಸಾಧ್ಯ ಇಲ್ಲ ಎಂದು ಹೇಳಿದರು.
ಇನ್ನು ಸುಬ್ರಹ್ಮಣ್ಯನ್ ಅವರ 90 ಗಂಟೆ ಕೆಲಸದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ ಅವರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಂದು ಹೇಳಿದ್ದರು. ಇದನ್ನು ಕೂಡ ಅವರು ವಿರೋದ್ಧ ವ್ಯಕ್ತಪಡಿಸಿ ಉದ್ಯೋಗಿಗಳ ಪರ ಬ್ಯಾಟ್ ಬೀಟಿದ್ದಾರೆ.
ಇನ್ಫೋಸಿಸ್ ನಾರಾಯಣ ಮೂರ್ತಿ ಅವರು 70 ಗಂಟೆ ಕೆಲಸ ಬಗ್ಗೆ ಮೊದಲಿನಿಂದಲೂ ಹೇಳಿಕೊಂಡು ಬರುತ್ತಿದ್ದು, ಇದಕ್ಕೆ ತೀವ್ರ ವಿರೋಧಗಳು ಕೂಡ ವ್ಯಕ್ತವಾಗಿದ್ದರು. ಇದರ ಬೆನ್ನಲ್ಲೇ ಎಲ್ & ಟಿ ಕಂಪನಿ ಅಧ್ಯಕ್ಷ ಎಸ್.ಎನ್.ಸುಬ್ರಹ್ಮಣ್ಯನ್ ಅವರು ಕೂಡ ನಂದೆಲ್ಲಿ ಇಡಲಿ ನಂದಗೋಪಾಲ ಎನ್ನುವಂತೆ ಭಾನುವಾರ ಸಹಿತ 90 ಗಂಟೆ ಉದ್ಯೋಗ ಮಾಡಬೇಕು ಎಂದು ಹೇಳುವ ಮೂಲಕ ಉದ್ಯೋಗಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ











Click it and Unblock the Notifications