ಕರ್ನಾಟಕ ವಲಯದಲ್ಲಿ 183 ಎಸ್ಎಸ್ಸಿ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಮೇ 16 : ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಡಿ ಕಾರ್ಯನಿರ್ವಹಿಸುವ ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ಕರ್ನಾಟಕ-ಕೇರಳ ವಲಯದಲ್ಲಿನ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ-ಕೇರಳ ವಲಯದಲ್ಲಿ ಅಸಿಸ್ಟಂಟ್, ಜೂನಿಯರ್ ಎಂಜಿನಿಯರ್, ಡ್ರಾಫ್ಟ್ಸ್ ಮನ್, ಟೆಕ್ಸ್ ಟೈಲ್ ಡಿಸೈನಲ್, ಲೇಡಿ ಮೆಡಿಕಲ್ ಅಟೆಂಡಂಟ್ ಸೇರಿದಂತೆ 20ಕ್ಕೂ ಹೆಚ್ಚು ವಿಭಾಗಗಳಲ್ಲಿ 183 ಹುದ್ದೆ ಖಾಲಿಯಿದ್ದು, ಅಭ್ಯರ್ಥಿಗಳು ಜೂನ್ 7ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ: ಎಸ್ಎಸ್ಸಿ (183)
ವಿದ್ಯಾರ್ಹತೆ: ಪದವಿ, ಪಿಯುಸಿ ಸೇರಿದಂತೆ ಹುದ್ದೆಗಳ ಅನ್ವಯ ವಿದ್ಯಾರ್ಹತೆ ನಿಗದಿಯಾಗಿದೆ.
ವೇತನ ಶ್ರೇಣಿ: 9300 ರಿಂದ 34800 ರು. ತಿಂಗಳಿಗೆ.

ವಯೋಮಿತಿ: ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ಅನ್ವಯ ವಯೋಮಿತಿ ಬದಲಾವಣೆಯಿದೆ. ನಿಗದಿತ ವಯೋಮಿತಿಯಲ್ಲಿ ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷ ಸಡಿಲಿಕೆಯಿದೆ.
ಅರ್ಜಿ ಸಲ್ಲಿಕೆ: ಎಸ್ಎಸ್ ಸಿ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಅರ್ಜಿ ಭರ್ತಿ ನಂತರ 100 ರು. ಪರೀಕ್ಷಾ ಶುಲ್ಕ ಪಾವತಿಸಬೇಕು. ಎಸ್ಸಿ, ಎಸ್ಟಿ, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಭರ್ತಿ ಮಾಡಿದ ಅರ್ಜಿ ಪ್ರತಿ ಹಾಗೂ ಫೋಟೋ ಸೇರಿದಂತೆ ಅಗತ್ಯ ದಾಖಲೆಯೊಂದಿಗೆ ಎಸ್ಎಸ್ ಸಿ ವಲಯ ಕಚೇರಿಗೆ ತಲುಪಿಸಬೇಕು.
ವಿಳಾಸ: The Regional Director, Staff Selection Commission, Karnataka Kerala Region, 1st Floor „E‟ Wing, Kendriya Sadan, Koramangala,BENGALURU - 560 034.
ಪರೀಕ್ಷೆ: ಕಂಪ್ಯೂಟರ್ ಆಧಾರಿತ ಬಹು ಆಯ್ಕೆ ಮಾದರಿ ಪರೀಕ್ಷೆಯಲ್ಲಿ ಗಳಿಸುವ ಅಂಕಗಳನ್ನು ಪರಿಗಣಿಸಿ ಮುಂದಿನ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.
ಇಲ್ಲಿ ಕ್ಲಿಕ್ ಮಾಡಿ ಇನ್ನು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಿ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ












Click it and Unblock the Notifications