ಶಿವಮೊಗ್ಗ: ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ, ಭಾಗವಹಿಸಿ
ಶಿವಮೊಗ್ಗ, ನವೆಂಬರ್ 20: ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಕ್ಕೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಅವಧಿಗೆ ಎನ್.ಹೆಚ್.ಎಂ. ನಿಬಂಧನೆಗಳಿಗೆ ಒಳಪಟ್ಟು ಕಾರ್ಯನಿರ್ವಹಿಸಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳಿಂದ ಸೈಕಿಯಾಟ್ರಿಸ್ಟ್, ಸೈಕಿಯಾಟ್ರಿಸ್ಟ್ ನರ್ಸ್ ಮತ್ತು ಕಮ್ಯುನಿಟಿ ನರ್ಸ್ ತಲಾ ಒಂದು ಹುದ್ದೆಗೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸೈಕಿಯಾಟ್ರಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯು ಭಾರತೀಯ ವೈದ್ಯಕೀಯ ಪರಿಷತ್ತಿನಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಎಂ.ಬಿ.ಬಿ.ಎಸ್ ಪದವಿ, ಮನೋವೈದ್ಯ ಶಾಸ್ತ್ರದಲ್ಲಿ ಎಂ.ಡಿ, ಡಿ.ಎನ್.ಬಿ, ಡಿ.ಪಿ.ಎಂ ಪದವಿ ಪಡೆದವರಾಗಿರಬೇಕು.
ಆಸ್ಪತ್ರೆಯಲ್ಲಿ ಮನೋವೈದ್ಯರಾಗಿ ಕಾರ್ಯನಿರ್ವಹಿಸಿದ 2 ವರ್ಷಗಳ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕವಾಗಿ 1.10,000/-ರೂ.ಗಳ ವೇತನ ನೀಡಲಾಗುವುದು.

ಸೈಕಿಯಾಟ್ರಿಸ್ಟ್ ನರ್ಸ್ ಮತ್ತು ಕಮ್ಯುನಿಟಿ ನರ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ನರ್ಸಿಂಗ್ ಕೌನ್ಸಿಲ್ ಆಫ್ ಇಂಡಿಯಾ ಮಾನ್ಯತೆ ಪಡೆದ ಸಂಸ್ಥೆಯಿಂದ ಬಿ.ಎಸ್ಸಿ, ನರ್ಸಿಂಗ್ನಲ್ಲಿ ಪದವಿ ಅಥವಾ ತತ್ಸಮಾನ ಪದವಿ ಹೊಂದಿದವರಾಗಿರಬೇಕು.
ಈ ಪದವಿಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಜನರಲ್ ನರ್ಸಿಂಗ್ ಮ್ತು ಮಿಡ್ವೈಫರಿ ಅನ್ನು ಪರಿಗಣಿಸಲಾಗುವುದು. ಈ ಹುದ್ದೆಗೆ ಮಾನಸಿಕ ಆರೋಗ್ಯ ಸಂಸ್ಥೆ ಅಥವಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದ 2 ವರ್ಷಗಳ ಅನುಭವ ಹೊಂದಿರಬೇಕು.
ತಜ್ಞವೈದ್ಯರು, ವೈದ್ಯರು 65 ವರ್ಷಕ್ಕಿಂತ ಕಡಿಮೆ ಇದ್ದು, ದೈಹಿಕವಾಗಿ ಎಲ್ಲಾ ಕರ್ತವ್ಯಗಳನ್ನು ನಿರ್ವಹಿಸಲು ಅರ್ಹರಿರಬೇಕು. ಅದಕ್ಕಾಗಿ ದೈಹಿಕ ಸದೃಢರಾಗಿರುವ ಬಗ್ಗೆ ಪ್ರಮಾಣಪತ್ರ ಒದಗಿಸಬೇಕು. ಕೆ.ಎಂ.ಸಿಯ ನೋಂದಣಿ ಹೊಂದಿರಬೇಕು.
ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಸ್ವಯಂ ದೃಢೀಕೃತ ಝೆರಾಕ್ಸ್ ಪ್ರತಿಯೊಂದಿಗೆ ಪಾಸ್ಪೋರ್ಟ್ ಆಕಾರದ ಭಾವಚಿತ್ರ, ಸ್ವವಿವರದ ಅರ್ಜಿ, ಹಾಗೂ ಸೇವಾನುಭವ ದಾಖಲೆಗಳೊಂದಿಗೆ ನವೆಂಬರ್ 23 ರಂದು ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 10.30 ರಿಂದ ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications