Get Updates
Get notified of breaking news, exclusive insights, and must-see stories!

ರಾಜ್ಯದಲ್ಲಿ 2,500 ಶಿಕ್ಷಕರು, 789 ಉಪನ್ಯಾಸಕರ ನೇಮಕಾತಿ: ಶೀಘ್ರದಲ್ಲೇ ಅಧಿಸೂಚನೆ- ಮಾಹಿತಿ, ವಿವರ ತಿಳಿಯಿರಿ

ಮಡಿಕೇರಿ, ಜನವರಿ 27: ಪ್ರೌಢಶಾಲಾ ಮತ್ತು ಪಿಯು ಕಾಲೇಜುಗಳಿಗೆ ಕ್ರಮವಾಗಿ 2,500 ಶಿಕ್ಷಕರು ಹಾಗೂ 789 ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಗುರುವಾರ ಮಾತನಾಡಿದರು.

ಶಿಕ್ಷಕರು ಹಾಗೂ ಉಪನ್ಯಾಸಕರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

Recruitment of 2,500 teachers, 789 lecturers in the state- Know details about this

ಪ್ರಾಥಮಿಕ ಶಾಲೆಗಳಿಗೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದರು. ಆಯ್ಕೆಯಾದ ಶಿಕ್ಷಕರು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ತಮ್ಮ ಕರ್ತವ್ಯಕ್ಕೆ ಸೇರಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

'ವಿವೇಕ' ಯೋಜನೆಯಡಿ 6,601 ಸೇರಿದಂತೆ ಒಟ್ಟು 9,000 ತರಗತಿ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಮಳೆಯಿಂದ ಹಾನಿಗೀಡಾದ ಪ್ರತಿ ಅಂಗನವಾಡಿ ದುರಸ್ತಿ ಕಾರ್ಯಕ್ಕೆ 2 ಲಕ್ಷ ರೂಪಾಯಿ ನೀಡಲಾಗುವುದು ಎಂದು ನಾಗೇಶ್‌ ತಿಳಿಸಿದರು.

ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಶಿಕ್ಷಣದಲ್ಲಿನ ಹಿನ್ನಡೆಯನ್ನು ನಿರ್ವಹಿಸಲು ಜಾರಿಗೆ ತಂದಿರುವ 'ಕಲಿಕಾ ಚೇತರಿಕೆ' ಕಾರ್ಯಕ್ರಮವನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ 'ಕಲಿಕಾ ಚೇತರಿಕೆ 2.0' ಆಗಿ ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದರು.

Recruitment of 2,500 teachers, 789 lecturers in the state- Know details about this

ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ 47,000 ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಸರ್ಕಾರವು ಅತಿಥಿ ಅಧ್ಯಾಪಕರೊಂದಿಗೆ ಕೆಲಸ ಮಾಡುತ್ತಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಈ ಹಿಂದೆ ವಿಧಾನಸಭೆಗೆ ತಿಳಿಸಿದ್ದರು.

'ನಾವು 27,000 ಅತಿಥಿ ಶಿಕ್ಷಕರನ್ನು ನಿಯೋಜಿಸಿದ್ದೇವೆ. ನಾವು ವಿಷಯ ಶಿಕ್ಷಕರ ಇರುವಂತೆ ನೋಡಿಕೊಂಡಿದ್ದೇವೆ. ನಾವು 15,000 ಪದವೀಧರ ಶಿಕ್ಷಕರನ್ನು (6-8ನೇ ತರಗತಿಗೆ) ನೇಮಕ ಮಾಡುವ ಪ್ರಕ್ರಿಯೆಯಲ್ಲಿದ್ದೇವೆ. ಒಂದು ವೇಳೆ ನಮಗೆ ಕೊರತೆಯಿದ್ದರೆ, ನಾವು ಮತ್ತೊಂದು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸುತ್ತೇವೆ' ಎಂದು ಅವರು ಹೇಳಿದ್ದರು.

ಉತ್ತರ ಕರ್ನಾಟಕದ ಶಾಸಕರು ತಮ್ಮ ಜಿಲ್ಲೆಗಳಲ್ಲಿ ಅದರಲ್ಲೂ ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚಿನ ಹುದ್ದೆಗಳು ಖಾಲಿ ಇವೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಇದೇ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ಸರ್ಕಾರ ಪರಿಚಯಿಸಲಿದೆ ಎಂದು ಬಿ ಸಿ ನಾಗೇಶ್ ತಿಳಿಸಿದ್ದಾರೆ.

'ಸಾಮಾಜಿಕ ಬದಲಾವಣೆಯು ಈ ಸಮಯದ ಅಗತ್ಯವಾಗಿದೆ. NEP ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಮೊಘಲರು ಮತ್ತು ಬ್ರಿಟಿಷರು ಪರಿಚಯಿಸಿದ ವ್ಯವಸ್ಥೆಗಳು, ನೀತಿಗಳು ಮತ್ತು ಆಡಳಿತದ ವಿರುದ್ಧ ಭಾರತೀಯರು ಹೋರಾಡಿದ್ದಾರೆ. 75 ವರ್ಷಗಳ ನಂತರ NEP ಅನ್ನು ಮೆಕಾಲೆಯಿಸಂ ಬದಲಿಗೆ ಸ್ವಾವಲಂಬಿ ಸಮಾಜಕ್ಕಾಗಿ ಪರಿಚಯಿಸಲಾಗುವುದು' ಎಂದು ಅವರು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+