ಶಿವಮೊಗ್ಗ; ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, ಆಗಸ್ಟ್ 25: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಇಲಾಖೆಯಲ್ಲಿ ಬಹುದಿನಗಳಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರವಳಿಕೆ ತಜ್ಞ-1, ಇಎನ್ ಟಿ-1, ವೈದ್ಯರು (ಎಂ.ಎಚ್., ಎನ್.ಎನ್.ಸಿ.ಯು. ಹಾಗೂ ರಕ್ತ ಸಂಗ್ರಹಣೆ ಮತ್ತು ವಿತರಣೆ)-4, ವೈದ್ಯರು (ಆರ್.ಬಿ.ಎಸ್.ಕೆ.)-3, ಆಡಿಯೋಮೆಟ್ರಿಕ್ ಅಸಿಸ್ಟೆಂಟ್-1, ನೇತ್ರಸಹಾಯಕರು-1, ಕೌನ್ಸಿಲರ್-1, ಶುಶ್ರೂಷಕಿಯರು-8 ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು (ಎ.ಎನ್.ಎಂ.)-4 ಹುದ್ದೆಗಳಿದ್ದು, ನಿಯಮಾನುಸಾರ ವಿದ್ಯಾರ್ಹತೆ ಹಾಗೂ ತರಬೇತಿ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ತಜ್ಞ ವೈದ್ಯರು ಆನ್ ಕಾಲ್ ಬೇಸಿಸ್ ಮೇಲೆ ಖಾಸಗಿ ಸಂಸ್ಥೆ, ಸ್ವಾಯತ್ತ ಸಂಸ್ಥೆ ಮತ್ತು ನಿವೃತ್ತ ತಜ್ಞರ ಸೇವೆಯನ್ನು ಪಡೆಯುವುದಕ್ಕಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ತಾ.ಆಸ್ಪತ್ರೆ ಹಾಗೂ ಸಮುದಾಯ ಆಸ್ಪತ್ರೆಯಲ್ಲಿ ಸೇವೆ ಪಡೆಯುವುದಕ್ಕಾಗಿ ಅಥವಾ ಪೂರ್ಣಪ್ರಮಾಣದ ಸೇವೆ ನೀಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ತಜ್ಞವೈದ್ಯರು, ಮತ್ತು ವೈದ್ಯರು 70 ವರ್ಷಕ್ಕಿಂತ ಕಡಿಮೆ ವಯೋಮಾನದವರಾಗಿರಬೇಕು. ಎಲ್ಲಾ ಕರ್ತವ್ಯಗಳನ್ನು ನಿಭಾಯಿಸಲು ಅರ್ಹರಿದ್ದು, ದೈಹಿಕ ಮತ್ತು ಕೆ.ಎಎಂ.ಸಿ.ಯೇ ನೋಂದಣಿ ಹೊಂದಿರಬೇಕು. ಸರ್ಕಾರದ ಮಾರ್ಗಸೂಚಿ ಹಾಗೂ ಎನ್.ಹೆಚ್.ಎಂ., ಎನ್.ಯು.ಹೆಚ್.ಎಂ. ಮಾರ್ಗಸೂಚಿಯಂತೆ ಹುದ್ದೆಗೆ ಪ್ರತ್ಯೇಕ ವಯೋಮಿತಿ ಪರಿಗಣಿಸಲಾಗುವುದು.
ಹುದ್ದೆಗಳನ್ನು ಕಡಿತಗೊಳಿಸುವುದು ಹಾಗೂ ಹೆಚ್ಚಿಸುವುದು ಅಥವಾ ತಿರಸ್ಕರಿಸುವ ವಿಷಯಗಳಲ್ಲಿ ಜಿಲ್ಲಾ ಆರೋಗ್ಯ ಸಂಘದ ನಿರ್ಣಯವೇ ಅಂತಿಮವಾಗಿರುತ್ತದೆ. ಶುಶ್ರೂಷಕಿಯರು, ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ನೇತ್ರ ಸಹಾಯಕರ ಹುದ್ದೆಯ ಮೂಲ ದಾಖಲಾತಿಗಳ ಪರಿಶೀಲನೆಯು ಸೆಪ್ಟೆಂಬರ್ 3 ರಂದು ಹಾಗೂ ವೈದ್ಯರ ಹುದ್ದೆ ಆಕಾಂಕ್ಷಿಗಳ ದಾಖಲಾತಿಗಳ ಪರಿಶೀಲನೆಯು ಸೆಪ್ಟೆಂಬರ್ 4ರಂದು ನಡೆಯಲಿದೆ. ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-298172ನ್ನು ಸಂಪರ್ಕಿಸಬಹುದು. ನೇಮಕಾತಿಯು ಅಭ್ಯರ್ಥಿಯು ಹೊಂದಿರುವ ಅಂಕಗಳು ಹಾಗೂ ಮೀಸಲಾತಿಯನ್ವಯ ನಡೆಯಲಿದೆ.
ಅರ್ಹರು ತಮ್ಮ ಪ್ರಸ್ತಾವನೆಯೊಂದಿಗೆ ಹುದ್ದೆಯ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, 5ವರ್ಷಗಳ ಅನುಭವ ಪ್ರಮಾಣಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣಪತ್ರ, ಖಾಯಂ ವಿಳಾಸ ಮತ್ತು ಸ್ವವಿವರಗಳನ್ನು ಆಗಸ್ಟ್ 31ರೊಳಗಾಗಿ ಸಲ್ಲಿಸಬೇಕು.
ನಿಗದಿತ ನಮೂನೆಯ ಅರ್ಜಿಯನ್ನು ಎನ್.ಎಚ್.ಎಂ. ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿ.ಎಚ್.ರಸ್ತೆ, ಶಿವಮೊಗ್ಗ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವಂತೆ ಜಿಲ್ಲಾ ಆರ್.ಸಿ.ಎಚ್.ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications