ಕರ್ನಾಟಕ ವಲಯದಲ್ಲಿ 183 ಎಸ್ಎಸ್ಸಿ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಮೇ 16 : ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಡಿ ಕಾರ್ಯನಿರ್ವಹಿಸುವ ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ಕರ್ನಾಟಕ-ಕೇರಳ ವಲಯದಲ್ಲಿನ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ-ಕೇರಳ ವಲಯದಲ್ಲಿ ಅಸಿಸ್ಟಂಟ್, ಜೂನಿಯರ್ ಎಂಜಿನಿಯರ್, ಡ್ರಾಫ್ಟ್ಸ್ ಮನ್, ಟೆಕ್ಸ್ ಟೈಲ್ ಡಿಸೈನಲ್, ಲೇಡಿ ಮೆಡಿಕಲ್ ಅಟೆಂಡಂಟ್ ಸೇರಿದಂತೆ 20ಕ್ಕೂ ಹೆಚ್ಚು ವಿಭಾಗಗಳಲ್ಲಿ 183 ಹುದ್ದೆ ಖಾಲಿಯಿದ್ದು, ಅಭ್ಯರ್ಥಿಗಳು ಜೂನ್ 7ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ: ಎಸ್ಎಸ್ಸಿ (183)
ವಿದ್ಯಾರ್ಹತೆ: ಪದವಿ, ಪಿಯುಸಿ ಸೇರಿದಂತೆ ಹುದ್ದೆಗಳ ಅನ್ವಯ ವಿದ್ಯಾರ್ಹತೆ ನಿಗದಿಯಾಗಿದೆ.
ವೇತನ ಶ್ರೇಣಿ: 9300 ರಿಂದ 34800 ರು. ತಿಂಗಳಿಗೆ.

ವಯೋಮಿತಿ: ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ಅನ್ವಯ ವಯೋಮಿತಿ ಬದಲಾವಣೆಯಿದೆ. ನಿಗದಿತ ವಯೋಮಿತಿಯಲ್ಲಿ ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷ ಸಡಿಲಿಕೆಯಿದೆ.
ಅರ್ಜಿ ಸಲ್ಲಿಕೆ: ಎಸ್ಎಸ್ ಸಿ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಅರ್ಜಿ ಭರ್ತಿ ನಂತರ 100 ರು. ಪರೀಕ್ಷಾ ಶುಲ್ಕ ಪಾವತಿಸಬೇಕು. ಎಸ್ಸಿ, ಎಸ್ಟಿ, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಭರ್ತಿ ಮಾಡಿದ ಅರ್ಜಿ ಪ್ರತಿ ಹಾಗೂ ಫೋಟೋ ಸೇರಿದಂತೆ ಅಗತ್ಯ ದಾಖಲೆಯೊಂದಿಗೆ ಎಸ್ಎಸ್ ಸಿ ವಲಯ ಕಚೇರಿಗೆ ತಲುಪಿಸಬೇಕು.
ವಿಳಾಸ: The Regional Director, Staff Selection Commission, Karnataka Kerala Region, 1st Floor „E‟ Wing, Kendriya Sadan, Koramangala,BENGALURU - 560 034.
ಪರೀಕ್ಷೆ: ಕಂಪ್ಯೂಟರ್ ಆಧಾರಿತ ಬಹು ಆಯ್ಕೆ ಮಾದರಿ ಪರೀಕ್ಷೆಯಲ್ಲಿ ಗಳಿಸುವ ಅಂಕಗಳನ್ನು ಪರಿಗಣಿಸಿ ಮುಂದಿನ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.
ಇಲ್ಲಿ ಕ್ಲಿಕ್ ಮಾಡಿ ಇನ್ನು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಿ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications