ಟೆಕ್ ಮಹೀಂದ್ರಾದಿಂದ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ
ಬೆಂಗಳೂರು, ಏಪ್ರಿಲ್, 26: ಇದೀಗ ದೊಡ್ಡ ಕಂಪನಿಗಳಲ್ಲಿ ಉದ್ಯೋಗಿಗಳನ್ನು ವಜಾಗೊಳಿಸುವ ಕಾರ್ಯ ನಡೆಯುತ್ತಿದೆ. ಆದರೆ ಇದರ ನಡುವೆಯೇ ಇದೀಗ ಟೆಕ್ ಮಹೀಂದ್ರಾ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಮಾಹಿತಿ ಇಲ್ಲಿ ತಿಳಿಯಿರಿ.
ಐಟಿ ಸೇವೆಗಳ ದೈತ್ಯ ಟೆಕ್ ಮಹೀಂದ್ರಾ 2023-24ರ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ನಿವ್ವಳ ಲಾಭದಲ್ಲಿ ವರ್ಷದಿಂದ ವರ್ಷಕ್ಕೆ 40.9% ಕುಸಿತವನ್ನು ವರದಿ ಮಾಡಿದೆ. ಇನ್ನು ನಾಲ್ಕನೇ ತ್ರೈಮಾಸಿಕದಲ್ಲಿ ಕಂಪನಿಯು 661 ಕೋಟಿ ರೂಪಾಯಿಗಳ ನಿವ್ವಳ ಲಾಭವನ್ನು ಪಡೆದಿದೆ.

ಆದರೂ, ವ್ಯಾಪಕ ಉದ್ಯಮದ ಪ್ರವೃತ್ತಿಯನ್ನು ಗಮನದಲ್ಲಿಟ್ಟುಕೊಂಡು, ಪುಣೆ ಪ್ರಧಾನ ಕಚೇರಿ ಹೊಂದಿರುವ ಟೆಕ್ ಮೇಜರ್ ಪ್ರಸಕ್ತ ಹಣಕಾಸು ವರ್ಷದಲ್ಲಿ 6,000 ಫ್ರೆಶರ್ಗಳನ್ನು ನೇಮಕ ಮಾಡಲು ಕ್ಯಾಂಪಸ್ಗಳಿಗೆ ಹೋಗುವುದಾಗಿ ಘೋಷಣೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಾಹಿತಿ ಪ್ರಕಾರ "ನಾವು ಪ್ರತಿ ತ್ರೈಮಾಸಿಕದಲ್ಲಿ 1,500ಕ್ಕೂ ಹೆಚ್ಚು ಹೊಸ ಪದವೀಧರರನ್ನು ಸೆಳೆಯುವಲ್ಲಿ ಮುಂದುವರೆಯುತ್ತಿದ್ದೇವೆ" ಎಂದು ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಮೋಹಿತ್ ಜೋಶಿ ಹೇಳಿದರು. ಅಲ್ಲದೆ, ಇದು ವರ್ಷದಲ್ಲಿ 50,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಕೃತಕ ಬುದ್ಧಿಮತ್ತೆಯ ಬಗ್ಗೆ ತರಬೇತಿ ನೀಡಲಿದೆ ಎಂದು ಹೇಳಿದರು.
ಟೆಕ್ ಮಹೀಂದ್ರಾ ರಚನಾತ್ಮಕ ಬೆಳವಣಿಗೆ, ಕಾರ್ಯಾಚರಣೆ ಮತ್ತು ಸಾಂಸ್ಥಿಕ ಬದಲಾವಣೆಗಳನ್ನು ಒಳಗೊಂಡ ಮಹತ್ವಾಕಾಂಕ್ಷೆಯ ಮಾರ್ಗಸೂಚಿಯನ್ನು ರೂಪಿಸಿದೆ. ಇದು 2026-27ರ ಆರ್ಥಿಕ ವರ್ಷದ ವೇಳೆಗೆ ಕಂಪನಿಯು ತನ್ನ ಸಹವರ್ತಿಗಳ ಸರಾಸರಿ ಟಾಪ್ಲೈನ್ ಬೆಳವಣಿಗೆಯನ್ನು ಹೆಚ್ಚಿದಲು ಸಹಾಯ ಮಾಡುತ್ತದೆ.
ಮಾರ್ಚ್ 31ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಆದಾಯವು ಶೇಕಡಾ 6.2ರಷ್ಟು ವಾರ್ಷಿಕ ಕುಸಿತವನ್ನು ದಾಖಲಿಸಿ 12,871 ಕೋಟಿ ರೂಪಾಯಿಗೆ ತಲುಪಿದೆ. ತ್ರೈಮಾಸಿಕದಲ್ಲಿ ನಿವ್ವಳ ಹೊಸ ಒಪ್ಪಂದದ ಗೆಲುವುಗಳು $500 ಮಿಲಿಯನ್ ಆಗಿವೆ. ಪೂರ್ಣ ಹಣಕಾಸು ವರ್ಷದಲ್ಲಿ ನಿವ್ವಳ ಲಾಭವು ಶೇಕಡಾ 51.2ರಷ್ಟು ಕುಸಿದಿದ್ದು, 4,965 ಕೋಟಿ ರೂಪಾಯಿಗೆ ತಲುಪಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications