ಶೀಘ್ರದಲ್ಲೇ 5 ಸಾವಿರ ಶಾಲಾ ಶಿಕ್ಷಕರ ನೇಮಕಾತಿ: ಮಹತ್ವದ ಮಾಹಿತಿ ನೀಡಿದ ಮಧು ಬಂಗಾರಪ್ಪ
ಬೆಂಗಳೂರು, ಆಗಸ್ಟ್ 21: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಕೊನೆಗೂ ಶುಭ ಸುದ್ದಿ ಸಿಕ್ಕಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಈ ಬಗ್ಗೆ ಮಹತ್ವದ ಮಾಹಿತಿಯನ್ನ ನೀಡಿದ್ದಾರೆ.
ಶೀಘ್ರದಲ್ಲೇ ಐದು ಸಾವಿರ ಶಾಲಾ ಶಿಕ್ಷಕರ ನೇಮಕಾತಿ ನಡೆಯಲಿದೆ. ಸರ್ಕಾರಿ ಶಾಲೆಗಳಲ್ಲಿ 56 ಸಾವಿರ ಶಿಕ್ಷಕರ ಕೊರತೆ ಇದೆ. 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. 12,500 ಶಿಕ್ಷಕರ ನೇಮಕಾತಿಯಾಗುತ್ತಿದೆ. 5 ಸಾವಿರ ಶಿಕ್ಷಕರ ನೇಮಕಾತಿ ಸದ್ಯದಲ್ಲೇ ಆಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ 56 ಸಾವಿರ ಶಿಕ್ಷಕರ ಕೊರತೆ ಇದೆ. 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. 12,500 ಶಿಕ್ಷಕರ ನೇಮಕಾತಿಯಾಗುತ್ತಿದೆ. 5 ಸಾವಿರ ಶಿಕ್ಷಕರ ನೇಮಕಾತಿ ಸದ್ಯದಲ್ಲೇ ಆಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.#teachersrecruitment@CMofKarnataka @siddaramaiah… pic.twitter.com/98hCdRg0En
— DIPR Karnataka (@KarnatakaVarthe) August 20, 2024
ಇನ್ನು ಮುಂದೆ ಸರ್ಕಾರಿ ಕಟ್ಟಡಗಳಿಗೆ ಮೈಸೂರು ಪೇಂಟ್ಸ್
ಇನ್ನು ಮುಂದೆ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ ಬಳಕೆಗೆ ನಿರ್ಧರಿಸಲಾಗಿದೆ. ಇನ್ನೂ ಹೆಚ್ಚಿನ ಪುನಶ್ಚೇತನ ಕ್ರಮಗಳ ಮೂಲಕ 2024-25ನೇ ಸಾಲಿನಲ್ಲಿ ₹500 ಕೋಟಿ ಲಾಭ ಗಳಿಕೆಯ ಗುರಿ ಹೊಂದಲಾಗಿದೆ. ಆ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಟ್ಟಿ ಬೆಳೆಸಿದ ಮೈಸೂರು ಅರಗು ಮತ್ತು ಬಣ್ಣದ ಕಾರ್ಖಾನೆ ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುವುದು ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.












Click it and Unblock the Notifications