ಟೆಕ್ ಮಹೀಂದ್ರಾದಿಂದ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ
ಬೆಂಗಳೂರು, ಏಪ್ರಿಲ್, 26: ಇದೀಗ ದೊಡ್ಡ ಕಂಪನಿಗಳಲ್ಲಿ ಉದ್ಯೋಗಿಗಳನ್ನು ವಜಾಗೊಳಿಸುವ ಕಾರ್ಯ ನಡೆಯುತ್ತಿದೆ. ಆದರೆ ಇದರ ನಡುವೆಯೇ ಇದೀಗ ಟೆಕ್ ಮಹೀಂದ್ರಾ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಮಾಹಿತಿ ಇಲ್ಲಿ ತಿಳಿಯಿರಿ.
ಐಟಿ ಸೇವೆಗಳ ದೈತ್ಯ ಟೆಕ್ ಮಹೀಂದ್ರಾ 2023-24ರ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ನಿವ್ವಳ ಲಾಭದಲ್ಲಿ ವರ್ಷದಿಂದ ವರ್ಷಕ್ಕೆ 40.9% ಕುಸಿತವನ್ನು ವರದಿ ಮಾಡಿದೆ. ಇನ್ನು ನಾಲ್ಕನೇ ತ್ರೈಮಾಸಿಕದಲ್ಲಿ ಕಂಪನಿಯು 661 ಕೋಟಿ ರೂಪಾಯಿಗಳ ನಿವ್ವಳ ಲಾಭವನ್ನು ಪಡೆದಿದೆ.

ಆದರೂ, ವ್ಯಾಪಕ ಉದ್ಯಮದ ಪ್ರವೃತ್ತಿಯನ್ನು ಗಮನದಲ್ಲಿಟ್ಟುಕೊಂಡು, ಪುಣೆ ಪ್ರಧಾನ ಕಚೇರಿ ಹೊಂದಿರುವ ಟೆಕ್ ಮೇಜರ್ ಪ್ರಸಕ್ತ ಹಣಕಾಸು ವರ್ಷದಲ್ಲಿ 6,000 ಫ್ರೆಶರ್ಗಳನ್ನು ನೇಮಕ ಮಾಡಲು ಕ್ಯಾಂಪಸ್ಗಳಿಗೆ ಹೋಗುವುದಾಗಿ ಘೋಷಣೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಾಹಿತಿ ಪ್ರಕಾರ "ನಾವು ಪ್ರತಿ ತ್ರೈಮಾಸಿಕದಲ್ಲಿ 1,500ಕ್ಕೂ ಹೆಚ್ಚು ಹೊಸ ಪದವೀಧರರನ್ನು ಸೆಳೆಯುವಲ್ಲಿ ಮುಂದುವರೆಯುತ್ತಿದ್ದೇವೆ" ಎಂದು ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಮೋಹಿತ್ ಜೋಶಿ ಹೇಳಿದರು. ಅಲ್ಲದೆ, ಇದು ವರ್ಷದಲ್ಲಿ 50,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಕೃತಕ ಬುದ್ಧಿಮತ್ತೆಯ ಬಗ್ಗೆ ತರಬೇತಿ ನೀಡಲಿದೆ ಎಂದು ಹೇಳಿದರು.
ಟೆಕ್ ಮಹೀಂದ್ರಾ ರಚನಾತ್ಮಕ ಬೆಳವಣಿಗೆ, ಕಾರ್ಯಾಚರಣೆ ಮತ್ತು ಸಾಂಸ್ಥಿಕ ಬದಲಾವಣೆಗಳನ್ನು ಒಳಗೊಂಡ ಮಹತ್ವಾಕಾಂಕ್ಷೆಯ ಮಾರ್ಗಸೂಚಿಯನ್ನು ರೂಪಿಸಿದೆ. ಇದು 2026-27ರ ಆರ್ಥಿಕ ವರ್ಷದ ವೇಳೆಗೆ ಕಂಪನಿಯು ತನ್ನ ಸಹವರ್ತಿಗಳ ಸರಾಸರಿ ಟಾಪ್ಲೈನ್ ಬೆಳವಣಿಗೆಯನ್ನು ಹೆಚ್ಚಿದಲು ಸಹಾಯ ಮಾಡುತ್ತದೆ.
ಮಾರ್ಚ್ 31ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಆದಾಯವು ಶೇಕಡಾ 6.2ರಷ್ಟು ವಾರ್ಷಿಕ ಕುಸಿತವನ್ನು ದಾಖಲಿಸಿ 12,871 ಕೋಟಿ ರೂಪಾಯಿಗೆ ತಲುಪಿದೆ. ತ್ರೈಮಾಸಿಕದಲ್ಲಿ ನಿವ್ವಳ ಹೊಸ ಒಪ್ಪಂದದ ಗೆಲುವುಗಳು $500 ಮಿಲಿಯನ್ ಆಗಿವೆ. ಪೂರ್ಣ ಹಣಕಾಸು ವರ್ಷದಲ್ಲಿ ನಿವ್ವಳ ಲಾಭವು ಶೇಕಡಾ 51.2ರಷ್ಟು ಕುಸಿದಿದ್ದು, 4,965 ಕೋಟಿ ರೂಪಾಯಿಗೆ ತಲುಪಿದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications