ಶಿವಮೊಗ್ಗ: ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ, ಭಾಗವಹಿಸಿ
ಶಿವಮೊಗ್ಗ, ನವೆಂಬರ್ 20: ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಕ್ಕೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಅವಧಿಗೆ ಎನ್.ಹೆಚ್.ಎಂ. ನಿಬಂಧನೆಗಳಿಗೆ ಒಳಪಟ್ಟು ಕಾರ್ಯನಿರ್ವಹಿಸಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳಿಂದ ಸೈಕಿಯಾಟ್ರಿಸ್ಟ್, ಸೈಕಿಯಾಟ್ರಿಸ್ಟ್ ನರ್ಸ್ ಮತ್ತು ಕಮ್ಯುನಿಟಿ ನರ್ಸ್ ತಲಾ ಒಂದು ಹುದ್ದೆಗೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸೈಕಿಯಾಟ್ರಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯು ಭಾರತೀಯ ವೈದ್ಯಕೀಯ ಪರಿಷತ್ತಿನಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಎಂ.ಬಿ.ಬಿ.ಎಸ್ ಪದವಿ, ಮನೋವೈದ್ಯ ಶಾಸ್ತ್ರದಲ್ಲಿ ಎಂ.ಡಿ, ಡಿ.ಎನ್.ಬಿ, ಡಿ.ಪಿ.ಎಂ ಪದವಿ ಪಡೆದವರಾಗಿರಬೇಕು.
ಆಸ್ಪತ್ರೆಯಲ್ಲಿ ಮನೋವೈದ್ಯರಾಗಿ ಕಾರ್ಯನಿರ್ವಹಿಸಿದ 2 ವರ್ಷಗಳ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕವಾಗಿ 1.10,000/-ರೂ.ಗಳ ವೇತನ ನೀಡಲಾಗುವುದು.

ಸೈಕಿಯಾಟ್ರಿಸ್ಟ್ ನರ್ಸ್ ಮತ್ತು ಕಮ್ಯುನಿಟಿ ನರ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ನರ್ಸಿಂಗ್ ಕೌನ್ಸಿಲ್ ಆಫ್ ಇಂಡಿಯಾ ಮಾನ್ಯತೆ ಪಡೆದ ಸಂಸ್ಥೆಯಿಂದ ಬಿ.ಎಸ್ಸಿ, ನರ್ಸಿಂಗ್ನಲ್ಲಿ ಪದವಿ ಅಥವಾ ತತ್ಸಮಾನ ಪದವಿ ಹೊಂದಿದವರಾಗಿರಬೇಕು.
ಈ ಪದವಿಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಜನರಲ್ ನರ್ಸಿಂಗ್ ಮ್ತು ಮಿಡ್ವೈಫರಿ ಅನ್ನು ಪರಿಗಣಿಸಲಾಗುವುದು. ಈ ಹುದ್ದೆಗೆ ಮಾನಸಿಕ ಆರೋಗ್ಯ ಸಂಸ್ಥೆ ಅಥವಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದ 2 ವರ್ಷಗಳ ಅನುಭವ ಹೊಂದಿರಬೇಕು.
ತಜ್ಞವೈದ್ಯರು, ವೈದ್ಯರು 65 ವರ್ಷಕ್ಕಿಂತ ಕಡಿಮೆ ಇದ್ದು, ದೈಹಿಕವಾಗಿ ಎಲ್ಲಾ ಕರ್ತವ್ಯಗಳನ್ನು ನಿರ್ವಹಿಸಲು ಅರ್ಹರಿರಬೇಕು. ಅದಕ್ಕಾಗಿ ದೈಹಿಕ ಸದೃಢರಾಗಿರುವ ಬಗ್ಗೆ ಪ್ರಮಾಣಪತ್ರ ಒದಗಿಸಬೇಕು. ಕೆ.ಎಂ.ಸಿಯ ನೋಂದಣಿ ಹೊಂದಿರಬೇಕು.
ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಸ್ವಯಂ ದೃಢೀಕೃತ ಝೆರಾಕ್ಸ್ ಪ್ರತಿಯೊಂದಿಗೆ ಪಾಸ್ಪೋರ್ಟ್ ಆಕಾರದ ಭಾವಚಿತ್ರ, ಸ್ವವಿವರದ ಅರ್ಜಿ, ಹಾಗೂ ಸೇವಾನುಭವ ದಾಖಲೆಗಳೊಂದಿಗೆ ನವೆಂಬರ್ 23 ರಂದು ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 10.30 ರಿಂದ ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications