ಉದ್ಯೊಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ
ದಾವಣಗೆರೆ, ಫೆಬ್ರವರಿ19: ಉದ್ಯೊಗಾಕಾಂಕ್ಷಿಗಳಿಗೆ ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇಂಧನ ಇಲಾಖೆಯಿಂದ ಈಗಾಗಲೇ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಗುಣಮಟ್ಟವನ್ನು ಇನ್ನಷ್ಟು ಸುಧಾರಿಸಲು ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ (ಲೈನ್ ಮೆನ್) ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು, 3 ಲಕ್ಷ ಅರ್ಜಿಗಳು ಸ್ವೀಕೃತವಾಗಿವೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಅರ್ಜಿಗಳ ಪರಿಶೀಲನಾ ಹಂತ ಮುಗಿದಿದ್ದು 1:5 ರನ್ವಯ ದೈಹಿಕ ಪರೀಕ್ಷೆಗೆ ಆಯ್ಕೆ ಮಾಡಲಾಗುವುದು. ಬಳಿಕ ಪಾರದರ್ಶಕವಾಗಿ ಮೀಸಲು ಹಾಗೂ ಅಂಕಗಳ ಆಧಾರದ ಮೇಲೆ ಏಪ್ರಿಲ್ ಒಳಗಾಗಿ ನೇಮಕ ನಡೆಯಲಿದೆ. ಆದರೆ, ಆಕಾಂಕ್ಷಿಗಳು ಯಾವುದೇ ಮಧ್ಯವರ್ತಿಗಳ ಬಳಿ ಹಣಕೊಟ್ಟು ಕಳೆದುಕೊಳ್ಳಬೇಡಿ. ಯಾರಾದರೂ ಆಮಿಷವೊಡ್ಡಿದಲ್ಲಿ ಇಲಾಖೆ ಗಮನಕ್ಕೆ ತರಬೇಕು ಎಂದು ತಿಳಿಸಿದರು.

ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ಹಾಗೂ ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವುದು ಸರ್ಕಾರದ ನೀತಿಯಾಗಿದ್ದು, ಇದಕ್ಕೆ ಬದ್ದವಾಗಿ ವಿದ್ಯುತ್ ನೀಡಲಾಗುತ್ತಿದೆ. ರಾಜ್ಯದಲ್ಲಿ ಈ ವರ್ಷ ವಿದ್ಯುತ್ ಕೊರತೆ ಇಲ್ಲ. ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವು ಪ್ರದೇಗಳಲ್ಲಿ ನಿರ್ವಹಣಾ ಕಾರ್ಯಗಳಿಗಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆಯೇ ಹೊರತು ಲೋಡ್ ಶೆಡ್ಡಿಂಗ್ ಇಲ್ಲ. ಸರ್ಕಾರದ ಬದ್ದತೆಯಂತೆ ಸಮರ್ಪಕ ವಿದ್ಯುತ್ ಪೂರೈಕೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ರಾಜ್ಯದಲ್ಲಿ ಪ್ರತಿನಿತ್ಯ 18,500 ಮೆಗಾವ್ಯಾಟ್ ಬೇಡಿಕೆ ಇದ್ದು, ಬೇಸಿಗೆ ಆರಂಭವಾಗಿರುವುದರಿಂದ ಸರಾಸರಿಗಿಂತ ಶೇ. 10 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಮತ್ತು ಉತ್ತರ ಪ್ರದೇಶಗಳಿಂದ ವಿನಿಮಯ ಆಧಾರದಲ್ಲಿ ವಿದ್ಯುತ್ ಪಡೆಯಲಾಗುತ್ತಿದೆ. ರಾಜ್ಯಲ್ಲಿ ವಿದ್ಯುತ್ ಬೇಡಿಕೆ ಕುಸಿದಾಗ ಅಂದರೆ ಜೂನ್ನಿಂದ ಆ ರಾಜ್ಯಗಳಿಗೆ ವಿದ್ಯುತ್ ವಾಪಸ್ ನೀಡಾಗುತ್ತದೆ. ಅದಕ್ಕಾಗಿ ಅಲ್ಲಿಂದ ಗ್ರಿಡ್ ಮೂಲಕ ವಿದ್ಯುತ್ ಪಡೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಗುಣಮಟ್ಟದ ವೋಲ್ಟೇಜ್ಗಾಗಿ ಅಗತ್ಯವಿರುವ ಕಡೆ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಅಗತ್ಯ ಇರುವ ಕಡೆ ಸ್ಥಾಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕುಸುಮ್- ಸಿ ಯೋಜನೆಯಡಿ ಮುಂದಿನ ಒಂದೂವರೆ ವರ್ಷದಲ್ಲಿ ಫೀಡರ್ ಸೋಲರೈಸೇಷನ್ ಮೂಲಕ 3,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಲಾಗಿದೆ. ಈಗಾಗಲೇ ಈ ಕಾಮಗಾರಿಗೆ ವಿವಿಧ ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿದ್ದು, ಸೋಲಾರ್ ಪ್ಯಾನಲ್ ಅಳವಡಿಕೆ, ವಿದ್ಯುತ್ ಉತ್ಪಾದನೆ ಹಂತ, ಭೂಮಿ ಸಮತಟ್ಟು ಮಾಡುವ ಕೆಲಸ ಪ್ರಗತಿಯಲ್ಲಿದೆ. ಬರುವ ಏಪ್ರಿಲ್ನಲ್ಲಿ 300 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಗ್ರಿಡ್ಗೆ ಕಳುಹಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ದಾವಣಗೆರೆ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 4,33,897 ಆರ್.ಆರ್.ಸಂಖ್ಯೆಗಳು ನೋದಣಿಯಾಗಿದ್ದು, ವಿದ್ಯುತ್ ಸಂಪರ್ಕ ಪಡೆದ ಸ್ಥಾವರಗಳಲ್ಲಿ ಶೇ 88.93 ರಷ್ಟು ಈ ಯೋಜನೆಯಡಿ ಇದೆ. ಈ ಸ್ಥಾವರಗಳಿಗೆ 2023 ರ ಆಗಸ್ಟ್ ನಿಂದ 2024 ರ ಡಿಸೆಂಬರ್ ಅಂತ್ಯದವರೆಗೆ 309 ಕೋಟಿ ರೂ. ಮೊತ್ತದ ವಿದ್ಯುತ್ತನ್ನು ಗ್ರಾಹಕರಿಗೆ ಉಚಿತವಾಗಿ ನೀಡಲಾಗಿದೆ ಎಂದು ಹೇಳಿದರು
ದಾವಣಗೆರೆ ಜಿಲ್ಲೆ ಆನಗೋಡು, ಮಾಯಕೊಂಡ ಭಾಗದಲ್ಲಿ 3 ಅಥವಾ 4 ಗಂಟೆಗಳ ಕಾಲ ಮಾತ್ರ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ನೀಡಲಾಗುತ್ತದೆ ಎಂದು ಶಾಸಕರಾದ ಕೆ.ಎಸ್.ಬಸವಂತಪ್ಪ ಪ್ರಸ್ತಾಪಿಸಿದಾಗ, ಎಲ್ಲಾ ರೈತರಿಗೂ ದಿನದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸರ್ಕಾರದ ನೀತಿಯಾಗಿದ್ದು, ಅದರಂತೆ ಬೆಸ್ಕಾಂ ಕ್ರಮ ಕೈಗೊಳ್ಳಬೇಕು. ಓವರ್ ಲೋಡಿಂಗ್ ಆದರೆ ಅದನ್ನು ಬೇರೆಡೆ ವರ್ಗಾಯಿಸಿ 7 ಗಂಟೆ ಕೃಷಿ ಪಂಪ್ಸೆಟ್ಗೆ ವಿದ್ಯುತ್ ನೀಡಲೇಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications