ರಾಯಚೂರು : 41 ಗ್ರಾಮಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜನವರಿ 25 : ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ರಾಯಚೂರು ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು 22/2/2019 ಕೊನೆಯ ದಿನವಾಗಿದೆ.
ಒಟ್ಟು 41 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೈದರಾಬಾದ್-ಕರ್ನಾಟಕ ಪ್ರದೇಶದವರಿಗೆ ಮೀಸಲಿರಿಸಿದ ಹುದ್ದೆಗಳ ಪೈಕಿ ಖಾಲಿ ಇರುವ ಹುದ್ದೆಗಳು 41, ಇತರೆ ಪ್ರದೇಶದವರಿಗೆ ಮೀಸಲಿರಿಸಿದ ಹುದ್ದೆಗಳು 10.
ಮೈಸೂರು ಕೋರ್ಟ್ ನೇಮಕಾತಿ : 80 ಹುದ್ದೆಗಳಿಗೆ ಅರ್ಜಿ ಹಾಕಿ
ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಪ್ರತ್ಯೇಕವಾಗಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1ರ ಅಭ್ಯರ್ಥಿಗಳಿಗೆ 150 ರೂ., ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ವರ್ಗಕ್ಕೆ 300 ರೂ.ಗಳ ಶುಲ್ಕ ನಿಗದಿ ಮಾಡಲಾಗಿದೆ.
ಕರ್ನಾಟಕದಲ್ಲಿ 131 ಅಂಗನವಾಡಿ ಸಹಾಯಕ ಹುದ್ದೆಗಳಿವೆ
ವಿದ್ಯಾರ್ಹತೆ : ಪಿಯುಸಿ ಪರೀಕ್ಷೆ ಅಥವ ಸಿಬಿಎಸ್ಇ ಅಥವ ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಈ ವಿದ್ಯಾರ್ಹತೆ ಹೊರತುಪಡಿಸಿ ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ.
ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕವಾದ 22/2/2019ಕ್ಕೆ ಕೆಳಗಿನ ಗರಿಷ್ಠ ವಯೋಮಿತಿಯನ್ನು ಹೊಂದಿರತಕ್ಕದ್ದು.
ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 40. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಸಾಮಾನ್ಯ ವರ್ಗದವರಿಗೆ 35 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ವಿವರಗಳಿಗಾಗಿ ವಿಳಾಸ