ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ 333 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಸೆ.19: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (SAIL) ತನ್ನ ಅಧಿಕೃತ ವೆಬ್ ತಾಣದಲ್ಲಿ 333 ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಸಹಾಯಕ ಮ್ಯಾನೇಜರ್ ಹಾಗೂ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಜಿದಾರರು ತಮ್ಮ ತುಂಬಿದ ಅರ್ಜಿಯನ್ನು ಸೆಪ್ಟೆಂಬರ್ 30, 2022ರೊಳಗೆ ಸಲ್ಲಿಸತಕ್ಕದ್ದು.
ಸಂಸ್ಥೆ ಹೆಸರು: Steel Authority of India Limited
ಹುದ್ದೆ ಹೆಸರು: ಸಹಾಯಕ ಮ್ಯಾನೇಜರ್ ಹಾಗೂ ನಾನ್ ಎಕ್ಸಿಕ್ಯೂಟಿವ್ ಹುದ್ದೆ
ಒಟ್ಟು ಹುದ್ದೆ : 333
ಉದ್ಯೋಗ ಸ್ಥಳ: ರೂರ್ಕೆಲಾ, ಒಡಿಶಾ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 30, 2022
ಹುದ್ದೆ-ಹುದ್ದೆ ಸಂಖ್ಯೆ
ಸಹಾಯಕ ಮ್ಯಾನೇಜರ್: 8
ಆಪರೇಟರ್ ಕಮ್ ಟೆಕ್ನಿಷಿಯನ್: 39
ಮೈನಿಂಗ್ ಫೋರ್ ಮನ್: 24
ಸರ್ವೇಯರ್: 5
ಮೈನಿಂಗ್ ಮೇಟ್: 55
ಫೈರ್ ಆಪರೇಟರ್: 25
ಫೈರ್ ಮನ್ ಕಮ್ ಫೈರ್ ಇಂಜಿನ್ ಡ್ರೈವರ್: 36
ಅಟೆಂಡೆಂಟ್ ಕಮ್ ಟೆಕ್ನಿಷಿಯನ್: 30

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿ,ಮೆಟ್ರಿಕ್ಯುಲೇಷನ್, ಡಿಪ್ಲೋಮಾ,
ಸಹಾಯಕ ಮ್ಯಾನೇಜರ್: ಬಿ. ಇ/ ಬಿ.ಟೆಕ್
ಆಪರೇಟರ್ ಕಮ್ ಟೆಕ್ನಿಷಿಯನ್, ಮೈನಿಂಗ್ ಫೋರ್ ಮನ್, ಸರ್ವೇಯರ್, ಫೈರ್ ಆಪರೇಟರ್: ಮೆಟ್ರಿಕ್ಯುಲೇಷನ್, 3 ವರ್ಷಗಳ ಡಿಪ್ಲೋಮಾ ಹಾಗೂ ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಅನುಭವ ಹಾಗೂ ಪ್ರಮಾಣ ಪತ್ರ.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷ ಕನಿಷ್ಠ ಹಾಗೂ 28 ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ(ಕೆನೆಪದರ ವರ್ಗ ರಹಿತ) 3 ವರ್ಷ, ದಿವ್ಯಾಂಗ 10 ವರ್ಷಗಳ ತನಕ ವಿನಾಯಿತಿ ಇರಲಿದೆ.
ಸಂಬಳ ನಿರೀಕ್ಷೆ
ಸಹಾಯಕ ಮ್ಯಾನೇಜರ್ : 50,000 ರು ಇಂದ 1,60,000 ರು
ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳು: 26,600 ರು ನಿಂದ 38, 920 ರು
ಫೈರ್ ಆಪರೇಟರ್: 12,900 ರು ಹಾಗೂ 15,000ರು
ಶುಲ್ಕ ಪಾವತಿ:
ಅರ್ಜಿ ಸಲ್ಲಿಸುವ ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 700 ರೂ. ಶುಲ್ಕವನ್ನು ಪಾವತಿಸಬೇಕು. ಎಸ್ಸಿ/ಎಸ್ಟಿ/ಅಂಗವಿಕಲ/ಇಡಬ್ಲ್ಯುಎಸ್/ಇಲಾಖಾ ಅಭ್ಯರ್ಥಿಗಳಿಗೆ 200 ರೂ. ಶುಲ್ಕ ನಿಗದಿ ಮಾಡಲಾಗಿದೆ.
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ಸಂದರ್ಶನ.
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30/09/2022
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications