ಎಂಜಿನಿಯರ್ ಗಳು ಅರ್ಜಿ ಹಾಕುತ್ತಿದ್ದಾರೆ ಎಸ್ಸೆಸ್ಸೆಲ್ಸಿ ಹುದ್ದೆಗಳಿಗೆ
ನವದೆಹಲಿ, ಸೆಪ್ಟೆಂಬರ್ 14: ಭಾರತೀಯ ರೈಲ್ವೆಯಲ್ಲಿ ಈ ಹಿಂದೆ ಡಿ ಗ್ರೂಪ್ ಹುದ್ದೆಗಳು ಎಂದು ಕರೆಯಲಾಗುತ್ತಿದ್ದ, ಈಗ 'ಲೆವೆಲ್ 1' ಎಂದು ಕರೆಯುವ ಹುದ್ದೆಗಳಿಗಾಗಿ ಸೆಪ್ಟೆಂಬರ್ ಹದಿನೇಳನೆ ತಾರೀಕು ಪರೀಕ್ಷೆ ನಡೆಯಲಿದೆ. ಒಟ್ಟು ಖಾಲಿ ಇರುವ ಹುದ್ದೆಗಳು 62,907. ಅವುಗಳಿಗಾಗಿ ಅರ್ಜಿ ಹಾಕಿಕೊಂಡಿದ್ದವರು 1.9 ಕೋಟಿ ಮಂದಿ.
ಅಂದರೆ ಪ್ರತಿ ಹುದ್ದೆಗೆ 302 ಅಭ್ಯರ್ಥಿಗಳು. ರೈಲ್ವೆ ಇಲಾಖೆಯಲ್ಲೇ ಇದು ತೀರಾ ಆರಂಭದ ಅಥವಾ ಕನಿಷ್ಠ ವಿದ್ಯಾಭ್ಯಾಸ ನಿರೀಕ್ಷಿಸುವ ಕೆಲಸ. ರೈಲು ಹಳಿಗಳ ನಿರ್ವಹಣೆ ಮಾಡುವ ಗ್ಯಾಂಗ್ ಮನ್, ಗೇಟ್ ಮಾನ್, ಪಾಯಿಂಟ್ಸ್ ಮ್ಯಾನ್, ಎಲೆಕ್ಟ್ರಿಕಲ್/ ಮೆಕ್ಯಾನಿಕಲ್/ ಎಂಜಿನಿಯರಿಂಗ್/ ಸಿಗ್ನಲ್/ ಟೆಲಿ ಕಮ್ಯೂನಿಕೇಷನ್ಸ್, ಪೋರ್ಟರ್ ಇತ್ಯಾದಿ ಸಹಾಯಕ ಹುದ್ದೆಗಳನ್ನು ಇವು ಒಳಗೊಂಡಿವೆ.
ಇವುಗಳಿಗೆ ಕನಿಷ್ಠ ವಿದ್ಯಾಭ್ಯಾಸ ಹತ್ತನೇ ತರಗತಿ ಅಥವಾ ನ್ಯಾಷನಲ್ ಕೌನ್ಸಿಲ್ ಆನ್ ವೊಕೇಷನಲ್ ಟ್ರೇನಿಂಗ್ ಅಥವಾ ಇಂಡಸ್ಟ್ರಿಯಲ್ ಟ್ರೇನಿಂಗ್ ಇನ್ ಸ್ಟಿಟ್ಯೂಟ್ಸ್ ಅಥವಾ ನ್ಯಾಷನಲ್ ಅಪ್ರೆಂಟಿಸ್ ಷಿಪ್ ಸರ್ಟಿಫಿಕೇಟ್ಸ್. ಆದರೆ ಈ ಸಲ ಕೆಲಸಕ್ಕಾಗಿ ಅರ್ಜಿ ಹಾಕಿಕೊಂಡವರಲ್ಲಿ ಪದವೀಧರರಿದ್ದಾರೆ, ಸ್ನಾತಕೋತ್ತರ ಪದವೀಧರರಿದ್ದಾರೆ ಮತ್ತು ಎಂಜಿನಿಯರಿಂಗ್ ಪದವೀಧರರಿದ್ದಾರೆ ಎಂಬುದನ್ನು ರೈಲ್ವೆ ನೇಮಕಾತಿ ಮಂಡಳಿ ಮೂಲಗಳು ತಿಳಿಸಿವೆ.

ಇದೊಂದೇ ಉದಾಹರಣೆಯಲ್ಲ. ಕಳೆದ ಆಗಸ್ಟ್ 31ರಂದು 1.27 ಲಕ್ಷ ಹುದ್ದೆಗಾಗಿ ನಡೆದ ಪರೀಕ್ಷೆಗೆ 2.35 ಕೋಟಿ ಮಂದಿ ಅರ್ಜಿ ಹಾಕಿಕೊಂಡಿದ್ದರು. ಆಗ ದೊಡ್ಡ ಸಂಖ್ಯೆಯಲ್ಲಿ ಅಗತ್ಯಕ್ಕಿಂತ ಹೆಚ್ಚಿನ ವಿದ್ಯಾಭ್ಯಾಸದವರೇ ಅರ್ಜಿ ಹಾಕಿಕೊಂಡಿದ್ದರು. ಭಾರತದಲ್ಲಿ ಉದ್ಯೋಗ ಸಮಸ್ಯೆ ಜಾಸ್ತಿ ಇದೆ ಎಂಬುದಕ್ಕೆ ಇದು ಸ್ಪಷ್ಟ ನಿದರ್ಶನ ಎನ್ನುತ್ತಾರೆ ವಿಶ್ಲೇಷಕರು.
ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ನರೇಂದ್ರ ಮೋದಿ 2014ರ ಚುನಾವಣೆ ವೇಳೆ ಭರವಸೆ ನೀಡಿದ್ದರು. ಅವರು ಪ್ರಧಾನಿಯಾದ ಈ ನಾಲ್ಕು ವರ್ಷದಲ್ಲಿ ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂಬ ಬಗ್ಗೆ ಅಂಕಿ-ಅಂಶ ದೊರೆತಿಲ್ಲ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications