ಮೈಸೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನಾನಾ ಹುದ್ದೆ ಖಾಲಿ
ಮೈಸೂರು, ಅಕ್ಟೋಬರ್ 14 : ಮೈಸೂರಿನ ಕೇಂದ್ರಿಯ ವಿದ್ಯಾಲಯ ಸಂಘಟನೆಯಲ್ಲಿ ಪ್ರಾಂಶುಪಾಲ, ಸ್ನಾತಕೋತ್ತರ ಶಿಕ್ಷಕ, ನುರಿತ ಪದವಿ ಶಿಕ್ಷಕ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನಗಳ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಾಂಶುಪಾಲ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯೋಮಿತ 35-50 ವರ್ಷದೊಳಗಿರಬೇಕು, ಶೇ.45 ಅಂಕಗಳೊಂದಿಗೆ ಯಾವುದಾದರೂ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ ಬಿ.ಎಡ್. ಪದವಿ ಪಡದಿರಬೇಕು. ಮತ್ತು ಉಪ ಪ್ರಾಶುಂಪಾಲರಾಗಿ 2 ವರ್ಷ ಕೆಲಸ ಮಾಡಿದ ಅನುಭವವಿರಬೇಕು.
ಸ್ನಾತಕೋತ್ತರ ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯೋಮಿತ 40 ವರ್ಷದೊಳಗಿರಬೇಕು, ಶೇ. 50 ಅಂಕಗಳೊಂದಿಗೆ ಸಂಬಂಧಪಟ್ಟ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ ಬಿ.ಎಡ್. ಪದವಿ ಪಡದಿರಬೇಕು. ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬೋಧನೆ ಮಾಡುವ ಕುಶಲತೆ ಹೊಂದಿರಬೇಕು.

ನುರಿತ ಪದವಿ ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯೋಮಿತ 35 ವರ್ಷದೊಳಗಿರಬೇಕು, ಶೇ. 50 ಅಂಕಗಳೋಂದಿಗೆ ಸಂಬಂಧಪಟ್ಟ ವಿಷಯಗಳಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಬಿ.ಎಡ್. ಪದವಿ ಪಡದಿರಬೇಕು. ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬೋಧನೆ ಮಾಡುವ ಕುಶಲತೆ ಹೊಂದಿರಬೇಕು.
ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯೋಮಿತ 30 ವರ್ಷದೊಳಗಿರಬೇಕು, ಶೇ. 50 ಅಂಕಗಳೋಂದಿಗೆ ಪಿ.ಯು.ಸಿ., ಜೊತೆಗೆ ಕೇಂದ್ರಿಯ ಶಿಕ್ಷಕರ ಅರ್ಹತಾ ಪರೀಕ್ಷೆ ತೇರ್ಗಡೆಯಾಗಿರಬೇಕು. ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬೋಧನೆ ಮಾಡುವ ಕುಶಲತೆ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅರ್ಜಿ ಸಲ್ಲಿಸಲು 17-10-2016 ಕೊನೆಯ ದಿನಾಂಕವಾಗಿರುತ್ತದೆ. ಅಲ್ಲದೆಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಲಿಕೆ ಇರುತ್ತದೆ.
ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ : ಕೇಂದ್ರಿಯ ವಿದ್ಯಾಲಯ ಸಂಘಟನೆಯ ವೆಬ್ ಸೈಟ್ http://kvmysore.ac.in/ ಅಥವಾ ಉಪಮುಖ್ಯಸ್ಥರು, ವಿಶ್ವ ವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತುಮಾರ್ಗದರ್ಶನ ಕೇಂದ್ರ, ಮಾನಸಗಂಗೋತ್ರಿ, ಮೈಸೂರು ಇವರನ್ನು ಸಂಪರ್ಕಿಸಬಹುದು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications